ರಾಮಚಂದ್ರ ರಾವ್, ರನ್ಯಾ ರಾವ್ 
ರಾಜ್ಯ

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ದಂಧೆಗೆ ರಾಜ್ಯ ಪೊಲೀಸ್ ಪ್ರೋಟೋಕಾಲ್ ಅಧಿಕಾರಿ ಬಳಕೆ: ಕೋರ್ಟ್ ಗೆ ಡಿಆರ್‌ಐ

ಬಂಧಿತ ನಟಿ ಈ ವರ್ಷದ ಜನವರಿಯಿಂದ 27 ಬಾರಿ ದುಬೈಗೆ ಪ್ರಯಾಣಿಸಿದ್ದಾರೆ ಎಂದು ಡಿಆರ್​ಐ ಅಧಿಕಾರಿಗಳ ಪರವಾಗಿ ಮಧು ಎನ್​. ರಾವ್ ಅವರು ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದರು.

ಬೆಂಗಳೂರು: ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ದಂಧೆಗೆ ಕರ್ನಾಟಕ ಪೊಲೀಸ್ ಪ್ರೋಟೋಕಾಲ್ ಅಧಿಕಾರಿಗಳನ್ನು ಬಳಸಿಕೊಳ್ಳಲಾಗಿದೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್‌ಐ) ನ್ಯಾಯಾಲಯಕ್ಕೆ ತಿಳಿಸಿದೆ.

ರನ್ಯಾ ರಾವ್ ಜಾಮೀನು ಅರ್ಜಿ ವಿಚಾರಣೆ ವೇಳೆ, ಬಂಧಿತ ನಟಿ ಈ ವರ್ಷದ ಜನವರಿಯಿಂದ 27 ಬಾರಿ ದುಬೈಗೆ ಪ್ರಯಾಣಿಸಿದ್ದಾರೆ ಎಂದು ಡಿಆರ್​ಐ ಅಧಿಕಾರಿಗಳ ಪರವಾಗಿ ಮಧು ಎನ್​. ರಾವ್ ಅವರು ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದರು.

ರನ್ಯಾ ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಿಜಿಪಿ ರಾಂಕ್ ಅಧಿಕಾರಿ ಕೆ. ರಾಮಚಂದ್ರ ರಾವ್ ಅವರ ಮಲಮಗಳು.

"ಇಲ್ಲಿಯವರೆಗಿನ ತನಿಖೆಯ ವೇಳೆ, ಚಿನ್ನ ಕಳ್ಳಸಾಗಣೆಯಲ್ಲಿ ಅತ್ಯಾಧುನಿಕ ಭದ್ರತೆಯನ್ನು ಬೈಪಾಸ್ ಮಾಡಲು ರಾಜ್ಯ ಪೊಲೀಸ್ ಪ್ರೋಟೋಕಾಲ್ ಅಧಿಕಾರಿಗಳನ್ನು ಬಳಸಿಕೊಳ್ಳಲಾಗಿದೆ. ಪೊಲೀಸ್ ಅಧಿಕಾರಿ, ಕುಟುಂಬದವರಿಗೆ ಸಹಾಯ ಮಾಡಲು ಹೇಳಿದ್ದರು. ರಾಜ್ಯದ ಪೊಲೀಸ್ ಪ್ರೋಟೋಕಾಲ್ ಸರ್ವಿಸ್ ಸಹಾಯದಿಂದಲೇ ಸ್ಮಗ್ಲಿಂಗ್ ನಡೆದಿದೆ ಎಂಬುದು ನಮ್ಮ ಆರೋಪ. ಇಲ್ಲವಾದರೆ ರನ್ಯಾ ರಾವ್ ಗ್ರೀನ್ ಚಾನಲ್‌ವರೆಗೂ ಬರುವುದು ಅಸಾಧ್ಯವಾಗಿತ್ತು’ ಎಂದು ವಾದ ಮಾಡಲಾಗಿದೆ.

ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರು, ಡಿಆರ್‌ಐನ ಈ ವಾದವನ್ನು ಪರಿಗಣಿಸಿ ಶುಕ್ರವಾರ ರನ್ಯಾಗೆ ಜಾಮೀನು ನಿರಾಕರಿಸಿದ್ದಾರೆ.

ಅಂತರರಾಷ್ಟ್ರೀಯ ಸಂಪರ್ಕಗಳನ್ನು ಪರಿಶೀಲಿಸಲು ಹೆಚ್ಚಿನ ತನಿಖೆಯ ಅಗತ್ಯ ಇದೆ ಮತ್ತು ಕಸ್ಟಡಿಯಲ್ಲಿ ತನಿಖೆಯ ಸಮಯದಲ್ಲಿ ರನ್ಯಾ ಸಹಕರಿಸಲಿಲ್ಲ ಎಂದು ಡಿಆರ್‌ಐ ಹೇಳಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಆರ್​ಐ ಅಧಿಕಾರಿಗಳು ಹಿರಿಯ ಪೊಲೀಸ್ ಅಧಿಕಾರಿಗೆ ಸಮನ್ಸ್ ನೀಡಿದ್ದಾರೆ. ಏರ್ ಪೋರ್ಟ್​ನಲ್ಲಿ ನೇಮಕ ಆಗಿದ್ದ ನಾಲ್ವರು ಪ್ರೋಟೋಕಾಲ್ ಅಧಿಕಾರಿಗಳನ್ನ ಸಹ ವಿಚಾರಣೆ ಮಾಡಲಾಗಿದೆ. ರನ್ಯಾ ರಾವ್ ಬರುವಾಗ ಸೆಕ್ಯುರಿಟಿ ಕ್ಲಿಯರೆನ್ಸ್ ಮಾಡಲು ಹೇಳಿದ್ದರು. ಗ್ರೀನ್ ಚಾನೆಲ್ ಮೂಲಕ ಹೊರತರಲು ಸೂಚನೆ ನೀಡಿದ್ದರು. ಹಿರಿಯ ಅಧಿಕಾರಿ ಸೂಚನೆಯಂತೆ ನಾವು ನಮ್ಮ ಕೆಲಸ ಮಾಡಿದ್ದೇವೆ ಎಂದಿದ್ದಾರೆ. ಇದರಿಂದ ಪ್ರಾಥಮಿಕ ತನಿಖೆಯಲ್ಲಿ ಇಬ್ಬರು ಅಧಿಕಾರಿಗಳು ಕರ್ತವ್ಯ ಲೋಪ ಮಾಡಿರೋದು ಬೆಳಕಿಗೆ ಬಂದಿದೆ ಎಂದು ಡಿಆರ್‌ಐ ತಿಳಿಸಿದೆ.

ಸಾಮಾನ್ಯವಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ಸಂಬಂಧಿಗಳು ಬರುವಾಗ ಪ್ರೊಟೋಕಾಲ್​ಗೆ ಕರೆ ಮಾಡುತ್ತಾರೆ. ಹೀಗೆ ಪದೇ ಪದೇ ಪ್ರೊಟೋಕಾಲ್​ಗೆ ಕರೆ ಮಾಡಿರುವ ಪೊಲೀಸ್ ಅಧಿಕಾರಿಗಳ ಲಿಸ್ಟ್ ಮಾಡಲಾಗಿದೆ. ಗೋಲ್ಡ್​ ಸ್ಮಗ್ಲಿಂಗ್ ಮಾಡಿರುವ ರನ್ಯಾ ರಾವ್​​ಗೆ ಪ್ರೋಟೋಕಾಲ್ ನೀಡಲು ಕೇವಲ ಒಬ್ಬ ಪೊಲೀಸ್ ಅಧಿಕಾರಿ ಮಾತ್ರ ಕರೆ ಮಾಡಿಲ್ಲ. 3- 4 ಜನ ಅಧಿಕಾರಿಗಳು ರನ್ಯಾಗೆ ಪ್ರೋಟೋಕಾಲ್ ವ್ಯವಸ್ಥೆ ಮಾಡಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT