ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ, 1.8 ಲಕ್ಷ ರೂ ಮೌಲ್ಯದ ಮಾದಕ ವಸ್ತು ವಶ

ಪೊಲೀಸರ ಪ್ರಕಾರ, ಅವರಿಬ್ಬರೂ ಪೊಲೀಸ್ ಠಾಣೆ ವ್ಯಾಪ್ತಿಯ ಎಂಆರ್ ಲೇಔಟ್‌ನ ರಾಣಿ ಕ್ರಾಸ್ ಬಳಿ ದ್ವಿಚಕ್ರ ವಾಹನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು.

ದೇವನಹಳ್ಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದೇವನಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನಿಷೇಧಿತ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ಅವರಿಬ್ಬರೂ ಪೊಲೀಸ್ ಠಾಣೆ ವ್ಯಾಪ್ತಿಯ ಎಂಆರ್ ಲೇಔಟ್‌ನ ರಾಣಿ ಕ್ರಾಸ್ ಬಳಿ ದ್ವಿಚಕ್ರ ವಾಹನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು. ಈ ಮಾಹಿತಿ ಆಧಾರದ ಮೇಲೆ, ಠಾಣೆಯಲ್ಲಿ NDPS ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿ, ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 3 ಕೆಜಿ 200 ಗ್ರಾಂ ಗಾಂಜಾ, ಎರಡು ಮೊಬೈಲ್ ಫೋನ್‌ಗಳು, ಒಂದು ತೂಕದ ಯಂತ್ರ ಮತ್ತು ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಒಟ್ಟು ಮೌಲ್ಯ 1,80,000 ರೂ. ಎಂದು ಅಂದಾಜಿಸಲಾಗಿದೆ.

ವಿಚಾರಣೆ ಸಮಯದಲ್ಲಿ, ಬಂಧಿತ ಇಬ್ಬರು ಆರೋಪಿಗಳು ತಮಗೆ ಮಾರಾಟ ಮಾಡಲು ಗಾಂಜಾ ಪೂರೈಸುತ್ತಿದ್ದ ಮತ್ತೊಬ್ಬ ಸಹಚರನ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿ ಮೇರೆಗೆ ಮಾರ್ಚ್ 8 ರಂದು ನ್ಯೂ ಗುರಪ್ಪನಪಳ್ಳಿಯ ಬಿಟಿಎಂ ಲೇಔಟ್‌ನಲ್ಲಿರುವ ಮನೆಯಿಂದ ಮತ್ತೋರ್ವವನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತನನ್ನು ವಿಚಾರಿಸಿದಾಗ ಪ್ರಕರಣದಲ್ಲಿ ತಾನು ಭಾಗಿಯಾಗಿರುವುದಾಗಿ ಒಪ್ಪಿಕೊಂಡಿದ್ದು, ಅಪರಿಚಿತ ವ್ಯಕ್ತಿಯಿಂದ ಕಡಿಮೆ ಬೆಲೆಗೆ ನಿಷೇಧಿತ ಗಾಂಜಾವನ್ನು ಖರೀದಿಸಿರುವುದಾಗಿ ಹೇಳಿದ್ದಾನೆ.

ಮಾರ್ಚ್ 9 ರಂದು, ಮೂವರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಕಾರ್ಯಾಚರಣೆಯನ್ನು ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತ ವಿಜೆ ಸುಜೀತ್, ಐಪಿಎಸ್, ದೇವನಹಳ್ಳಿ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ನವೀನ್ ಕುಮಾರ್ ಮತ್ತು ದೇವನಹಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಾಕೇಶ್ ಸಿ ಅವರ ಮಾರ್ಗದರ್ಶನದಲ್ಲಿ ನಡೆಸಲಾಯಿತು.

ಬುಧವಾರ ಮುಂಜಾನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕಲ್ಲಸಂದ್ರದ ನಾರಾಯಣನಗರದ ಜೋಡಿ ರಸ್ತೆಯಲ್ಲಿ ಕಾರಿನಲ್ಲಿ ನಿಷೇಧಿತ ಮಾದಕ ದ್ರವ್ಯಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳು ಸಿಕ್ಕಿಬಿದ್ದಿದ್ದಾರೆ.

ಖಚಿತ ಮಾಹಿತಿ ಪಡೆದ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT