ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ 
ರಾಜ್ಯ

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿರುವ ಸಚಿವರ ಹೆಸರು ಬಹಿರಂಗಪಡಿಸುವೆ: ಯತ್ನಾಳ್

ರನ್ಯಾ ಜೊತೆ ಯಾರೆಲ್ಲಾ ಸಂಬಂಧ ಹೊಂದಿದ್ದಾರೆ, ಅವರಿಗೆ ಯಾವ ರೀತಿಯ ಭದ್ರತೆ ಒದಗಿಸಲಾಗಿದೆ ಎಂಬುದನ್ನು ವಿಧಾನಸಭೆಯಲ್ಲಿ ಬಹಿರಂಗಪಡಿಸುತ್ತೇನೆ

ವಿಜಯಪುರ: ಕನ್ನಡ ನಟಿ ರನ್ಯಾ ರಾವ್ ಅವರ ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿರುವ ಇಬ್ಬರು ಸಚಿವರ ಬಗ್ಗೆ ನನಗೆ ತಿಳಿದಿದ್ದು, ಶೀಘ್ರವೇ ವಿಧಾನಸಭೆಯಲ್ಲಿ ಬಹಿರಂಗ ಪಡಿಸುವುದಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು, ರನ್ಯಾ ಜೊತೆ ಯಾರೆಲ್ಲಾ ಸಂಬಂಧ ಹೊಂದಿದ್ದಾರೆ, ಅವರಿಗೆ ಯಾವ ರೀತಿಯ ಭದ್ರತೆ ಒದಗಿಸಲಾಗಿದೆ ಎಂಬುದನ್ನು ವಿಧಾನಸಭೆಯಲ್ಲಿ ಬಹಿರಂಗಪಡಿಸುತ್ತೇನೆ. ಅವರು ಚಿನ್ನವನ್ನು ಎಲ್ಲಿಂದ ಪಡೆದರು ಎಂಬುದು ಸೇರಿದಂತೆ ಎಲ್ಲಾ ಮಾಹಿತಿಯನ್ನು ನಾವು ಸಂಗ್ರಹಿಸಿದ್ದೇವೆ... ನಾನು ಎಲ್ಲವನ್ನೂ ಬಹಿರಂಗಪಡಿಸುತ್ತೇನೆ ಎಂದಿದ್ದಾರೆ.

ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಸಚಿವರ ಹೆಸರುಗಳನ್ನು ಬಹಿರಂಗಪಡಿಸುವಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿ ಒತ್ತಾಯಿಸುತ್ತಿದೆ. 34 ವರ್ಷದ ರನ್ಯಾ ರಾವ್ ಅವರನ್ನು ಮಾರ್ಚ್ 3 ರಂದು ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಬಂಧಿಸಿತು.

ಅಧಿಕಾರಿಗಳು ಆಕೆಯಿಂದ 12.56 ಕೋಟಿ ರೂ. ಮೌಲ್ಯದ 14.2 ಕೆಜಿ ವಿದೇಶಿ ಮೂಲದ ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಂಡರು. ಮರುದಿನ, ಡಿಆರ್‌ಐ ಬೆಂಗಳೂರಿನಲ್ಲಿರುವ ಆಕೆಯ ನಿವಾಸದಿಂದ 2.06 ಕೋಟಿ ರೂ. ಮೌಲ್ಯದ ಚಿನ್ನಾಭರಣ ಮತ್ತು 2.67 ಕೋಟಿ ರೂ. ನಗದು ವಶಪಡಿಸಿಕೊಂಡಿತು.

ರನ್ಯಾ ಅವರು ಡಿಜಿಪಿ ದರ್ಜೆಯ ಪೊಲೀಸ್ ಅಧಿಕಾರಿ ಕೆ. ರಾಮಚಂದ್ರ ರಾವ್ ಅವರ ಮಲಮಗಳು, ಅವರು ಇತ್ತೀಚಿನವರೆಗೂ ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಶನಿವಾರ, ಕರ್ನಾಟಕ ಸರ್ಕಾರ ರಾಮಚಂದ್ರ ರಾವ್ ಅವರನ್ನು ಕಡ್ಡಾಯ ರಜೆಯ ಮೇಲೆ ಹೋಗಲು ಆದೇಶಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ಎಚ್ಚರಿಕೆಗೆ ತಲೆಬಾಗದ ಇರಾನ್​: ಸೌದಿ ನೆಲೆಯಲ್ಲಿ ಕ್ಷಿಪಣಿ ದಾಳಿ; ಅಮೆರಿಕಾದ 5 ಟ್ಯಾಂಕರ್ ವಿಮಾನಗಳಿಗೆ ಹಾನಿ..!

West Asia conflict effect: LPG ಕೊರತೆ ತೀವ್ರ; ಮನೆಗಳಲ್ಲಿ PNG, ಹೋಟೆಲ್ ಗಳು ಕಲ್ಲಿದ್ದಲು ಬಳಕೆ ಮಾಡುವಂತೆ ಕೇಂದ್ರ ಸರ್ಕಾರ ಸಲಹೆ

ಒಡಿಶಾ 'ಕೈ' ಶಾಸಕರಿಗೆ' ಟ್ರಬಲ್ ಶೂಟರ್ ಡಿಕೆಶಿ ಆತಿಥ್ಯ: 'ಆಪರೇಷನ್ ಕಮಲ' ತಡೆಗೆ ಕೈಗೊಂಡ ಮುನ್ನೆಚ್ಚರಿಕಾ ಕ್ರಮ; ಕಾಂಗ್ರೆಸ್ ಸಮರ್ಥನೆ

ಒಂದೇ ಸೂರಿನಡಿ ರಾಮ್-ರಹೀಮ್: ದ್ವೇಷ ಹರಡುವವರ ಮಧ್ಯೆ ಮುಸ್ಲಿಮರಿಗಾಗಿ ‘ಇಫ್ತಾರ್ ಕೂಟ’ ಆಯೋಜಿಸುತ್ತಿರುವ ಹಿಂದೂ ಮಹಿಳೆ..!

Strait of Hormuz: 'ಹೌದು.. ನಮ್ಮ ಆಪ್ತ ರಾಷ್ಟ್ರ'... ಭಾರತದ ನೌಕೆಗಳಿಗೆ ಅನುಮತಿ ಕುರಿತು ಇರಾನ್ ರಾಯಭಾರಿ ಹೇಳಿಕೆ!

SCROLL FOR NEXT