ಶ್ರೀನಿವಾಸ್ 
ರಾಜ್ಯ

ಕಾಂಗ್ರೆಸ್​ ಮುಖಂಡ ಶ್ರೀನಿವಾಸ್ ಕೊಲೆ ಪ್ರಕರಣ: ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ

ಈ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಶ್ರೀನಿವಾಸ್ ಅವರ ಪತ್ನಿ ಡಾ. ಎಸ್. ಚಂದ್ರಕಲಾ ಅವರು ಹೈಕೋರ್ಟ್​ಗೆ ಮನವಿ ಮಾಡಿದ್ದರು.

ಬೆಂಗಳೂರು: ಮಾಜಿ ಸ್ಪೀಕರ್ ಕೆಆರ್ ರಮೇಶ್ ಕುಮಾರ್ ಆಪ್ತ ಹಾಗೂ ಕೋಲಾರ ಕಾಂಗ್ರೆಸ್ ಮುಖಂಡ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸ್ ಕೊಲೆ ಪ್ರಕರಣದ ತನಿಖೆಯನ್ನು ಕರ್ನಾಟಕ ಹೈಕೋರ್ಟ್​ ಸೋಮವಾರ ಸಿಬಿಐಗೆ ವಹಿಸಿದೆ.

ಸಿಬಿಐ ತನಿಖೆ ಕೋರಿ ಶ್ರೀನಿವಾಸ್ ಅವರ ಪತ್ನಿ ಡಾ. ಎಸ್. ಚಂದ್ರಕಲಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಪ್ರಕರಣವನ್ನು ಸಿಬಿಐಗೆ ವಹಿಸಿ ಆದೇಶ ಹೊರಡಿಸಿದ್ದಾರೆ.

ಗೃಹ ಸಚಿವ ಜಿ ಪರಮೇಶ್ವರ್ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಆಪ್ತ ಎಂ ಶ್ರೀನಿವಾಸ್ ಅವರನ್ನು 2023 ಅಕ್ಟೋಬರ್ 23ರಂದು ಶ್ರೀನಿವಾಸಪುರ ಹೊರವಲಯದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದರು.

ಕೊಲೆಯ ಹಿಂದೆ ರಾಜಕೀಯ ಷಡ್ಯಂತ್ರವಿದೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಶ್ರೀನಿವಾಸ್ ಅವರ ಪತ್ನಿ ಡಾ. ಎಸ್. ಚಂದ್ರಕಲಾ ಅವರು ಹೈಕೋರ್ಟ್​ಗೆ ಮನವಿ ಮಾಡಿದ್ದರು.

ಸ್ಥಳೀಯ ಪೊಲೀಸರು ಹಾಗೂ ಸಿಐಡಿ ಅಧಿಕಾರಿಗಳು ಸಮರ್ಪಕ ತನಿಖೆ ನಡೆಸಿಲ್ಲ. ಸತ್ಯವನ್ನು ನೀರಿನಲ್ಲಿ ಮುಳುಗಿಸಲಾಗಿದೆ. ಹೀಗಾಗಿ ಸಿಬಿಐ ತನಿಖೆ ಅನಿವಾರ್ಯವೆಂದ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, 3 ತಿಂಗಳಿನಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ಸಿಬಿಐಗೆ ಸೂಚನೆ ನೀಡಿದೆ.

ಇನ್ನು ಸಿಬಿಐ ತನಿಖೆಗೆ ಸಹಕರಿಸುವಂತೆ ಪೊಲೀಸರಿಗೂ ಸಹ ಹೈಕೋರ್ಟ್​ ಸೂಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

LKG, UKG in Anganwadis: ರಾಜ್ಯದ 5000 ಅಂಗನವಾಡಿಗಳಲ್ಲಿ ನ.28ರಿಂದ ತರಗತಿಗಳು ಆರಂಭ..!

ಬಳ್ಳಾರಿಯಲ್ಲಿ 36 ಜೀನ್ಸ್ ಘಟಕಗಳು ಸ್ಥಗಿತ: ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷ, 22 ಕೋಟಿ ರೂ. ವೆಚ್ಚದ ತ್ಯಾಜ್ಯ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಸಿಎಂ ಅನುಮೋದನೆ

KPCC ಅಧ್ಯಕ್ಷ ಸ್ಥಾನದ ಬಗ್ಗೆ ಡಿ.ಕೆ.ಶಿವಕುಮಾರ್ ಅವರನ್ನೇ ಕೇಳಬೇಕು: ಸಚಿವ ಸತೀಶ್ ಜಾರಕಿಹೊಳಿ

ಎರಡೂವರೆ ವರ್ಷಗಳ ಕಾಂಗ್ರೆಸ್ ಆಡಳಿತ ಕನ್ನಡಿಗರಿಗೆ ಕೊಟ್ಟಿದ್ದು ಕೇವಲ ದೌರ್ಭಾಗ್ಯಗಳನ್ನ: ಆರ್.ಅಶೋಕ್

ಡಿ. 8ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಉತ್ತರ ಕರ್ನಾಟಕ ಸಮಸ್ಯೆ ಚರ್ಚೆಗೆ BJP ಆಗ್ರಹ

SCROLL FOR NEXT