ರನ್ಯಾ ರಾವ್  
ರಾಜ್ಯ

ಹಿರಿಯ ಅಧಿಕಾರಿಗಳಿಗೆ ಮೀಸಲಾಗಿದ್ದ ಶಿಷ್ಠಾಚಾರಗಳನ್ನು ನಟಿ ರನ್ಯಾ ರಾವ್ ಉಲ್ಲಂಘಿಸಿದ್ದರು: SPP ಕೋರ್ಟ್ ಗೆ ಹೇಳಿಕೆ

ಪೊಲೀಸ್ ಅಧಿಕಾರಿಗಳ ಕುಟುಂಬ ಸದಸ್ಯರಿಗೆ ಸಹಾಯ ಮಾಡಲು ಪೊಲೀಸ್ ಇಲಾಖೆಯಿಂದ ಸೂಚನೆಗಳನ್ನು ಪಡೆದಿದ್ದಾಗಿ ಪ್ರೋಟೋಕಾಲ್ ಅಧಿಕಾರಿ ಡಿಆರ್‌ಐ ಮುಂದೆ ಒಪ್ಪಿಕೊಂಡಿದ್ದಾರೆ ಎಂದು ಎಸ್‌ಪಿಪಿ ನ್ಯಾಯಾಲಯಕ್ಕೆ ತಿಳಿಸಿದರು.

ಬೆಂಗಳೂರು: ಕರ್ನಾಟಕ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಡಿಜಿಪಿ ರಾಮಚಂದ್ರ ರಾವ್ ಅವರ ಮಲಮಗಳು ಚಿನ್ನ ಕಳ್ಳಸಾಗಣೆಯ ಆರೋಪಿ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿಯನ್ನು ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ನಾಳೆ ಶುಕ್ರವಾರಕ್ಕೆ ಕಾಯ್ದಿರಿಸಿದೆ.

ನಿನ್ನೆ ವಿಚಾರಣೆಯ ಸಂದರ್ಭದಲ್ಲಿ, ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಪ್ರತಿನಿಧಿಸುವ ವಿಶೇಷ ಸಾರ್ವಜನಿಕ ಅಭಿಯೋಜಕ (SPP) ಮಧು ರಾವ್, ರನ್ಯಾ ಅವರ ಶಿಷ್ಟಾಚಾರ ಉಲ್ಲಂಘನೆಯನ್ನು ಬಹಿರಂಗಪಡಿಸಲು ರಾಜ್ಯ ಪೊಲೀಸರ ಶಿಷ್ಟಾಚಾರ ಅಧಿಕಾರಿಗೆ ಸಮನ್ಸ್ ನೀಡಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಪೊಲೀಸ್ ಅಧಿಕಾರಿಗಳ ಕುಟುಂಬ ಸದಸ್ಯರಿಗೆ ಸಹಾಯ ಮಾಡಲು ಪೊಲೀಸ್ ಇಲಾಖೆಯಿಂದ ಸೂಚನೆಗಳನ್ನು ಪಡೆದಿದ್ದಾಗಿ ಪ್ರೋಟೋಕಾಲ್ ಅಧಿಕಾರಿ ಡಿಆರ್‌ಐ ಮುಂದೆ ಒಪ್ಪಿಕೊಂಡಿದ್ದಾರೆ ಎಂದು ಎಸ್‌ಪಿಪಿ ನ್ಯಾಯಾಲಯಕ್ಕೆ ತಿಳಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆಗಳನ್ನು ತಪ್ಪಿಸಲು ರನ್ಯಾ ಅವರಿಗೆ ಹಿರಿಯ ಅಧಿಕಾರಿಗಳಿಗೆ ಮೀಸಲಾದ ಶಿಷ್ಟಾಚಾರವನ್ನು ನೀಡಿರುವುದನ್ನು ಅಧಿಕಾರಿ ಒಪ್ಪಿಕೊಂಡರು.

