ನೀರಿನ ವಿಚಾರಕ್ಕೆ ಮುರಿದು ಬಿದ್ದ ವಿವಾಹ  
ರಾಜ್ಯ

ಚಿತ್ರದುರ್ಗ: ಮದುವೆ ಮಂಟಪದಲ್ಲಿ ಕುಡಿಯುವ ನೀರಿನ ವಿಚಾರಕ್ಕೆ ಕಿರಿಕ್; ಮುರಿದು ಬಿತ್ತು 'ಟೆಕಿ'ಗಳ ಮದುವೆ!

ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿರತಹಳ್ಳಿ ಗ್ರಾಮದ ಯುವತಿ ಹಾಗೂ ಜಗಳೂರು ಪಟ್ಟಣದ ಯುವಕನ ವಿವಾಹ ನಿಶ್ಚಯವಾಗಿತ್ತು.

ಚಿತ್ರದುರ್ಗ: ಕುಡಿಯುವ ನೀರಿನ ವಿಚಾರಕ್ಕೆ ಜಗಳ ನಡೆದು, ಮುದುವೆ ಮುರಿದು ಬಿದ್ದ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಬಲಿಜ ಶ್ರೇಯ ಭವನದಲ್ಲಿ ಭಾನುವಾರ ನಡೆದಿದೆ.

ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿರತಹಳ್ಳಿ ಗ್ರಾಮದ ಯುವತಿ ಹಾಗೂ ಜಗಳೂರು ಪಟ್ಟಣದ ಯುವಕನ ವಿವಾಹ ನಿಶ್ಚಯವಾಗಿತ್ತು. ವಧು-ವರರಿಬ್ಬರೂ ಎಂಜಿನಿಯರಿಂಗ್ ಪದವೀಧರರಾಗಿದ್ದು, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಶನಿವಾರ ಆರತಕ್ಷತೆ ನಡೆದು, ಭಾನುವಾರ ಬೆಳಗ್ಗೆ 10.30ರಿಂದ 11.30ರ ಸಮಯದಲ್ಲಿ ಮುಹೂರ್ತ ನಡೆಯಬೇಕಿತ್ತು. ಈ ನಡುವೆ ಶನಿವಾರ ಸಂಜೆ ಆರತಕ್ಷತೆ ಮುಗಿಸಿಕೊಂಡು ಊಟಕ್ಕೆ ಹೋದ ವರನ ಕಡೆಯ ಕೆಲವರಿಗೆ ಕುಡಿಯುವ ನೀರು ಸಿಕ್ಕಿಲ್ಲ. ಇದೇ ವಿಚಾರಕ್ಕೆ ವಧು ಹಾಗೂ ವರನ ಕಡೆಯವರ ನಡುವೆ ಜಗಳ ನಡೆದಿದೆ. ನೀರಿನ ಜಗಳ ವಿಕೋಪಕ್ಕೆ ತಿರುಗುತ್ತಿದ್ದಂತೆ ಮದುವೆಯೇ ನಿಲ್ಲುವ ಸೂಚನೆ ಕಂಡು ಬಂದಿದೆ. ಈ ನಿಟ್ಟಿನಲ್ಲಿ ಹಿರಿಯರು ಶನಿವಾರ ರಾತ್ರಿಯಿಂದಲೇ ಸಂಧಾನ ನಡೆಸಿದ್ದರು.

ಕುಡಿಯೋ ನೀರಿನ ಗಲಾಟೆಗೆ ಲಕ್ಷ, ಲಕ್ಷ ಖರ್ಚು ಮಾಡಿ ಮದುವೆ ಮಾಡುತ್ತಿದ್ದ ಪೋಷಕರು ಶಾಕ್ ಆಗಿದ್ದಾರೆ. ರಾತ್ರಿ ನೀರಿನ ಜಗಳ‌ ಮರೆತು ಮದುವೆಗೆ ಒಪ್ಪುವಂತೆ ವರನ ಕಡೆಯವರು ಮನವಿ ಮಾಡಿದ್ದಾರೆ. ಆದರೆ ಈ ವರನ ಜೊತೆ ನನಗೆ ಮದುವೆ ಬೇಡವೇ ಬೇಡ ಎಂದು ವಧು ನಿರಾಕರಿಸಿದ್ದಾರೆ. ಮದುವೆ ಮುರಿದು ಬೀಳುತ್ತಿದ್ದಂತೆ ಕಲ್ಯಾಣ ಮಂಟಪದಿಂದ ಸಂಬಂಧಿಕರು ಗಂಟು ಮೂಟೆ ಕಟ್ಟಿ‌ ಮನೆಗೆ ತೆರಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IndiGo ಅವಾಂತರ ತಹಬದಿಗೆ: ಅಡಚಣೆ ಪ್ರಮಾಣ ಇಳಿಕೆ; 'ಹಂತಹಂತವಾಗಿ ಮರಳುತ್ತಿದ್ದೇವೆ' ಎಂದ CEO

LeT ಜೊತೆಗೆ ಒಪ್ಪಂದ; ಹಮಾಸ್ 'ಭಯೋತ್ಪಾದಕ ಸಂಘಟನೆ' ಎಂದು ಘೋಷಿಸಿ; ಭಾರತಕ್ಕೆ ಇಸ್ರೇಲ್ ಒತ್ತಾಯ!

ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ: 'ತಿಥಿ' ಹೀರೋಗೆ ಇಂದೆಂಥಾ ಸ್ಥಿತಿ?, ಅಭಿ ಈಗ ದಿನಗೂಲಿ ಕಾರ್ಮಿಕ!

ಮದುವೆ ರದ್ದು ಬೆನ್ನಲ್ಲೇ ಪರಸ್ಪರ 'ಅನ್‌ಫಾಲೋ' ಮಾಡಿಕೊಂಡ ಸ್ಮೃತಿ ಮಂಧಾನ, ಪಲಾಶ್ ಮುಚ್ಚಲ್!

Goa nightclub fire: ರೆಸ್ಟೋರೆಂಟ್‌ ಮಾಲೀಕ, ಕಾರ್ಯಕ್ರಮ ಆಯೋಜಕರ ವಿರುದ್ಧ FIR; ಸರಪಂಚ್ ಬಂಧನ!

SCROLL FOR NEXT