ಸಂತೋಷ್ ಲಾಡ್ 
ರಾಜ್ಯ

ನ್ಯೂಟ್ರಿಷಿಯನ್​ ಕಿಟ್ ವಿತರಣೆಯಲ್ಲಿ ಭ್ರಷ್ಟಾಚಾರ ನಡೆದಿದೆ: BJP ಆರೋಪ ನಿರಾಕರಿಸಿದ ಸಚಿವ ಸಂತೋಷ್ ಲಾಡ್

ಪ್ರಶ್ನೋತ್ತರ ಕಲಾಪ ವೇಳೆ ವಿಧಾನಪರಿಷತ್ತಿನ ವಿಪಕ್ಷದ ಸಚೇತಕರಾಗಿರುವ ಎನ್. ರವಿಕುಮಾರ್​, ಕಾರ್ಮಿಕರಿಗೆ ನೀಡಲಾಗುವ ಕಿಟ್ ವಿತರಣೆಯಲ್ಲಿ ಸರ್ಕಾರವು ಭ್ರಷ್ಟಾಚಾರವೆಸಗಿದೆ ಎಂದು ಆರೋಪಿಸಿದರು.

ಬೆಂಗಳೂರು: ರಕ್ತಹೀನತೆ ಬಳಲುತ್ತಿರುವ ಕಟ್ಟಡ ಕಾರ್ಮಿಕರಿಗೆ ನೀಡಲಾಗುವ ರೋಗನಿರೋಧಕ ಹಾಗೂ ಪೌಷ್ಠಿಕಾಂಶ ಸಾಮಗ್ರಿ ಕಿಟ್ ವಿತರಣೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಬಿಜೆಪಿ ಆರೋಪಿಸಿದ್ದು, ಆರೋಪವನ್ನು ಸರ್ಕಾರ ತಿರಸ್ಕರಿಸಿದೆ.

ಪ್ರಶ್ನೋತ್ತರ ಕಲಾಪ ವೇಳೆ ವಿಧಾನಪರಿಷತ್ತಿನ ವಿಪಕ್ಷದ ಸಚೇತಕರಾಗಿರುವ ಎನ್. ರವಿಕುಮಾರ್​, ಕಾರ್ಮಿಕರಿಗೆ ನೀಡಲಾಗುವ ಕಿಟ್ ವಿತರಣೆಯಲ್ಲಿ ಸರ್ಕಾರವು ಭ್ರಷ್ಟಾಚಾರವೆಸಗಿದೆ ಎಂದು ಆರೋಪಿಸಿದರು.

