ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ 
ರಾಜ್ಯ

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿರುವ ಸಚಿವರ ಹೆಸರು ಬಹಿರಂಗಪಡಿಸುವೆ: ಯತ್ನಾಳ್

ರನ್ಯಾ ಜೊತೆ ಯಾರೆಲ್ಲಾ ಸಂಬಂಧ ಹೊಂದಿದ್ದಾರೆ, ಅವರಿಗೆ ಯಾವ ರೀತಿಯ ಭದ್ರತೆ ಒದಗಿಸಲಾಗಿದೆ ಎಂಬುದನ್ನು ವಿಧಾನಸಭೆಯಲ್ಲಿ ಬಹಿರಂಗಪಡಿಸುತ್ತೇನೆ

ವಿಜಯಪುರ: ಕನ್ನಡ ನಟಿ ರನ್ಯಾ ರಾವ್ ಅವರ ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿರುವ ಇಬ್ಬರು ಸಚಿವರ ಬಗ್ಗೆ ನನಗೆ ತಿಳಿದಿದ್ದು, ಶೀಘ್ರವೇ ವಿಧಾನಸಭೆಯಲ್ಲಿ ಬಹಿರಂಗ ಪಡಿಸುವುದಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು, ರನ್ಯಾ ಜೊತೆ ಯಾರೆಲ್ಲಾ ಸಂಬಂಧ ಹೊಂದಿದ್ದಾರೆ, ಅವರಿಗೆ ಯಾವ ರೀತಿಯ ಭದ್ರತೆ ಒದಗಿಸಲಾಗಿದೆ ಎಂಬುದನ್ನು ವಿಧಾನಸಭೆಯಲ್ಲಿ ಬಹಿರಂಗಪಡಿಸುತ್ತೇನೆ. ಅವರು ಚಿನ್ನವನ್ನು ಎಲ್ಲಿಂದ ಪಡೆದರು ಎಂಬುದು ಸೇರಿದಂತೆ ಎಲ್ಲಾ ಮಾಹಿತಿಯನ್ನು ನಾವು ಸಂಗ್ರಹಿಸಿದ್ದೇವೆ... ನಾನು ಎಲ್ಲವನ್ನೂ ಬಹಿರಂಗಪಡಿಸುತ್ತೇನೆ ಎಂದಿದ್ದಾರೆ.

ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಸಚಿವರ ಹೆಸರುಗಳನ್ನು ಬಹಿರಂಗಪಡಿಸುವಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿ ಒತ್ತಾಯಿಸುತ್ತಿದೆ. 34 ವರ್ಷದ ರನ್ಯಾ ರಾವ್ ಅವರನ್ನು ಮಾರ್ಚ್ 3 ರಂದು ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಬಂಧಿಸಿತು.

ಅಧಿಕಾರಿಗಳು ಆಕೆಯಿಂದ 12.56 ಕೋಟಿ ರೂ. ಮೌಲ್ಯದ 14.2 ಕೆಜಿ ವಿದೇಶಿ ಮೂಲದ ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಂಡರು. ಮರುದಿನ, ಡಿಆರ್‌ಐ ಬೆಂಗಳೂರಿನಲ್ಲಿರುವ ಆಕೆಯ ನಿವಾಸದಿಂದ 2.06 ಕೋಟಿ ರೂ. ಮೌಲ್ಯದ ಚಿನ್ನಾಭರಣ ಮತ್ತು 2.67 ಕೋಟಿ ರೂ. ನಗದು ವಶಪಡಿಸಿಕೊಂಡಿತು.

ರನ್ಯಾ ಅವರು ಡಿಜಿಪಿ ದರ್ಜೆಯ ಪೊಲೀಸ್ ಅಧಿಕಾರಿ ಕೆ. ರಾಮಚಂದ್ರ ರಾವ್ ಅವರ ಮಲಮಗಳು, ಅವರು ಇತ್ತೀಚಿನವರೆಗೂ ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಶನಿವಾರ, ಕರ್ನಾಟಕ ಸರ್ಕಾರ ರಾಮಚಂದ್ರ ರಾವ್ ಅವರನ್ನು ಕಡ್ಡಾಯ ರಜೆಯ ಮೇಲೆ ಹೋಗಲು ಆದೇಶಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT