ಶಾಸಕ ರಾಜುಕಾಗೆ 
ರಾಜ್ಯ

ಸರ್ಕಾರದ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ ವಿರುದ್ಧ ಕೈ ಶಾಸಕ ರಾಜು ಕಾಗೆ ಆಕ್ರೋಶ

ನಮ್ಮ ಸರ್ಕಾರದಲ್ಲಿ ಸಚಿವರಿಗೆ ಮತ್ತು ಕಾರ್ಯದರ್ಶಿಗೂ ತಾಳ ಮೇಳ ಇಲ್ಲ. ಇದೇ ರೀತಿ ಮುಂದುವರೆದರೆ ಶಾಸಕರು ಬೇರೆ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಎಚ್ಚರಿಕೆ ನೀಡಿದರು.

ಬೆಳಗಾವಿ: ಕಂದಾಯ ಇಲಾಖೆಯ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ ವಿರುದ್ಧ ಕಾಂಗ್ರೆಸ್‌ ಶಾಸಕ ರಾಜು ಕಾಗೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಗವಾಡ ಪಟ್ಟಣದಲ್ಲಿ ಸುಮಾರು 8.60 ಕೋಟಿ ರೂ. ವೆಚ್ಚದಲ್ಲಿ ಪ್ರಜಾ ಸೌಧ ಕಟ್ಟಡ ನಿರ್ಮಾಣ ಮಾಡಲು ಅನುಮೋದನೆ ನೀಡುವಂತೆ ರಾಜು ಕಾಗೆ ರಾಜೇಂದ್ರ ಕಠಾರಿಯಾ ಅವರ ಕಚೇರಿಗೆ ತೆರಳಿದ್ದರು. ಈ ವೇಳೆ ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ನನ್ನ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ರಾಜು ಕಾಗೆಯವರು, ಬೆಳಗಾವಿಯ ಕಾಗ್ವಾಡ್ ಪಟ್ಟಣದಲ್ಲಿ ಪ್ರಜಾಸೌಧ (ಸಾರ್ವಜನಿಕ ಆಡಳಿತ ಕಟ್ಟಡ) ನಿರ್ಮಾಣಕ್ಕೆ ಅನುಮೋದನೆ ಕೋರಿದಾಗ ನನಗೆ ಅವಮಾನ ಮಾಡಿದ್ದಾರೆಂದು ಹೇಳಿದ್ದಾರೆ.

ಅಲ್ಲಿ ಕೆರೆ ಇತ್ತು, ನಿಮಗೆ ಬುದ್ಧಿ ಇದೆಯೋ ಇಲ್ಲವೋ ಹೋಗಿ ಅಂತ ಹೇಳಿ ನನಗೆ ಅಪಮಾನ ಮಾಡಿದ್ದಾರೆ. ನನಗೆ ಅಪಮಾನ ಮಾಡಿದ ಕಾರ್ಯದರ್ಶಿ ವಿರುದ್ಧ ನಾಳೆ ಅಧಿವೇಶನದಲ್ಲಿ ಹಕ್ಕುಚ್ಯುತಿ ಮಂಡಿಸುತ್ತೇನೆ ಎಂದು ಗುಡುಗಿದ್ದಾರೆ.

ನಮ್ಮ ಸರ್ಕಾರದಲ್ಲಿ ಸಚಿವರಿಗೆ ಮತ್ತು ಕಾರ್ಯದರ್ಶಿಗೂ ತಾಳ ಮೇಳ ಇಲ್ಲ. ಇದೇ ರೀತಿ ಮುಂದುವರೆದರೆ ಶಾಸಕರು ಬೇರೆ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಎಚ್ಚರಿಕೆ ನೀಡಿದರು.

ಕಂದಾಯ ಇಲಾಖೆ ಕಾರ್ಯದರ್ಶಿ ಗ್ರಾಮ ಲೆಕ್ಕಿಗರು ಸೇರಿದಂತೆ ಇಲಾಖೆ ಅಧಿಕಾರಿಗಳೊಂದಿಗೆ ಸಹಕರಿಸುತ್ತಿಲ್ಲ, ಇದು ಆಡಳಿತಾತ್ಮಕ ಪ್ರಗತಿಗೆ ಮತ್ತಷ್ಟು ಅಡ್ಡಿಯಾಗುತ್ತಿದೆ ಎಂದು ಕಾಗೆ ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯೂಯಾರ್ಕ್ ನಲ್ಲೇ ನಿಮ್ಮ ಬುಡ ಗಟ್ಟಿ ಇಲ್ಲ; ಇನ್ನು ನಮ್ಮ ದೇಶದ ಅಧಿಕಾರ ಬದಲಾಯಿಸ್ತೀರಾ?: ಟ್ರಂಪ್ ಬಗ್ಗೆ ಇರಾನ್ ಅಪಹಾಸ್ಯ!

ಕೇಂದ್ರದಿಂದ ಅಸಹಕಾರ, ಮಲತಾಯಿ ಧೋರಣೆ, ಆದರೂ ವಿತ್ತೀಯ ಶಿಸ್ತು ಪಾಲನೆ: CM ಸಿದ್ದರಾಮಯ್ಯ

UPSC ಪರೀಕ್ಷೆ ಫಲಿತಾಂಶ ಪ್ರಕಟ: ಕಿರಣ್ ಕಾಮತೆ ರಾಜ್ಯಕ್ಕೆ ಟಾಪರ್; ಕರ್ನಾಟಕದ 22 ಅಭ್ಯರ್ಥಿಗಳು ಪಾಸ್

ಯುದ್ಧ ಕೊನೆಗೊಳಿಸಲು ಕೆಲವು ರಾಷ್ಟ್ರಗಳು 'ಮಧ್ಯಸ್ಥಿಕೆ' ಬಯಸುತ್ತಿವೆ: ಭೀಕರ ದಾಳಿಗಳ ನಡುವೆ ಇರಾನ್ ಅಧ್ಯಕ್ಷರ ಸ್ಫೋಟಕ ಹೇಳಿಕೆ!

ಸುಖೋಯ್ ವಿಮಾನ ದುರಂತ: Op Sindoor ನಲ್ಲಿ ಪಾಕ್ ಗೆ ನಡುಕ ಹುಟ್ಟಿಸಿದ್ದ ಹುತಾತ್ಮ ಪೈಲಟ್ Purvesh Duragkar

SCROLL FOR NEXT