ಕಳೆದ ಆರ್ಥಿಕ ಸಾಲಿನಲ್ಲಿ 12.39 ಲಕ್ಷ ಕಾರ್ಮಿಕರಿಗೆ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಶೇ.16.6ರಷ್ಟು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಂಡು ಬಂದಿತ್ತು. 75 ಕೋಟಿ ರೂ.ವೆಚ್ಚದಲ್ಲಿ ಟೆಂಡರ್ ಕರೆದು 26 ಸಾವಿರ ಕಾರ್ಮಿಕರಿಗೆ ನ್ಯೂಟ್ರಿಷಿಯನ್ ಕಿಟ್ ವಿತರಿಸಿತ್ತು. ಒಂದು ಕಿಟ್​ಗೆ ಮಾರುಕಟ್ಟೆಯಲ್ಲಿ 950 ರೂ, ಆದರೆ, ಸರ್ಕಾರವು ಪ್ರತಿ ಕಿಟ್​ಗೆ 2,600 ರೂಪಾಯಿ ನೀಡಿ ಖರೀದಿಸಿದೆ. ಅಲ್ಲದೆ,ಒಂದೇ ಕಂಪೆನಿಗೆ ಟೆಂಡರ್ ನೀಡುವ ಮೂಲಕ, ಭ್ರಷ್ಟಾಚಾರ ನಡೆಸಿದೆ ಎಂದು ಆರೋಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, 2023ರಲ್ಲಿ ಕಾರ್ಮಿಕ ಕಲ್ಯಾಣ ಮಂಡಳಿ ನಡೆಸಿದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಕಾರ್ಮಿಕರಿಗೆ ನ್ಯೂಟ್ರಿಷಿಯನ್ ಕಿಟ್ ವಿತರಿಸಲು 75 ಕೋಟಿ ರೂ. ಹಣವನ್ನು ಕಳೆದ ಆರ್ಥಿಕ ಸಾಲಿನ ಬಜೆಟ್​ನಲ್ಲಿ ಮೀಸಲಿರಿಸಲಾಗಿತ್ತು. ಇದರಂತೆ ನಿಯಾಮನುಸಾರ ಟೆಂಡರ್ ಕರೆದು ಕಿಟ್ ವಿತರಣೆ ಮಾಡಲಾಗಿದೆ. ಆಯ್ಕೆಯಾದ ಕಂಪನಿಯ ತೃಪ್ತಿಕರ ಕೆಲಸ ನಿರ್ವಹಣೆ ಬಗ್ಗೆ ಕ್ಷೇತ್ರಮಟ್ಟದ ಅಧಿಕಾರಿಗಳಿಂದ ದೃಢೀಕರಣ ಪಡೆಯಲಾಗಿದೆ. ಕಿಟ್ ಗುಣಮಟ್ಟ ಖಾತ್ರಿಪಡಿಸಿಕೊಳ್ಳಲು ಪ್ರತ್ಯೇಕ ಅಧಿಕಾರಿಗಳಿಂದ ತಪಾಸಣೆ ನಡೆಸಲಾಗಿದೆ. ಹೀಗಾಗಿ ಕಿಟ್ ವಿತರಣೆ ಹಾಗೂ ಟೆಂಡರ್​ನಲ್ಲಿ ಯಾವುದೇ ಭ್ರಷ್ಟಾಚಾರವೆಸಗಿಲ್ಲ ಎಂದು ಹೇಳಿದರು.

ಸರ್ಕಾರ ಟೆಂಡರ್ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಗುತ್ತಿಗೆದಾರರು ಯಾರೆಂದೂ ತಿಳಿಯುವುದಿಲ್ಲ. ವ್ಯವಸ್ಥೆಯಲ್ಲಿ ಯಾವುದೇ ಲೋಪದೋಷವಿದ್ದರೆ ಅದನ್ನು ಭ್ರಷ್ಟಾಚಾರ ಎಂದು ಕರೆಯಬೇಡಿ. ಕಿಟ್‌ಗಳನ್ನು ಟೆಂಡರ್ ಪ್ರಕ್ರಿಯೆಯ ಮೂಲಕ ವಿತರಿಸಲಾಗಿದೆ. ಹಿಂದಿನ ಅವಧಿಯಲ್ಲಿಯೂ ಅದೇ ವಿಧಾನವನ್ನು ಅನುಸರಿಸಲಾಗುತ್ತಿತ್ತು. ಟೆಂಡರ್ ಪ್ರಕ್ರಿಯೆಯು ತಪ್ಪಾಗಿದ್ದರೆ ಮಾತ್ರ ಆಕ್ಷೇಪಣೆಗಳನ್ನು ಸಲ್ಲಿಸಿ ಎಂದು ತಿಳಿಸಿದರು.

ಈ ವೇಳೆ ಬಿಜೆಪಿ ನಾಯಕರು ಈ ವಿಷಯದ ಕುರಿತು ಹೆಚ್ಚಿನ ವಿವರಗಳನ್ನು ಒತ್ತಾಯಿಸುತ್ತಿದ್ದಂತೆ, ಟೆಂಡರ್ ಬಗ್ಗೆ ಮಾಹಿತಿ ಪಡೆದುಕೊಂಡು ನಂತರ ತಿಳಿಸುವುದಾಗಿ ಸಚಿವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT