ಡಿ.ಕೆ.ಶಿವಕುಮಾರ್ 
ರಾಜ್ಯ

ಭದ್ರಾ ಮೇಲ್ದಂಡೆ ಯೋಜನೆ: ಆರು ತಿಂಗಳಿನಲ್ಲಿ ಕಾಮಗಾರಿ ಮುಗಿಸಿ ನೀರು ಹರಿಸಲು ಚಿಂತನೆ- ಡಿ.ಕೆ ಶಿವಕುಮಾರ್

ಭೂ ಸ್ವಾಧೀನ ಪರಿಹಾರ ವಿಚಾರದಲ್ಲಿ ತಾರತಮ್ಯವಾಗಿರುವ ಕಾರಣಕ್ಕೆ ಭದ್ರಾ ಮೇಲ್ದಂಡೆ ಕಾಮಗಾರಿಗೆ ರೈತರು ತಡೆ ಒಡ್ಡಿದ್ದರು. ಏಕೆಂದರೆ ಹಳೇ ದರದ ಪ್ರಕಾರ ಕೆಲವರಿಗೆ 4 ಲಕ್ಷ ರು. ಪರಿಹಾರ ಸಿಕ್ಕಿದೆ.

ಬೆಂಗಳೂರು: ಭದ್ರಾ ಮೇಲ್ದಂಡೆ ಕಾಮಗಾರಿ ವೇಳೆ ರೈತರಿಗೆ ನೀಡಿರುವ ಭೂ ಸ್ವಾಧೀನ ಪರಿಹಾರ ತಾರತಮ್ಯವನ್ನು ಕಾನೂನು ಪ್ರಕಾರ ಸರಿಪಡಿಸಿ ಮುಂದಿನ ಆರು ತಿಂಗಳಿನಲ್ಲಿ ಕಾಮಗಾರಿ ಮುಗಿಸಿ ನೀರು ಕೊಡಬಹುದು ಎಂದು ಮಂತ್ರಿಗಳು, ಶಾಸಕರು ತಿಳಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ವಿಧಾನಸೌಧದಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಶಾಖಾ ಕಾಲುವೆ ಮತ್ತು ತುಮಕೂರು ಶಾಖಾ ಕಾಲುವೆಗಳ ಭೂಸ್ವಾಧೀನ ಸಮಸ್ಯೆ ನಿವಾರಿಸುವ ಕುರಿತು ಸಂತ್ರಸ್ತ ರೈತರೊಂದಿಗಿನ ಸಭೆಯ ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು.

ಪರಿಹಾರ ತಾರತಮ್ಯ ಪರಿಹರಿಸುವುದಕ್ಕೆ ರೈತರು ಸಹ ಒಪ್ಪಿಕೊಂಡಿದ್ದಾರೆ. ಅವರಿಗೂ ಅನ್ಯಾಯವಾಗದ ರೀತಿಯಲ್ಲಿ ನಾವು ಗಮನ ಹರಿಸುತ್ತೇವೆ. ಆದಷ್ಟು ಬೇಗ ಈ ಯೋಜನೆ ಪೂರ್ಣಗೊಳಿಸಲು ನಾವು ಗಮನ ಹರಿಸುತ್ತೇವೆ ಎಂದರು.

ಭೂ ಸ್ವಾಧೀನ ಪರಿಹಾರ ವಿಚಾರದಲ್ಲಿ ತಾರತಮ್ಯವಾಗಿರುವ ಕಾರಣಕ್ಕೆ ಭದ್ರಾ ಮೇಲ್ದಂಡೆ ಕಾಮಗಾರಿಗೆ ರೈತರು ತಡೆ ಒಡ್ಡಿದ್ದರು. ಏಕೆಂದರೆ ಹಳೇ ದರದ ಪ್ರಕಾರ ಕೆಲವರಿಗೆ 4 ಲಕ್ಷ ರು. ಪರಿಹಾರ ಸಿಕ್ಕಿದೆ.‌ ಅದೇ ಸರ್ವೇ ನಂಬರ್ ಅಲ್ಲಿ ಕೆಲವರಿಗೆ 20 ಲಕ್ಷ ಪರಿಹಾರ ಸಿಕ್ಕಿದ್ದು ತಾರತಮ್ಯವಾಗಿದೆ ಎಂದು ರೈತರು ಕೆಲಸ ಮುಂದುವರೆಸಲು ಬಿಟ್ಟಿರಲಿಲ್ಲ ಎಂದರು.

ಈ ಮೊದಲು ನಾನು, ಒಂದಷ್ಟು ಸಚಿವರು, ಶಾಸಕರು, ಅಧಿಕಾರಿಗಳು ರೈತರ ಬಳಿ ಕೆಲಸ ಮುಂದುವರೆಸಲು ಅನುವು ಮಾಡಿಕೊಡುವಂತೆ ಮನವಿ ಮಾಡಿದ್ದೆವು. ಅದೇ ರೀತಿ ಪರಿಹಾರದ ತಾರತಮ್ಯ ಹೋಗಲಾಡಿಸಲು ಕಾನೂನಿನ ಅಡಿ ಏನು ಮಾಡಬಹುದು ಎಂದು ಚರ್ಚೆ ನಡೆಸಿದೆವು. ಮೂರು- ನಾಲ್ಕು ದಿನಗಳಲ್ಲಿ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

SCROLL FOR NEXT