ಬಿಬಿಎಂಪಿ ಕಚೇರಿ 
ರಾಜ್ಯ

2024-25 ಹಣಕಾಸು ವರ್ಷ ಕೊನೆಗೊಳ್ಳುತ್ತಿದ್ದು, ಬಾಕಿ ಆಸ್ತಿ ತೆರಿಗೆ ಸಂಗ್ರಹ ಶೀಘ್ರಗೊಳಿಸಿ: ಅಧಿಕಾರಿಗಳಿಗೆ BBMP ಸೂಚನೆ

ಹಣಕಾಸು ವರ್ಷ ಮುಗಿಯಲು ಕೇವಲ ಎರಡು ವಾರಗಳು ಬಾಕಿ ಇದ್ದು, ಇನ್ನೂ 606 ಕೋಟಿ ರೂ.ಗಳನ್ನು ಸಂಗ್ರಹಸಬೇಕಿದೆ.

ಬೆಂಗಳೂರು: 2024-25ನೇ ಹಣಕಾಸು ವರ್ಷದ ಬಾಕಿ ಆಸ್ತಿ ತೆರಿಗೆಗಳ ಸಂಗ್ರಹಿಸಲು ಕ್ರಮ ಕೈಗೊಳ್ಳುವಂತೆ ಎಲ್ಲಾ ವಲಯ ಅಧಿಕಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸೂಚನೆ ನೀಡಿದೆ.

5,210 ಕೋಟಿ ರೂ. ಗುರಿ ಪೈಕಿ 4,604 ಕೋಟಿ ರೂ.ಗಳನ್ನು ಸಂಗ್ರಹಿಸಲಾಗಿದ್ದು, ನಿಗದಿತ ಗುರಿಯ ಶೇ. 88.36 ರಷ್ಟು ತಲುಪಲಾಗಿದೆ. ಬಾಕಿ ಆಸ್ತಿ ತೆರಿಗೆ ಸಂಗ್ರಹಕ್ಕೆ ಆಯಾ ವಲಯಗಳಲ್ಲಿನ ಅಧಿಕಾರಿಗಳು ಸ್ಥಳಕ್ಕೆ ತೆರಳಿ, ಸಂಗ್ರಹಿಸಬೇಕೆಂದು ಬಿಬಿಎಂಪಿ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಅವರು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

ಹಣಕಾಸು ವರ್ಷ ಮುಗಿಯಲು ಕೇವಲ ಎರಡು ವಾರಗಳು ಬಾಕಿ ಇದ್ದು, ಇನ್ನೂ 606 ಕೋಟಿ ರೂ.ಗಳನ್ನು ಸಂಗ್ರಹಸಬೇಕಿದೆ. ಹೆಚ್ಚಿನ ಆಸ್ತಿ ತೆರಿಗೆ ಬಾಕಿ ಹೊಂದಿರುವ ಕಂಪನಿಗಳು ಮತ್ತು ವಾಣಿಜ್ಯ ಆಸ್ತಿಗಳಿಗೆ ಭೇಟಿ ನೀಡಿ ಅವುಗಳನ್ನು ಸಂಗ್ರಹಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ, ತಿಂಗಳ ಅಂತ್ಯದ ವೇಳೆಗೆ ಬಿಬಿಎಂಪಿ ನಿಗದಿಪಡಿಸಿದ ಗುರಿಯನ್ನು ತಲುಪುವಂತೆ ಸೂಚಿಸಿದ್ದಾರೆಂದು ವರದಿಗಳು ತಿಳಿಸಿವೆ.

ಎಂಟು ಬಿಬಿಎಂಪಿ ವಲಯಗಳಲ್ಲಿ, ಯಲಹಂಕ ವಲಯವು ಶೇ. 99.97 ರಷ್ಟು ಆಸ್ತಿ ತೆರಿಗೆ ಸಂಗ್ರಹದೊಂದಿಗೆ ಅಗ್ರಸ್ಥಾನದಲ್ಲಿದ್ದು, ಯಲಹಂಕದಲ್ಲಿ 445.24 ಕೋಟಿ ರೂ. ಪೈಕಿ 445.15 ಕೋಟಿ ರೂ.ಗಳನ್ನು ಸಂಗ್ರಹಿಸಲಾಗಿದೆ.

ಬಿಬಿಎಂಪಿ ನೀಡಿರುವ ಮಾಹಿತಿಯ ಪ್ರಕಾರ, ಮಾರ್ಚ್ 14 ರವರೆಗೆ ಪಟ್ಟಿಯಲ್ಲಿ ಬೊಮ್ಮನಹಳ್ಳಿ ಕೊನೆಯ ಸ್ಥಾನದಲ್ಲಿದೆ, ಈ ಕ್ಷೇತ್ರದಲ್ಲಿ 585.11 ಕೋಟಿ ರೂ.ಗಳ ಗುರಿಯ ಪೈಕಿ 468.48 ಕೋಟಿ ರೂ.ಗಳ ಆಸ್ತಿ ತೆರಿಗೆ ಸಂಗ್ರಹವಾಗಿದೆ, ಇದರೊಂದಿಗೆ ಶೇಕಡಾ 80.06 ರ ಗುರಿಯನ್ನು ಸಾಧಿಸಲಾಗಿದೆ,

ಎಂಟು ವಲಯಗಳಲ್ಲಿ, ಮಹದೇವಪುರವು ಅತಿ ಹೆಚ್ಚು 1,309.04 ಕೋಟಿ ರೂ. ಗುರಿಯನ್ನು ಹೊಂದಿದ್ದು, ಅದರಲ್ಲಿ 1,223.30 ಕೋಟಿ ರೂ.ಗಳ ಸಂಗ್ರಹಿಸಲಾಗಿದೆ. ಈ ಮೂಲಕ ಶೇ.93.45 ಗುರಿ ತಲುಪಲಾಗಿದೆ ಎಂದು ತಿಳಿದುಬಂದಿದೆ.

ಬಾಕಿ ಇರುವ ಆಸ್ತಿ ತೆರಿಗೆ ಬಾಕಿಗಳನ್ನು ವಸೂಲಿ ಮಾಡಲು ಬಿಬಿಎಂಪಿ ಹಲವಾರು ಕ್ರಮಗಳನ್ನು ಕೈಗೊಂಡಿದ್ದು, ಈ ಪೈಕಿ One Time Settlement ಕೂಡ ಒಂದಾಗಿದೆ. ಇದಲ್ಲದೆ, ದೀರ್ಘಕಾಲದಿಂದ ಬಾಕಿ ಇರುವ ಆಸ್ತಿಗಳನ್ನು ಹರಾಜು ಮಾಡುವ ಮೂಲಕ ತೆರಿಗೆ ವಸೂಲಿ ಮಾಡಲಾಗಿದೆ ಎಂದು ಅಧಿಕಾರಿಗಲು ಹೇಳಿದ್ದಾರೆ.

ಈ ವರ್ಷ 5,000 ಕೋಟಿ ರೂ. ದಾಟುವ ಗುರಿಯನ್ನು ಹೊಂದಲಾಗಿದ್ದು, ಆಸ್ತಿ ತೆರಿಗೆ ಸಂಗ್ರಹದಲ್ಲಿ ಹೊಸ ಮಾನದಂಡಗಳನ್ನೂ ರೂಪಿಸಲಾಗವುದು ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT