ಸಿಎಂ ಸಿದ್ದರಾಮಯ್ಯ  
ರಾಜ್ಯ

ಚೆನ್ನೈ: ಮಾರ್ಚ್ 22ರಂದು ನಡೆವ ಸಮಾನ ಮನಸ್ಕ ರಾಜ್ಯಗಳ ಸಭೆಯಲ್ಲಿ ಡಿ.ಕೆ ಶಿವಕುಮಾರ್ ಭಾಗಿ- ಸಿಎಂ ಸಿದ್ದರಾಮಯ್ಯ

ಕ್ಷೇತ್ರ ಮರುವಿಂಗಡನೆ ಕುರಿತಾಗಿ ನೀವು ಬರೆದ ಪತ್ರ ಮತ್ತು ಆಹ್ವಾನವನ್ನು ಸ್ವೀಕರಿಸಿದ್ದೇನೆ. ಲೋಕಸಭಾ ಕ್ಷೇತ್ರಗಳ ಡಿಲಿಮಿಟೇಷನ್ ಕುರಿತು ದಕ್ಷಿಣ ರಾಜ್ಯಗಳ ಕಾಳಜಿ ಅರಿವಿದೆ.

ಬೆಂಗಳೂರು: ಲೋಕಸಭೆ ಕ್ಷೇತ್ರ ಮರುವಿಂಗಡನೆ ವಿವಾದದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್‌ಗೆ ಪತ್ರವನ್ನು ಬರೆದಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ಸ್ಟಾಲಿನ್ ಸೂಚನೆಯಂತೆ ತಮಿಳುನಾಡಿನ ಸಚಿವರು ಹಾಗೂ ಸಂಸದರೊಬ್ಬರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ಸಂಸದೀಯ ಕ್ಷೇತ್ರಗಳ ಪ್ರಸ್ತಾವಿತ ವಿಂಗಡಣೆಯ ಪರಿಣಾಮಗಳನ್ನು ಚರ್ಚಿಸಲು ಮಾರ್ಚ್ 22 ರಂದು ಚೆನ್ನೈನಲ್ಲಿ ನಡೆಯಲಿರುವ ಸಮಾನ ಮನಸ್ಕ ರಾಜ್ಯಗಳ ಮೊದಲ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕ್ಷೇತ್ರ ಮರುವಿಂಗಡನೆ ಕುರಿತಾಗಿ ನೀವು ಬರೆದ ಪತ್ರ ಮತ್ತು ಆಹ್ವಾನವನ್ನು ಸ್ವೀಕರಿಸಿದ್ದೇನೆ. ಲೋಕಸಭಾ ಕ್ಷೇತ್ರಗಳ ಡಿಲಿಮಿಟೇಷನ್ ಕುರಿತು ದಕ್ಷಿಣ ರಾಜ್ಯಗಳ ಕಾಳಜಿ ಅರಿವಿದೆ. ಲೋಕಸಭಾ ಕ್ಷೇತ್ರಗಳ‌ ಮರುವಿಂಗಡಣೆ ಹಾಗೂ ಸಾಧಕ ಬಾದಕಗಳ ಬಗ್ಗೆ ಅರಿವಿದೆ. ಈ ವಿಚಾರವಾಗಿ‌ ಸುಧೀರ್ಘವಾಗಿ ಚರ್ಚಿಸುವ ಅಗತ್ಯವಿದೆ ಎಂದಿದ್ದಾರೆ.

ಸಮಾನ ಮನಸ್ಕ, ಸಂತ್ರಸ್ಥರಾಗುವ ರಾಜ್ಯಗಳ ಚರ್ಚಿಸಬೇಕು.‌ಈ ಸಭೆಯಲ್ಲಿ ನಾನು ಭಾಗವಹಿಸಬೇಕೆಂಬ ಆಸೆ ಇದೆ ಆದರೆ ಕೆಲವು ಕಾರಣಗಳಿಂದಾಗಿ ಸಭೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಪತ್ರದಲ್ಲಿ ವಿವರ ನೀಡಿದ್ದಾರೆ. ಮಾರ್ಚ್ 22 ರಂದು ಕರೆದ ಸಭೆಯಲ್ಲಿ ನನ್ನ ಬದಲಾಗಿ ಡಿ.ಕೆ.ಶಿವಕುಮಾರ್‌ ಭಾಗವಹಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಲೋಕಸಭೆ ಮತ್ತು ವಿಧಾನಸಭೆ ಕ್ಷೇತ್ರ ಮರುವಿಂಗಡನೆ ಸಂಬಂಧಿಸಿದಂತೆ ಮಾರ್ಚ್ 22 ರಂದು ದಕ್ಷಿಣದ ರಾಜ್ಯಗಳ ಸಭೆ ನಡೆಯಲಿದೆ. ಚೆನೈನಲ್ಲಿ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಸಭೆಗೆ ಆಹ್ವಾನ ನೀಡಲು ತಮಿಳುನಾಡಿನ ಸಚಿವ ಮತ್ತು ಸಂಸದರು ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದ್ದರು.

ಕ್ಷೇತ್ರ ಪುನರ್ ವಿಂಗಡನೆಗೆ ದಕ್ಷಿಣ ಭಾರತದ ರಾಜ್ಯಗಳಿಂದ‌ ತೀವ್ರ ವಿರೋಧ ವ್ಯಕ್ತವಾಗಿದೆ. ಕರ್ನಾಟಕ, ತಮಿಳುನಾಡು, ಕೇರಳ, ತೆಲಂಗಾಣದಿಂದ ಇದಕ್ಕೆ ವಿರೋಧ ವ್ಯಕ್ತಪಡಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT