ಹಲ್ಲೆ ನಡೆಸಿದ ವೈದ್ಯೆ 
ರಾಜ್ಯ

ಬೆಂಗಳೂರು: ವೃದ್ಧ ಅತ್ತೆಯ ಮೇಲೆ ಹಲ್ಲೆ; ವಿಕ್ಟೋರಿಯಾ ಆಸ್ಪತ್ರೆ ಡಾಕ್ಟರ್ ಗೆ ಶೋಕಾಸ್ ನೋಟಿಸ್!

ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್‌ಐ) ತುರ್ತು ವೈದ್ಯಕೀಯ ಅಧಿಕಾರಿ ಡಾ.ಪ್ರಿಯದರ್ಶಿನಿ ಅವರು ತಮ್ಮ ಮಕ್ಕಳೊಂದಿಗೆ ಸೇರಿ ವಯಸ್ಸಾದ ಅತ್ತೆಯ ಮೇಲೆ ಹಲ್ಲೆ ನಡೆಸಿದ ವೀಡಿಯೊ ಇತ್ತೀಚೆಗೆ ವೈರಲ್ ಆಗಿದೆ.

ಬೆಂಗಳೂರು: ಮಕ್ಕಳೊಂದಿಗೆ ಸೇರಿ ವೃದ್ಧ ಅತ್ತೆಯ ಮೇಲೆ ಹಲ್ಲೆ ನಡೆಸಿ, ಕಿರುಕುಳ ನೀಡಿದ ಆರೋಪದ ಮೇಲೆ ವಿಕ್ಟೋರಿಯಾ ಆಸ್ಪತ್ರೆ ವೈದ್ಯೆಗೆ ವೈದ್ಯಕೀಯ ಶಿಕ್ಷಣ ಇಲಾಖೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್‌ಐ) ತುರ್ತು ವೈದ್ಯಕೀಯ ಅಧಿಕಾರಿ ಡಾ.ಪ್ರಿಯದರ್ಶಿನಿ ಅವರು ತಮ್ಮ ಮಕ್ಕಳೊಂದಿಗೆ ಸೇರಿ ವಯಸ್ಸಾದ ಅತ್ತೆಯ ಮೇಲೆ ಹಲ್ಲೆ ನಡೆಸಿದ ವೀಡಿಯೊ ಇತ್ತೀಚೆಗೆ ವೈರಲ್ ಆಗಿದೆ. ಕಳೆದ ಹತ್ತು ವರ್ಷಗಳಿಂದ ಆಕೆ ಅವರಿಗೆ ಕಿರುಕುಳ ನೀಡುತ್ತಿರುವುದಾಗಿ ವರದಿಗಳು ತಿಳಿಸಿವೆ.

ಆಕೆ ಈಗಾಗಲೇ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರೂ ತನ್ನ ಅತ್ತೆಯ ಮನೆಗೆ ಹೋಗಿ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾರ್ಚ್ 14 ರಂದು ವಿಡಿಯೋ ವೈರಲ್ ಆದ ನಂತರ ವಿಷಯ ಬೆಳಕಿಗೆ ಬಂದಿದೆ. ವೈದ್ಯರ ಮಾವ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಾಗಿದೆ. ವೈದ್ಯೆಯನ್ನು ಬಂಧಿಸಿ ನಂತರ ಅದೇ ದಿನ ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು ಎಂದು ಅವರು ಹೇಳಿದರು.

ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್ ಅವರ ನಿರ್ದೇಶನದ ಮೇರೆಗೆ ವಿಕ್ಟೋರಿಯಾ ಆಸ್ಪತ್ರೆಯ ಡಾ.ಪ್ರಿಯದರ್ಶಿನಿ ಅವರು ಘಟನೆಯ ಬಗ್ಗೆ ಲಿಖಿತ ವಿವರಣೆಯನ್ನು ಸಲ್ಲಿಸುವಂತೆ ಕೇಳಿದ್ದು, ತಪ್ಪಿದಲ್ಲಿ ಮುಂದಿನ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಮೊಹ್ಸಿನ್, ಇಂತಹ ವರ್ತನೆ ಇಲಾಖೆಗೆ ಮುಜುಗರ ತಂದಿದೆ ಎಂದು ಹೇಳಿದ್ದು, ಕೂಡಲೇ ಡಾ.ಪ್ರಿಯದರ್ಶಿನಿ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡುವಂತೆ ವೈದ್ಯಕೀಯ ಶಿಕ್ಷಣ ನಿರ್ದೇಶಕಿ (ಡಿಎಂಇ) ಡಾ.ಸುಜಾತಾ ರಾಥೋಡ್ ಅವರಿಗೆ ಸೂಚಿಸಿದ್ದಾರೆ.

ತಮ್ಮ ಆಸ್ತಿಯನ್ನು ಇತರರಿಗೆ ವರ್ಗಾಯಿಸಿದ ನಂತರ ವೃದ್ಧ ಪೋಷಕರನ್ನು ಆಸ್ಪತ್ರೆಗಳಲ್ಲಿ ಕೈಬಿಡುವ ಪ್ರಕರಣಗಳನ್ನು ಮೊಹ್ಸಿನ್ ಅವರು ಈ ಹಿಂದೆಯೇ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರ ಗಮನಕ್ಕೆ ತಂದಿದ್ದರು. ಅಂತಹ ಪ್ರಕರಣಗಳಲ್ಲಿ ಕಾನೂನು ಕ್ರಮಕ್ಕೆ ಅವರು ಶಿಫಾರಸುಗಳನ್ನು ಸಹ ಮಾಡಿದ್ದಾರೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT