ಸಾಂದರ್ಭಿಕ ಚಿತ್ರ 
ರಾಜ್ಯ

ಖಾನಾಪುರ ಇನ್‌ಸ್ಪೆಕ್ಟರ್‌ ಮಂಜುನಾಥ್ ನಾಯಕ್ ಅಮಾನತು ಆದೇಶಕ್ಕೆ ಕೆಎಟಿ ತಡೆ

ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರ ನಡುವಿನ ಗಲಾಟೆ ಪ್ರಕರಣದಲ್ಲಿ ಖಾನಾಪುರದ ಇನ್‌ಸ್ಪೆಕ್ಟರ್‌ ಮಂಜುನಾಥ ನಾಯ್ಕ್‌ ಅಮಾನತುಗೊಂಡಿದ್ದರು.

ಬೆಳಗಾವಿ: ಖಾನಾಪುರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ (ಪಿಐ) ಮಂಜುನಾಥ ನಾಯಕ್ ಅವರ ಅಮಾನತು ಆದೇಶವನ್ನು ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ರದ್ದುಗೊಳಿಸಿದ್ದು, ಸರ್ಕಾರ ಅವರನ್ನು ಮತ್ತೆ ಅವರ ಸ್ಥಾನದಲ್ಲಿ ಇರಿಸುವಂತೆ ನಿರ್ದೇಶಿಸಿದೆ. ರಾಜಕೀಯ ವಿವಾದದ ನಂತರ ಅಮಾನತುಗೊಂಡಿದ್ದ ನಾಯಕ್ ಅವರನ್ನು ಸೇವೆಯಲ್ಲಿ ಮುಂದುವರಿಸಬೇಕೆಂದು ನ್ಯಾಯಮಂಡಳಿ ತೀರ್ಪು ನೀಡಿದೆ.

ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರ ನಡುವಿನ ಗಲಾಟೆ ಪ್ರಕರಣದಲ್ಲಿ ಖಾನಾಪುರದ ಇನ್‌ಸ್ಪೆಕ್ಟರ್‌ ಮಂಜುನಾಥ ನಾಯ್ಕ್‌ ಅಮಾನತುಗೊಂಡಿದ್ದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ (ಡಿ.19) ನಡೆದ ಚಳಿಗಾಲದ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ವಿರುದ್ಧ ಅವಾಚ್ಯ ಪದ ಬಳಸಿದ್ದಾರೆ ಎಂಬ ಆರೋಪದ ಮೇರೆಗೆ ಸಿ.ಟಿ. ರವಿ ಅವರನ್ನು ಬಂಧಿಸಲಾಗಿತ್ತು. ತಡರಾತ್ರಿ ಅವರನ್ನು ಖಾನಾಪುರ ಠಾಣೆಗೆ ಕರೆದೊಯ್ಯಲಾಗಿತ್ತು.

ಅಲ್ಲಿ ನಡೆದ ವಿಚಾರಣೆ ಸಂದರ್ಭದಲ್ಲಿ ಬೆಳಗಾವಿ ನಗರ ಪೊಲೀಸ್ ಆಯುಕ್ತರು ಸೇರಿದಂತೆ ಇಲಾಖೆಯ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ರವಿ ಅವರ ಬಂಧನ ಮತ್ತು ಅವರನ್ನು ಖಾನಾಪುರ ಠಾಣೆಗೆ ಕರೆತಂದಿದ್ದ ಪೊಲೀಸರ ನಡೆ ಖಂಡಿಸಿ ಬಿಜೆಪಿ ಮುಖಂಡರು ಪೊಲೀಸ್ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದರು.

ಅದೇ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಆರ್.ಅಶೋಕ ಸೇರಿದಂತೆ ಬಿಜೆಪಿ ನಾಯಕರಿಗೆ ಸಿ.ಟಿ ರವಿ ಅವರನ್ನು ಭೇಟಿಯಾಗಲು ಮಂಜುನಾಥ ನಾಯ್ಕ ಅವರು ಅವಕಾಶ ನೀಡಿದ್ದರು ಎಂಬ ಆರೋಪದ ಮೇಲೆ ಅಮಾನತುಗೊಳಿಸಲಾಗಿತ್ತು.

ಆದೇಶದ ವಿರುದ್ಧ ಮಂಜುನಾಥ ಅವರು ಕೆಎಟಿ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸತ್ಯನಾರಾಯಣ ಸಿಂಗ್ ಮತ್ತು ಸುನೀಲ ಕುಮಾರ ಅವರನ್ನೊಳಗೊಂಡ ಪೀಠ ‘ಡಿ.21, 2024ರಂದು ಪೊಲೀಸ್ ಇಲಾಖೆ ಹೊರಡಿಸಿದ್ದ ಮಂಜುನಾಥ ನಾಯ್ಕ ಅವರ ಅಮಾನತು ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಅವರನ್ನು ಖಾನಾಪುರ ಠಾಣೆಯ ಇನ್‌ಸ್ಪೆಕ್ಟರ್‌ ಹುದ್ದೆಯಲ್ಲೇ ಮುಂದುವರೆಸಬೇಕು’ ಎಂದು ಆದೇಶಿಸಿದೆ. ಮೂರು ತಿಂಗಳೊಳಗೆ ಅವರಿಗೆ ಎಲ್ಲಾ ಅರ್ಹ ಸವಲತ್ತುಗಳು ಸಿಗುವಂತೆ ನೋಡಿಕೊಳ್ಳಬೇಕು ಎಂದು ತೀರ್ಪು ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಈ ತೀರ್ಪಿನೊಂದಿಗೆ, ನಾಯ್ಕ್ ಮತ್ತೆ ಕರ್ತವ್ಯಕ್ಕೆ ಮರಳಲಿದ್ದಾರೆ, ಇದು ರಾಜಕೀಯ ಚರ್ಚೆ ಮತ್ತು ಪ್ರತಿಭಟನೆಗಳನ್ನು ಹುಟ್ಟುಹಾಕಿದ್ದ ಪ್ರಕರಣದಲ್ಲಿ ಮಹತ್ವದ ನಿರ್ಧಾರವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT