ಘಟನೆಯ ಸ್ಥಳ ಮತ್ತು ಮೃತ ಮಹಿಳೆ. 
ರಾಜ್ಯ

ನೀರು ಹಿಡಿಯಲು ಹೋದ ಮಹಿಳೆ ವಿದ್ಯುತ್ ಸ್ಪರ್ಶಿಸಿ ಸಾವು: ಮೈಸೂರು ರಸ್ತೆಯಲ್ಲಿ ಭುಗಿಲೆದ್ದ ಪ್ರತಿಭಟನೆ, ಜಮೀರ್ ವಿರುದ್ಧ ಜನರ ಆಕ್ರೋಶ

ಅಕ್ರಮವಾಗಿ ಮೋಟಾರ್ ಗೆ ವಿದ್ಯುತ್ ಕನೆಕ್ಷನ್ ಕೊಡಲಾಗಿತ್ತು, ಈ ಹಿನ್ನೆಲೆ ಈ ಘಟನೆ ನಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಬೆಂಗಳೂರು: ನೀರು ಹಿಡಿಯಲು ಹೋದ ಮಹಿಳೆಯೊಬ್ಬರು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ನಗರದ ಚಾಮರಾಜಪೇಟೆಯ ಆನಂದಪುರದ ಮಾರುಕಟ್ಟೆ ರಸ್ತೆಯಲ್ಲಿ ಗುರುವಾರ ನಡೆದಿದೆ.

ಮೃತ ಮಹಿಳೆಯನ್ನು ಸೆಲ್ವಿ (24) ಎಂದು ಗುರ್ತಿಸಲಾಗಿದೆ. ಬೆಳಗಿನ ಜಾವ ನೀರನ್ನು ಮನೆಗೆ ತೆಗೆದುಕೊಂಡು ಹೋಗುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿದೆ ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ.

ಮೋಟಾರ್ ಗೆ ಅಳವಡಿಸಿದ್ದ ವೈರ್ ತಗುಲಿ ಮಹಿಳೆ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಘಟನೆ ಬಳಿಕ ಮಾರುಕಟ್ಟೆ ರಸ್ತೆಯಲ್ಲಿ ಬಿಬಿಎಂಪಿ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದಾರೆ.

ಅಕ್ರಮವಾಗಿ ಮೋಟಾರ್ ಗೆ ವಿದ್ಯುತ್ ಕನೆಕ್ಷನ್ ಕೊಡಲಾಗಿತ್ತು, ಈ ಹಿನ್ನೆಲೆ ಈ ಘಟನೆ ನಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕ್ಷೇತ್ರದ ಶಾಸಕ ಜಮೀರ್ ಅವರು ಸ್ಥಳಕ್ಕಾಗಮಿಸಬೇಕೆಂದು ಪಟ್ಟು ಹಿಡಿದಿದ್ದಾರೆ.

ಸ್ಥಳೀಯರ ಪ್ರತಿಭಟನೆ ಪರಿಣಾಮ ಮೈಸೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ಸಮಸ್ಯೆ ಎದುರಾಗಿದೆ. ಈ ನಡುವೆ ಪ್ರತಿಭಟನಾಕಾರರ ಮನವೊಲಿಸಲು ಪೊಲೀಸಲು ಮುಂದಾಗಿದ್ದು, ಸ್ಥಳೀಯರು ಪ್ರತಿಭಟನೆಯಿಂದ ಹಿಂದೆ ಸರಿದಿಲ್ಲ. ಈ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಸ್ಥಳದಲ್ಲಿ ಕೆಎಸ್ಆರ್'ಪಿ ತುಕಡಿ ನಿಯೋಜನೆಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

SCROLL FOR NEXT