ನಟಿ ರನ್ಯಾ ರಾವ್ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ವಿಮಾನ ಇಳಿಯುವ ವೇಳೆಗೆ ಪ್ರೋಟೋಕಾಲ್ ಅಧಿಕಾರಿಗೆ ಹೇಳಿ ಅವರು ಭದ್ರತಾ ಅನುಮತಿಯನ್ನು ಪಡೆಯಲು ನಟಿಯಿಂದ ಲಗೇಜ್ ತೆಗೆದುಕೊಳ್ಳಲು ಇಮ್ಮಿಗ್ರೇಶನ್ ಸೆಂಟರ್ ನಲ್ಲಿ ಕಾಯುತ್ತಿದ್ದರು ಎಂದು ಹೇಳಲಾಗಿದೆ. ಶಿಷ್ಟಾಚಾರವನ್ನು ಉಲ್ಲಂಘಿಸುವ ಮೂಲಕ, ರನ್ಯಾ ವಿಮಾನ ನಿಲ್ದಾಣದಲ್ಲಿ ತಪಾಸಣೆಯನ್ನು ತಪ್ಪಿಸಿಕೊಳ್ಳುತ್ತಿದ್ದರು. ಹಿರಿಯ ಅಧಿಕಾರಿಗಳಿಗೆ ಮೀಸಲಾದ ವಿಐಪಿ ವಿಮಾನ ನಿಲ್ದಾಣ ಶಿಷ್ಟಾಚಾರಗಳನ್ನು ರನ್ಯಾ ಬಳಸಿಕೊಂಡಿದ್ದಾರೆ ಎಂದು ಎಸ್‌ಪಿಪಿ ನ್ಯಾಯಾಲಯ ಮುಂದೆ ವಿವರಿಸಿದ್ದಾರೆ.

ಮೂರು ದಿನಗಳ ಡಿಆರ್‌ಐ ಕಸ್ಟಡಿಯಲ್ಲಿದ್ದಾಗ ರನ್ಯಾ ತನಿಖೆಗೆ ಸಹಕರಿಸಲಿಲ್ಲ ಎಂದು ಹೇಳಲಾಗುತ್ತಿದೆ.

ಮಾರ್ಚ್ 3 ರಂದು ದುಬೈನಿಂದ ಬೆಂಗಳೂರಿಗೆ ಎಮಿರೇಟ್ಸ್ ವಿಮಾನದ ಮೂಲಕ ಆಗಮಿಸಿದ್ದ ರನ್ಯಾ ಅವರನ್ನು ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ ಡಿಆರ್‌ಐ ಬಂಧಿಸಿತ್ತು. ತೀವ್ರ ತಪಾಸಣೆ ಮಾಡಿದಾಗ, 12.56 ಕೋಟಿ ರೂಪಾಯಿ ಮೌಲ್ಯದ 14.2 ಕೆಜಿ ತೂಕದ ಚಿನ್ನದ ಗಟ್ಟಿಗಳನ್ನು ಆಕೆಯಿಂದ ವಶಪಡಿಸಿಕೊಳ್ಳಲಾಯಿತು. ಬಂಧಿಸಿದ ನಂತರ, ಡಿಆರ್‌ಐ ಅಧಿಕಾರಿಗಳು ಲ್ಯಾವೆಲ್ಲೆ ರಸ್ತೆಯಲ್ಲಿರುವ ಆಕೆಯ ನಿವಾಸದಲ್ಲಿ ಶೋಧ ನಡೆಸಿ 2.06 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳು ಮತ್ತು 2.67 ಕೋಟಿ ರೂ. ಮೌಲ್ಯದ ಭಾರತೀಯ ಕರೆನ್ಸಿಯನ್ನು ವಶಪಡಿಸಿಕೊಂಡರು.

1962 ರ ಕಸ್ಟಮ್ಸ್ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ರನ್ಯಾರನ್ನು ಬಂಧಿಸಲಾಗಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT