ಬಿಎಸ್ ಯಡಿಯೂರಪ್ಪ PTI
ರಾಜ್ಯ

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ರಿಲೀಫ್:‌ ಸಮನ್ಸ್‌ ಗೆ ಹೈಕೋರ್ಟ್ ತಡೆ

ಇದರ ಜೊತೆಗೆ ಮಾಜಿ ಸಿಎಂ ಯಡಿಯೂರಪ್ಪ ಖುದ್ದು ಹಾಜರಾತಿಗೂ ವಿನಾಯಿತಿ ನೀಡಿದೆ. ಈ ಮೂಲಕ ಬಿಎಸ್​ ಯಡಿಯೂಪ್ಪ ಅವರಿಗೆ ರಿಲೀಫ್​ ಸಿಕ್ಕಂತಾಗಿದೆ.

ಬೆಂಗಳೂರು: ಪೋಕ್ಸೋ ಪ್ರಕರಣದ ಸಂಬಂಧ ಮಾರ್ಚ್​ 15 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂಪ್ಪರಿಗೆ 1ನೇ ತ್ವರಿತಗತಿ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್​ಗೆ ಹೈಕೋರ್ಟ್​ ತಡೆ ನೀಡಿದೆ.

ಇದರ ಜೊತೆಗೆ ಮಾಜಿ ಸಿಎಂ ಯಡಿಯೂರಪ್ಪ ಖುದ್ದು ಹಾಜರಾತಿಗೂ ವಿನಾಯಿತಿ ನೀಡಿದೆ. ಈ ಮೂಲಕ ಬಿಎಸ್​ ಯಡಿಯೂಪ್ಪ ಅವರಿಗೆ ರಿಲೀಫ್​ ಸಿಕ್ಕಂತಾಗಿದೆ. ಈ ವೇಳೆ ಬಿಎಸ್ ಯಡಿಯೂರಪ್ಪ ಅವರ ಅರ್ಜಿಯ ವಿಚಾರಣೆ ಅಗತ್ಯವಿದೆ ಎಂದು ಹೇಳಿದ ನ್ಯಾಯಾಲಯವು ಕಾಗ್ನಿಜೆನ್ಸ್, ಸಮನ್ಸ್ ಆದೇಶಕ್ಕೆ ತಡೆ ನೀಡಿದೆ.

ವಿಚಾರಣೆ ವೇಳೆ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿತ್ತು. ಖುದ್ದು ಹಾಜರಾತಿಯಿಂದಲೂ ಹೈಕೋರ್ಟ್ ವಿನಾಯಿತಿ ನೀಡಿತ್ತು. 2024ರ ಫೆ‌ಬ್ರವರಿ 2ರಂದು ಅನುಚಿತವಾಗಿ ಸ್ಪರ್ಶಿಸಿದ ಆರೋಪವಿದೆ. ಒಂದು ತಿಂಗಳ ಬಳಿಕ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಸ್ಥಳದಲ್ಲಿದ್ದ ಸಾಕ್ಷಿಗಳು ಆ ರೀತಿಯ ಘಟನೆ ನಡೆದಿಲ್ಲವೆಂದಿದ್ದಾರೆ.

ಬಾಲಕಿ, ಆಕೆಯ ತಾಯಿಯ ಹೇಳಿಕೆ ಮೇಲೆ ಆರೋಪಪಟ್ಟಿ ದಾಖಲಿಸಿದ್ದಾರೆ. ತಾಯಿಯ ಮೊಬೈಲ್​ನಲ್ಲಿದ್ದ ಸಂಭಾಷಣೆ ಬಿಎಸ್ ​ಯಡಿಯೂರಪ್ಪ ಅಳಿಸಿಲ್ಲ. ಪೊಲೀಸರು ಹಾಕಿರುವ ಐಟಿ ಸೆಕ್ಷನ್ ದೂರುದಾರರಿಗೆ ಅನ್ವಯವಾಗುತ್ತದೆ ಎಂದು ವಾದಿಸಿದರು.

1 ತಿಂಗಳು 12 ದಿನ ತಡವಾಗಿ ಪೊಕ್ಸೋ ಕೇಸ್ ದಾಖಲಿಸಲಾಗಿದೆ. ಘಟನೆ ನಡೆದಿದ್ದರೆ ಯಾರೂ ಇಷ್ಟು ತಡವಾಗಿ ದೂರು ದಾಖಲಿಸುತ್ತಿರಲಿಲ್ಲ. ಸಮನ್ಸ್ ರದ್ದುಪಡಿಸಿ ಹೊಸದಾಗಿ ಪರಿಶೀಲನೆಗೆ ಹಿಂದೆ ಆದೇಶಿಸಲಾಗಿತ್ತು. ಈಗ ವಿಶೇಷ ಕೋರ್ಟ್ ಕಾಗ್ನಿಜೆನ್ಸ್ ಪಡೆದು ಸಮನ್ಸ್ ಜಾರಿಗೊಳಿಸಿದೆ ಎಂದು ಬಿಎಸ್​ ಯಡಿಯೂರಪ್ಪ ಪರ ವಕೀಲರು ವಾದಿಸಿದರು.

ಬಿಎಸ್​ ಯಡಿಯೂರಪ್ಪ ವಕೀಲರ ಮನವಿಗೆ ಅಡ್ವೊಕೇಟ್ ಜನರಲ್ ಆಕ್ಷೇಪಿಸಿದರು. ಹೈಕೋರ್ಟ್ ಸೂಚನೆಯಂತೆ ವಿಶೇಷ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಹೀಗಾಗಿ ಸಮನ್ಸ್​​ಗೆ ತಡೆ ನೀಡದಂತೆ ಮನವಿ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT