ರುದ್ರಪ್ಪ ಲಮಾಣಿ 
ರಾಜ್ಯ

ಅಪಘಾತದಲ್ಲಿ ಗಾಯಗೊಂಡಿದ್ದ ರುದ್ರಪ್ಪ ಲಮಾಣಿ ದಾವಣಗೆರೆಯಿಂದ ಬೆಂಗಳೂರಿಗೆ ಶಿಫ್ಟ್​: ಆರೋಗ್ಯದ ಬಗ್ಗೆ ಗುಟ್ಟು ಬಿಟ್ಟುಕೊಡದ ವೈದ್ಯರು!

ಇದೀಗ ಇಂದು ಬೆಳಗ್ಗೆ ಏಕಾಏಕಿ ದಾವಣಗೆರೆ ಎಸ್​​ಎಸ್​ ಆಸ್ಪತ್ರೆಯಿಂದ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ದಾವಣಗೆರೆ: ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ವಿಧಾನಸಭೆ ಉಪ ಸ್ಪೀಕರ್​ ರುದ್ರಪ್ಪ ಲಮಾಣಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.

ನಿನ್ನೆ ಬಜೆಟ್​​ ಅಧಿವೇಶನ ಮುಗಿಸಿಕೊಂಡು ಬೆಂಗಳೂರಿನಿಂದ ಹಾವೇರಿಗೆ ತೆರಳುವ ಮಾರ್ಗ ಮಧ್ಯ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜೆ.ಜೆ.ಹಳ್ಳಿ ಗ್ರಾಮದ ಬಳಿ ರಸ್ತೆ ಅಪಘಾತ ಸಂಭವಿಸಿತ್ತು.

ಕೂಡಲೇ ಅವರನ್ನು ದಾವಣಗೆರೆಯ S.S.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದ್ರೆ, ಇದೀಗ ಏಕಾಏಕಿ ರುದ್ರಪ್ಪ ಲಮಾಣಿ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜೆಜೆ ಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ ಬಳಿಕ ಕಾರನ್ನು ಸೈಡಿಗೆ ಹಾಕಿ ಇಳಿದಿದ್ದಾರೆ. ಅದೇ ವೇಳೆ ವೇಗವಾಗಿ ಬಂದ ಬೈಕ್​ವೊಂದು ರುದ್ರಪ್ಪ ಲಮಾಣಿ ಅವರಿಗೆ ಗುದ್ದಿದೆ. ಪರಿಣಾಮ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದು, ಹಣೆ, ಹಲ್ಲು, ಗದ್ದ ಮತ್ತು ಬಲ ಮೊಣಕಾಲಿಗೆ ಗಾಯವಾಗಿದ್ದು, ಕೂಡಲೇ ಅವರನ್ನು ಹಿರಿಯೂರಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ದಾವಣಗೆರೆಯ ಎಸ್​ಎಸ್​ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.

ಎಸ್​ಎಸ್​ ಆಸ್ಪತ್ರೆಯಲ್ಲಿ ರುದ್ರಪ್ಪ ಲಮಾಣಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಸಿಟಿ ಸ್ಕ್ಯಾನ್ ಸೇರಿದಂತೆ ಇತರೆ ಚಿಕಿತ್ಸೆ ನೀಡಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿದುಬಂದಿತ್ತು. ಆದ್ರೆ, ಇದೀಗ ಇಂದು (ಮಾರ್ಚ್ 15) ಬೆಳಗ್ಗೆ ಏಕಾಏಕಿ ದಾವಣಗೆರೆ ಎಸ್​​ಎಸ್​ ಆಸ್ಪತ್ರೆಯಿಂದ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಸದ್ಯ ರುದ್ರಪ್ಪ ಲಮಾಣಿ ಅವರ ಆರೋಗ್ಯದ ಬಗ್ಗೆ ವೈದ್ಯರಾಗಲಿ, ಅವರ ಕುಟುಂಬಸ್ಥರಾಗಲಿ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