ನೀರಿನ ವಿಚಾರಕ್ಕೆ ಮುರಿದು ಬಿದ್ದ ವಿವಾಹ  
ರಾಜ್ಯ

ಚಿತ್ರದುರ್ಗ: ಮದುವೆ ಮಂಟಪದಲ್ಲಿ ಕುಡಿಯುವ ನೀರಿನ ವಿಚಾರಕ್ಕೆ ಕಿರಿಕ್; ಮುರಿದು ಬಿತ್ತು 'ಟೆಕಿ'ಗಳ ಮದುವೆ!

ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿರತಹಳ್ಳಿ ಗ್ರಾಮದ ಯುವತಿ ಹಾಗೂ ಜಗಳೂರು ಪಟ್ಟಣದ ಯುವಕನ ವಿವಾಹ ನಿಶ್ಚಯವಾಗಿತ್ತು.

ಚಿತ್ರದುರ್ಗ: ಕುಡಿಯುವ ನೀರಿನ ವಿಚಾರಕ್ಕೆ ಜಗಳ ನಡೆದು, ಮುದುವೆ ಮುರಿದು ಬಿದ್ದ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಬಲಿಜ ಶ್ರೇಯ ಭವನದಲ್ಲಿ ಭಾನುವಾರ ನಡೆದಿದೆ.

ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿರತಹಳ್ಳಿ ಗ್ರಾಮದ ಯುವತಿ ಹಾಗೂ ಜಗಳೂರು ಪಟ್ಟಣದ ಯುವಕನ ವಿವಾಹ ನಿಶ್ಚಯವಾಗಿತ್ತು. ವಧು-ವರರಿಬ್ಬರೂ ಎಂಜಿನಿಯರಿಂಗ್ ಪದವೀಧರರಾಗಿದ್ದು, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಶನಿವಾರ ಆರತಕ್ಷತೆ ನಡೆದು, ಭಾನುವಾರ ಬೆಳಗ್ಗೆ 10.30ರಿಂದ 11.30ರ ಸಮಯದಲ್ಲಿ ಮುಹೂರ್ತ ನಡೆಯಬೇಕಿತ್ತು. ಈ ನಡುವೆ ಶನಿವಾರ ಸಂಜೆ ಆರತಕ್ಷತೆ ಮುಗಿಸಿಕೊಂಡು ಊಟಕ್ಕೆ ಹೋದ ವರನ ಕಡೆಯ ಕೆಲವರಿಗೆ ಕುಡಿಯುವ ನೀರು ಸಿಕ್ಕಿಲ್ಲ. ಇದೇ ವಿಚಾರಕ್ಕೆ ವಧು ಹಾಗೂ ವರನ ಕಡೆಯವರ ನಡುವೆ ಜಗಳ ನಡೆದಿದೆ. ನೀರಿನ ಜಗಳ ವಿಕೋಪಕ್ಕೆ ತಿರುಗುತ್ತಿದ್ದಂತೆ ಮದುವೆಯೇ ನಿಲ್ಲುವ ಸೂಚನೆ ಕಂಡು ಬಂದಿದೆ. ಈ ನಿಟ್ಟಿನಲ್ಲಿ ಹಿರಿಯರು ಶನಿವಾರ ರಾತ್ರಿಯಿಂದಲೇ ಸಂಧಾನ ನಡೆಸಿದ್ದರು.

ಕುಡಿಯೋ ನೀರಿನ ಗಲಾಟೆಗೆ ಲಕ್ಷ, ಲಕ್ಷ ಖರ್ಚು ಮಾಡಿ ಮದುವೆ ಮಾಡುತ್ತಿದ್ದ ಪೋಷಕರು ಶಾಕ್ ಆಗಿದ್ದಾರೆ. ರಾತ್ರಿ ನೀರಿನ ಜಗಳ‌ ಮರೆತು ಮದುವೆಗೆ ಒಪ್ಪುವಂತೆ ವರನ ಕಡೆಯವರು ಮನವಿ ಮಾಡಿದ್ದಾರೆ. ಆದರೆ ಈ ವರನ ಜೊತೆ ನನಗೆ ಮದುವೆ ಬೇಡವೇ ಬೇಡ ಎಂದು ವಧು ನಿರಾಕರಿಸಿದ್ದಾರೆ. ಮದುವೆ ಮುರಿದು ಬೀಳುತ್ತಿದ್ದಂತೆ ಕಲ್ಯಾಣ ಮಂಟಪದಿಂದ ಸಂಬಂಧಿಕರು ಗಂಟು ಮೂಟೆ ಕಟ್ಟಿ‌ ಮನೆಗೆ ತೆರಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Operation Sindoor ವೇಳೆ ಪಾಕಿಸ್ತಾನಕ್ಕೆ ನೆರವು, Azerbaijan ಶಾಕ್ ಕೊಟ್ಟ ಭಾರತ, SCO ಸದಸ್ಯತ್ವಕ್ಕೆ ತಡೆ! ಅಧ್ಯಕ್ಷ Ilham Aliyev ಹೇಳಿದ್ದೇನು?

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ: ಭೂಕುಸಿತದಲ್ಲಿ ಆರು ಮಂದಿ ಸಾವು ; 1,150 ಕ್ಕೂ ಹೆಚ್ಚು ರಸ್ತೆಗಳು ಬಂದ್

ಜಮ್ಮು- ಕಾಶ್ಮೀರದಲ್ಲಿ ಭಾರೀ ಮಳೆಗೆ ಪ್ರವಾಹ ಭೀತಿ: ಚೆನಾಬ್, ಝೇಲಂನಲ್ಲಿ ಅಪಾಯದ ಮಟ್ಟ ಮೀರಿದ ನೀರು; ಶಾಲೆಗಳಿಗೆ ರಜೆ, ಹೆದ್ದಾರಿ ಬಂದ್

ಭ್ರಷ್ಟಾಚಾರ ಆರೋಪ: ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಗೆ ನಿರ್ಧಾರ; ಎಸ್.ರವಿಕುಮಾರ್‌

Bengaluru stampede: 'ಅತ್ಯಂತ ಸಂತೋಷದ ಕ್ಷಣ ದುರಂತವಾಗಿ ಮಾರ್ಪಟ್ಟಿತು'; ಮೌನ ಮುರಿದ ವಿರಾಟ್ ಕೊಹ್ಲಿ

SCROLL FOR NEXT