ಕೆ.ಎಚ್ ಮುನಿಯಪ್ಪ 
ರಾಜ್ಯ

KGF ಗಲಾಟೆ ಪ್ರಕರಣ: ಹಲ್ಲೆ, ಅಟ್ರಾಸಿಟಿ ಕೇಸ್‌ನಲ್ಲಿ ಸಚಿವ ಕೆ.ಹೆಚ್ ಮುನಿಯಪ್ಪಗೆ ಜಾಮೀನು ಮಂಜೂರು!

2013ರ ವಿಧಾನಸಭಾ ಚುನಾವಣೆ ವೇಳೆ ನಡೆದಿದ್ದ ಕೆಜಿಎಫ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಹೆಚ್ ಮುನಿಯಪ್ಪ ಎ1 ಆರೋಪಿಯಾಗಿದ್ದಾರೆ.

ಬೆಂಗಳೂರು: 2013ರ ವಿಧಾನಸಭಾ ಚುನಾವಣೆ ವೇಳೆ ನಡೆದಿದ್ದ ಕೆಜಿಎಫ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಸಚಿವ ಕೆ.ಹೆಚ್ ಮುನಿಯಪ್ಪಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಅಂದು ಕೆಜಿಎಫ್‍ನ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ವಿ.ಶಂಕರ್ ಮೇಲೆ ಅಂದು ಸಂಸದರಾಗಿದ್ದ ಮುನಿಯಪ್ಪ ಹಾಗೂ ಬೆಂಬಲಿಗರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಹಲ್ಲೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಮುನಿಯಪ್ಪ ಗೈರಾಗುತ್ತಿದ್ದರು. ಹೀಗಾಗಿ ವಿಚಾರಣೆಗೆ ಹಾಜರಾಗದಿದ್ದರೆ ಬಂಧನ ವಾರೆಂಟ್ ಹೊರಡಿಸುವುದಾಗಿ ನ್ಯಾಯಮೂರ್ತಿ ಗಜಾನನ ಭಟ್ ಎಚ್ಚರಿಕೆ ನೀಡಿದರು. ಬಳಿಕ ಲಕ್ಷ್ಮೀ ನಾರಾಯಣ್ ಮತ್ತು ಮುನಿಯಪ್ಪ ಇಬ್ಬರೂ ನ್ಯಾಯಾಧೀಶರ ಮುಂದೆ ಹಾಜರಾದರು. ವಿಚಾರಣೆ ವೇಳೆ ನ್ಯಾಯಾಧೀಶರು 50 ಸಾವಿರ ರೂಪಾಯಿ ಶ್ಯೂರಿಟಿಯೊಂದಿಗೆ ಜಾಮೀನು ಮಂಜೂರು ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

SCROLL FOR NEXT