ಕೇಂದ್ರ ಸಚಿವ ವಿ. ಸೋಮಣ್ಣ 
ರಾಜ್ಯ

ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ದಗಂಗಾಶ್ರೀ ಹೆಸರಿಡಲು ರಾಜ್ಯ ಸರ್ಕಾರ ಮೀನಾಮೇಷ: ವಿ. ಸೋಮಣ್ಣ

ತುಮಕೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸೋಮಣ್ಣ, ಈಗಾಗಲೇ ನಗರದ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು 90 ಕೋಟಿ ರೂ.ಗಳ ಟೆಂಡರ್ ನೀಡಲಾಗಿದೆ ಎಂದರು.

ತುಮಕೂರು: ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಅವರ ಹೆಸರಿಡಲು ರಾಜ್ಯ ಸರ್ಕಾರ ಅನುಮೋದನೆ ನೀಡದೇ ವಿಳಂಬ ಮಾಡುತ್ತಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಶನಿವಾರ ಹೇಳಿದ್ದಾರೆ.

ಈ ಸಂಬಂಧ ರಾಜ್ಯ ಸರ್ಕಾರಕ್ಕೆ ನಾಲ್ಕು ಪತ್ರಗಳನ್ನು ಬರೆಯಲಾಗಿದೆ. ಆ ಪತ್ರಕ್ಕೆ ಸಹಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮೀನಾಮೇಷ ಎಣಿಸುತ್ತಿದ್ದಾರೆ. ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡಿದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಸೋಮಣ್ಣ ಆರೋಪಿಸಿದ್ದಾರೆ.

ತುಮಕೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸೋಮಣ್ಣ, ಈಗಾಗಲೇ ನಗರದ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು 90 ಕೋಟಿ ರೂ.ಗಳ ಟೆಂಡರ್ ನೀಡಲಾಗಿದೆ ಎಂದರು.

ಲಕ್ಷಾಂತರ ಬಡ ಮಕ್ಕಳಿಗೆ ಅನ್ನ, ಅಕ್ಷರ, ಆಶ್ರಯ ನೀಡಿ ಅವರ ಬದುಕಿಗೆ ದಾರಿದೀಪವಾಗಿರುವ ಸಿದ್ದಗಂಗಾ ಶ್ರೀಗಳ ಹೆಸರನ್ನು ತುಮಕೂರು ರೈಲ್ವೆ ನಿಲ್ದಾಣಕ್ಕೆ ಇಡುವ ಸಂಬಂಧ ಕೇಂದ್ರದಿಂದ ಬಂದಿರುವ ಪತ್ರಕ್ಕೆ ಸಹಿ ಮಾಡಲು ರಾಜ್ಯ ಸರ್ಕಾರ ಮೀನಾಮೇಷ ಎಣಿಸುತ್ತಿರುವುದು ಸರಿಯಲ್ಲ ಎಂದರು.

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಒಂದೇ ನಾಣ್ಯದ ಮುಖಗಳಾಗಿ ಕೆಲಸ ಮಾಡಬೇಕು. ಈ ರೀತಿ ವಿಳಂಬ ಧೋರಣೆ ಮಾಡುವುದು ಸರಿಯಲ್ಲ. ಕೂಡಲೇ ಮುಖ್ಯಮಂತ್ರಿಗಳು ಗಮನ ಹರಿಸಿ ಕೇಂದ್ರದ ಪತ್ರಕ್ಕೆ ಸಹಿ ಹಾಕುವ ಮೂಲಕ ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ದಗಂಗಾ ಶ್ರೀಗಳ ಹೆಸರಿಡಲು ಕೈಜೋಡಿಸಬೇಕು ಎಂದು ಅವರು ಒತ್ತಾಯಿಸಿದರು.

ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಮತ್ತು ಹಣಕಾಸು ಕಾರ್ಯದರ್ಶಿ ಸೇರಿದಂತೆ ಸಂಬಂಧಿತ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಆದರೆ ಪ್ರತಿಕ್ರಿಯೆ ತೃಪ್ತಿಕರವಾಗಿಲ್ಲ ಎಂದು ಸೋಮಣ್ಣ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

SCROLL FOR NEXT