ಸಾಂದರ್ಭಿಕ ಚಿತ್ರ  
ರಾಜ್ಯ

ಪೊಲೀಸ್ ಇಲಾಖೆಯಲ್ಲಿ 18 ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಗೃಹ ಸಚಿವ ಡಾ ಜಿ ಪರಮೇಶ್ವರ್

ಕರ್ನಾಟಕದಲ್ಲಿ ಪೊಲೀಸ್-ಸಾರ್ವಜನಿಕ ಅನುಪಾತವು 1 ಲಕ್ಷ ಜನಸಂಖ್ಯೆಗೆ 165.04 ರಷ್ಟಿದೆ, ಇದು ಪೊಲೀಸ್ ಸಂಶೋಧನೆ ಮತ್ತು ಅಭಿವೃದ್ಧಿ ಬ್ಯೂರೋ (BPR and D) ಪ್ರಕಾರ ರಾಷ್ಟ್ರೀಯ ಸರಾಸರಿ 196.88 ಕ್ಕೆ ಹೋಲಿಸಿದರೆ ತುಂಬಾ ಕಡಿಮೆಯಾಗಿದೆ.

ಬೆಂಗಳೂರು: ಇತ್ತೀಚಿಗೆ ಹಂಪಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವು ರಾಜ್ಯ ಪೊಲೀಸ್ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಪ್ರಶ್ನೆ ಮಾಡುವಂತೆ ಮಾಡಿರುವುದರ ನಡುವೆ ಪೊಲೀಸ್ ಇಲಾಖೆಯಲ್ಲಿ 18,581 ಹುದ್ದೆಗಳು ಖಾಲಿ ಇವೆ ಎಂಬ ಮಾಹಿತಿ ಹೊರಬಿದ್ದಿದೆ. ಪೊಲೀಸ್ ಇಲಾಖೆಯಲ್ಲಿ 1,11,330 ಅನುಮೋದಿತ ಹುದ್ದೆ ಇದ್ದು, ಅವುಗಳ ಪೈಕಿ ಶೇಕಡಾ 16.69ರಷ್ಟು ಸಿಬ್ಬಂದಿ ಕೊರತೆ ಇದೆ.

ಕರ್ನಾಟಕದಲ್ಲಿ ಪೊಲೀಸ್-ಸಾರ್ವಜನಿಕ ಅನುಪಾತವು 1 ಲಕ್ಷ ಜನಸಂಖ್ಯೆಗೆ 165.04 ರಷ್ಟಿದೆ. ಇದು ಪೊಲೀಸ್ ಸಂಶೋಧನೆ ಮತ್ತು ಅಭಿವೃದ್ಧಿ ಬ್ಯೂರೋ (BPR and D) ಪ್ರಕಾರ ರಾಷ್ಟ್ರೀಯ ಸರಾಸರಿ 196.88 ಕ್ಕೆ ಹೋಲಿಸಿದರೆ ತುಂಬಾ ಕಡಿಮೆಯಾಗಿದೆ.

ಪ್ರಸ್ತುತ, ಪೊಲೀಸ್ ಪಡೆಯಲ್ಲಿ ಅನುಮೋದಿತ ಹುದ್ದೆ 1,11,330 ರಷ್ಟಿದ್ದು, ವಾಸ್ತವಿಕ ಬಲ 92,749 ರಷ್ಟಿದೆ. ಅಧಿಕೃತ ಮಾಹಿತಿಯ ಪ್ರಕಾರ, 6,591 ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳು ಮತ್ತು 819 ಹೆಡ್ ಕಾನ್‌ಸ್ಟೆಬಲ್ ಹುದ್ದೆಗಳು ಖಾಲಿ ಉಳಿದಿವೆ. ಹೆಚ್ಚುವರಿಯಾಗಿ, 2,107 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ನಗರ ಸಶಸ್ತ್ರ ಮೀಸಲು/ಜಿಲ್ಲಾ ಸಶಸ್ತ್ರ ಮೀಸಲು) ಮತ್ತು 3,830 ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ (ಕರ್ನಾಟಕ ರಾಜ್ಯ ಮೀಸಲು ಪೊಲೀಸ್) ಹುದ್ದೆಗಳು ಭರ್ತಿಯಾಗಿಲ್ಲ.

ಮಂಗಳವಾರ ನಡೆದ ವಿಧಾನಸಭೆ ಅಧಿವೇಶನದಲ್ಲಿ ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ ಸಿಎನ್ ಕೇಳಿದ ಪ್ರಶ್ನೆಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಈ ವಿವರಗಳನ್ನು ನೀಡಿದರು. ಈ ಖಾಲಿ ಹುದ್ದೆಗಳ ಭರ್ತಿ ಕುರಿತು ಮಾತನಾಡಿದ ಅವರು, 600 ಸಬ್-ಇನ್ಸ್‌ಪೆಕ್ಟರ್‌ಗಳು ಸೇರಿದಂತೆ 4,115 ಪೊಲೀಸ್ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ. ಅದಕ್ಕೆ ನೇಮಕಾತಿ ಅಧಿಸೂಚನೆಯನ್ನು ಇನ್ನೂ ಹೊರಡಿಸಲಾಗಿಲ್ಲ ಎಂದು ಹೇಳಿದರು.

ಸಿಬ್ಬಂದಿ ಕೊರತೆಯು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ, ಸಾರ್ವಜನಿಕ ಸುರಕ್ಷತೆಯನ್ನು ಖಾತ್ರಿಪಡಿಸುವಲ್ಲಿ ವಿವಿಧ ಸವಾಲುಗಳಿಗೆ ಕಾರಣವಾಗುತ್ತದೆ. ಇದು ಈಗಿರುವ ಸಿಬ್ಬಂದಿ ಮೇಲೆ ಹೆಚ್ಚಿನ ಕೆಲಸದ ಒತ್ತಡವನ್ನುಂಟು ಮಾಡುತ್ತದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT