ಶಾಸಕ ರಾಜುಕಾಗೆ 
ರಾಜ್ಯ

ಸರ್ಕಾರದ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ ವಿರುದ್ಧ ಕೈ ಶಾಸಕ ರಾಜು ಕಾಗೆ ಆಕ್ರೋಶ

ನಮ್ಮ ಸರ್ಕಾರದಲ್ಲಿ ಸಚಿವರಿಗೆ ಮತ್ತು ಕಾರ್ಯದರ್ಶಿಗೂ ತಾಳ ಮೇಳ ಇಲ್ಲ. ಇದೇ ರೀತಿ ಮುಂದುವರೆದರೆ ಶಾಸಕರು ಬೇರೆ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಎಚ್ಚರಿಕೆ ನೀಡಿದರು.

ಬೆಳಗಾವಿ: ಕಂದಾಯ ಇಲಾಖೆಯ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ ವಿರುದ್ಧ ಕಾಂಗ್ರೆಸ್‌ ಶಾಸಕ ರಾಜು ಕಾಗೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಗವಾಡ ಪಟ್ಟಣದಲ್ಲಿ ಸುಮಾರು 8.60 ಕೋಟಿ ರೂ. ವೆಚ್ಚದಲ್ಲಿ ಪ್ರಜಾ ಸೌಧ ಕಟ್ಟಡ ನಿರ್ಮಾಣ ಮಾಡಲು ಅನುಮೋದನೆ ನೀಡುವಂತೆ ರಾಜು ಕಾಗೆ ರಾಜೇಂದ್ರ ಕಠಾರಿಯಾ ಅವರ ಕಚೇರಿಗೆ ತೆರಳಿದ್ದರು. ಈ ವೇಳೆ ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ನನ್ನ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ರಾಜು ಕಾಗೆಯವರು, ಬೆಳಗಾವಿಯ ಕಾಗ್ವಾಡ್ ಪಟ್ಟಣದಲ್ಲಿ ಪ್ರಜಾಸೌಧ (ಸಾರ್ವಜನಿಕ ಆಡಳಿತ ಕಟ್ಟಡ) ನಿರ್ಮಾಣಕ್ಕೆ ಅನುಮೋದನೆ ಕೋರಿದಾಗ ನನಗೆ ಅವಮಾನ ಮಾಡಿದ್ದಾರೆಂದು ಹೇಳಿದ್ದಾರೆ.

ಅಲ್ಲಿ ಕೆರೆ ಇತ್ತು, ನಿಮಗೆ ಬುದ್ಧಿ ಇದೆಯೋ ಇಲ್ಲವೋ ಹೋಗಿ ಅಂತ ಹೇಳಿ ನನಗೆ ಅಪಮಾನ ಮಾಡಿದ್ದಾರೆ. ನನಗೆ ಅಪಮಾನ ಮಾಡಿದ ಕಾರ್ಯದರ್ಶಿ ವಿರುದ್ಧ ನಾಳೆ ಅಧಿವೇಶನದಲ್ಲಿ ಹಕ್ಕುಚ್ಯುತಿ ಮಂಡಿಸುತ್ತೇನೆ ಎಂದು ಗುಡುಗಿದ್ದಾರೆ.

ನಮ್ಮ ಸರ್ಕಾರದಲ್ಲಿ ಸಚಿವರಿಗೆ ಮತ್ತು ಕಾರ್ಯದರ್ಶಿಗೂ ತಾಳ ಮೇಳ ಇಲ್ಲ. ಇದೇ ರೀತಿ ಮುಂದುವರೆದರೆ ಶಾಸಕರು ಬೇರೆ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಎಚ್ಚರಿಕೆ ನೀಡಿದರು.

ಕಂದಾಯ ಇಲಾಖೆ ಕಾರ್ಯದರ್ಶಿ ಗ್ರಾಮ ಲೆಕ್ಕಿಗರು ಸೇರಿದಂತೆ ಇಲಾಖೆ ಅಧಿಕಾರಿಗಳೊಂದಿಗೆ ಸಹಕರಿಸುತ್ತಿಲ್ಲ, ಇದು ಆಡಳಿತಾತ್ಮಕ ಪ್ರಗತಿಗೆ ಮತ್ತಷ್ಟು ಅಡ್ಡಿಯಾಗುತ್ತಿದೆ ಎಂದು ಕಾಗೆ ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT