ಕಾಡಾನೆ ಸಾವು 
ರಾಜ್ಯ

ಕೊಡಗು: ಖಾಸಗಿ ಎಸ್ಟೇಟ್ ನಲ್ಲಿ ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು

ಸಿದ್ದಾಪುರ ಸಮೀಪದ ನೆಲ್ಲಿಹುದಿಕೇರಿಯ ಅತಿಮಂಗಲ ಪ್ರದೇಶದ ಖಾಸಗಿ ಎಸ್ಟೇಟ್‌ನಲ್ಲಿ ಸುಮಾರು 43 ವರ್ಷ ಪ್ರಾಯದ ಗಂಡು ಕಾಡಾನೆ ಸತ್ತು ಬಿದ್ದಿರುವುದು ಪತ್ತೆಯಾಗಿದೆ

ಮಡಿಕೇರಿ: ಖಾಸಗಿ ಎಸ್ಟೇಟ್ ವೊಂದರ ಆವರಣದಲ್ಲಿ ವಿದ್ಯುತ್ ಸ್ಪರ್ಶಿಸಿ ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನಲ್ಲಿ ನಡೆದಿದೆ. ಅಕ್ರಮವಾಗಿ ಸೌರ ಬೇಲಿಗೆ ವಿದ್ಯುತ್ ಲೈನ್ ಸಂಪರ್ಕವೇ ಈ ಘಟನೆಗೆ ಕಾರಣ ಎನ್ನಲಾಗಿದೆ. ಈ ಬಗ್ಗೆ ಅರಣ್ಯಾಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಸಿದ್ದಾಪುರ ಸಮೀಪದ ನೆಲ್ಲಿಹುದಿಕೇರಿಯ ಅತಿಮಂಗಲ ಪ್ರದೇಶದ ಖಾಸಗಿ ಎಸ್ಟೇಟ್‌ನಲ್ಲಿ ಸುಮಾರು 43 ವರ್ಷ ಪ್ರಾಯದ ಗಂಡು ಕಾಡಾನೆ ಸತ್ತು ಬಿದ್ದಿರುವುದು ಪತ್ತೆಯಾಗಿದೆ. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಸೌರ ಬೇಲಿಗೆ ಅಕ್ರಮವಾಗಿ ವಿದ್ಯುತ್ ಲೈನ್ ಸಂಪರ್ಕ ಕಲ್ಪಿಸಿದ್ದರಿಂದ ಆನೆಗೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.

ಈ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ತೋಟದ ಉಸ್ತುವಾರಿ ಜಾನ್ ವಿರುದ್ಧ ನಿರ್ಲಕ್ಷ್ಯದ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ. ಮಡಿಕೇರಿ ವಿಭಾಗದ ಡಿಸಿಎಫ್ ಭಾಸ್ಕರ್, ಎಸಿಎಫ್ ಗೋಪಾಲ್ ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಡಾ.ಶಿಂಧೆ ಆನೆಯ ಮರಣೋತ್ತರ ಪರೀಕ್ಷೆ ನಡೆಸಿ ಅರಣ್ಯದಂಚಿನಲ್ಲೇ ಮೃತದೇಹವನ್ನು ಹೂಳಲಾಯಿತು.

ಈ ಮಧ್ಯೆ ಆವರಣದಾದ್ಯಂತ ಸುತ್ತಾಡುತ್ತಿದ್ದ ಕಾಡಾನೆಗಳ ಹಿಂಡನ್ನು ಕ್ಷಿಪ್ರ ಪ್ರತಿಕ್ರಿಯೆ ತಂಡ (ಆರ್‌ಆರ್‌ಟಿ) ಕಾರ್ಯಾಚರಣೆ ನಡೆಸಿ ಅರಣ್ಯಗೆ ಓಡಿಸಿತು. ಈ ಪ್ರದೇಶದಲ್ಲಿ ಕಾಡಾನೆಗಳ ಓಡಾಟವು ಹೆಚ್ಚಾಗಿದೆ ಎಂದು ಎಸ್ಟೇಟ್‌ಗಳಲ್ಲಿ ಕೆಲಸ ಮಾಡಲು ಕಾರ್ಮಿಕರು ಹಿಂದೇಟು ಹಾಕುತ್ತಿದ್ದಾರೆ.

ಹೆಚ್ಚುತ್ತಿರುವ ಸಂಘರ್ಷದಿಂದ ಮಾನವನರು ಮತ್ತು ಆನೆಗಳು ಸಾವನ್ನಪ್ಪುತ್ತಿವೆ. ಈ ಪ್ರದೇಶದಲ್ಲಿ ವಿದ್ಯುತ್ ಆಘಾತ ಮತ್ತು ಮಾನವ ಹಸ್ತಕ್ಷೇಪದಿಂದಾಗಿ ನಾಲ್ಕು ಆನೆಗಳು ಮೃತಪಟ್ಟಿವೆ ಎಂದು ಗ್ರಾಮಸ್ಥರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT