ಡಾ. ಜಿ. ಪರಮೇಶ್ವರ 
ರಾಜ್ಯ

ಭಾರತ-ಬಾಂಗ್ಲಾ ಗಡಿ ಬಿಗಿಗೊಳಿಸಿ, ಅಕ್ರಮ ವಲಸಿಗರನ್ನು ಗಡಿಪಾರು ಮಾಡಲು ನಿಯಮ ಸರಳಗೊಳಿಸಿ: ಕೇಂದ್ರಕ್ಕೆ ಜಿ ಪರಮೇಶ್ವರ

ಬೆಂಗಳೂರಿನಲ್ಲಿ ಸೋಮವಾರ ನಡೆದ ವಿಧಾನ ಪರಿಷತ್ ಸಭೆಯಲ್ಲಿ, ಅಕ್ರಮ ಬಾಂಗ್ಲಾದೇಶಿ ವಲಸಿಗರ ಅಧಿಕೃತ ಸಂಖ್ಯೆಯನ್ನು ಸರ್ಕಾರಕ್ಕೆ ನೀಡಲಾಗಿದೆ. ಆದರೂ, ಅಕ್ರಮ ವಲಸಿಗರ ಸಂಖ್ಯೆ ಹೆಚ್ಚಿರುವ ಸಾಧ್ಯತೆ ಇರುತ್ತದೆ ಎಂದರು.

ಬೆಂಗಳೂರು: ಕೇಂದ್ರ ಸರ್ಕಾರವು ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಬೇಕು ಮತ್ತು ಅಕ್ರಮ ವಲಸಿಗರನ್ನು ನೇರವಾಗಿ ಗಡಿಪಾರು ಮಾಡಲು ನಿಯಮಗಳನ್ನು ಸರಳಗೊಳಿಸಬೇಕು ಎಂದು ಗೃಹ ಸಚಿವ ಜಿ ಪರಮೇಶ್ವರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ನಡೆದ ವಿಧಾನ ಪರಿಷತ್ ಸಭೆಯಲ್ಲಿ, ಅಕ್ರಮ ಬಾಂಗ್ಲಾದೇಶಿ ವಲಸಿಗರ ಅಧಿಕೃತ ಸಂಖ್ಯೆಯನ್ನು ಸರ್ಕಾರಕ್ಕೆ ನೀಡಲಾಗಿದೆ. ಆದರೂ, ಅಕ್ರಮ ವಲಸಿಗರ ಸಂಖ್ಯೆ ಹೆಚ್ಚಿರುವ ಸಾಧ್ಯತೆ ಇರುತ್ತದೆ ಎಂದರು.

ಕಳೆದ 20 ವರ್ಷಗಳಿಂದ ವಿಜಯಪುರ ಜಿಲ್ಲೆಯಲ್ಲಿ 15,000ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾದೇಶಿ ವಲಸಿಗರು ವಾಸಿಸುತ್ತಿದ್ದಾರೆ. ಅಕ್ರಮ ಬಾಂಗ್ಲಾದೇಶಿ ವಲಸಿಗರ ಭಾಷೆ ಮತ್ತು ದೈಹಿಕ ನೋಟವು ಭಾರತೀಯರಿಗಿಂತ ಭಿನ್ನವಾಗಿದ್ದರೂ, ಈ ವ್ಯಕ್ತಿಗಳು ಆಧಾರ್ ಕಾರ್ಡ್‌ಗಳು ಮತ್ತು ಪಡಿತರ ಚೀಟಿಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಿದ್ದ ಬಿಜೆಪಿ ಎಂಎಲ್‌ಸಿ ಪಿಎಚ್ ಪೂಜಾರ್‌ ಹೇಳಿಕೆಗೆ ಪರಮೇಶ್ವರ ಅವರು ಉತ್ತರಿಸಿದರು.

ಜನನ ಪ್ರಮಾಣಪತ್ರಗಳು ಮತ್ತು ಶಾಲಾ ವರ್ಗಾವಣೆ ಪ್ರಮಾಣಪತ್ರಗಳನ್ನು ಪರಿಶೀಲಿಸಲು ಪೂಜಾರ್ ಸರ್ಕಾರಕ್ಕೆ ಸೂಚಿಸಿದ್ದರು.

ಈ ವಿಷಯಕ್ಕೆ ಪ್ರತಿಕ್ರಿಯಿಸಿದ ಪರಮೇಶ್ವರ, '33 ಅಕ್ರಮ ಬಾಂಗ್ಲಾದೇಶಿಗಳನ್ನು ಪತ್ತೆಹಚ್ಚಿ ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಲಾಗಿದೆ. ಈ ವಿಷಯ ಸೂಕ್ಷ್ಮವಾಗಿದ್ದು, ನಾವು ಎಲ್ಲರ ದಾಖಲೆಗಳ ಬಗ್ಗೆ ಕೇಳಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಭಾರತ-ಪಾಕ್ ಗಡಿಯಲ್ಲಿ ಭದ್ರತೆಯನ್ನು ಬಲಪಡಿಸಲಾಗಿದ್ದು, ಭಾರತ-ಬಾಂಗ್ಲಾದೇಶ ಗಡಿಯನ್ನು ಬಲಪಡಿಸಬೇಕಾಗಿದೆ. ಲಕ್ಷಾಂತರ ಜನ ಅಕ್ರಮ ವಲಸಿಗರು ಪ್ರವೇಶಿಸಿದ್ದಾರೆ ಮತ್ತು ದೇಶಾದ್ಯಂತ ಹರಡಿದ್ದಾರೆ. ಕರ್ನಾಟಕದಲ್ಲಿ, ಚಿಕ್ಕಮಗಳೂರು, ಮಡಿಕೇರಿ ಮತ್ತು ಉಡುಪಿಯಲ್ಲಿಯೂ ಸಹ ನೆಲೆಸಿದ್ದಾರೆ' ಎಂದು ಹೇಳಿದರು.

ಕರ್ನಾಟಕದಲ್ಲಿ ಬಾಂಗ್ಲಾದೇಶಿ ವಲಸಿಗರು ಮಾತ್ರವಲ್ಲದೆ, 10 ಪಾಕಿಸ್ತಾನಿ ಪ್ರಜೆಗಳು ವಾಸಿಸುತ್ತಿದ್ದಾರೆ. ಅವರನ್ನು ಗಡಿಪಾರು ಮಾಡಲಾಗಿದೆ ಎಂದು ಅವರು ವಿಧಾನ ಪರಿಷತ್‌ಗೆ ಮಾಹಿತಿ ನೀಡಿದರು. ಭಾನುವಾರ ಮಂಗಳೂರಿನಲ್ಲಿ 75 ಕೋಟಿ ರೂ. ಮೌಲ್ಯದ ಮಾದಕವಸ್ತು ಪತ್ತೆ ಪ್ರಕರಣವನ್ನು ಪರಮೇಶ್ವರ ನೆನಪಿಸಿಕೊಂಡರು.

'ಅಕ್ರಮ ಆಫ್ರಿಕನ್ ವಲಸಿಗರು ಸಹ ಇಲ್ಲಿ ಕಂಡುಬರುತ್ತಾರೆ. ಪ್ರಕರಣದಲ್ಲಿ ಸಿಕ್ಕಿಹಾಕಿಕೊಳ್ಳುವುದು ಮತ್ತು ಜಾಮೀನಿನ ಮೇಲೆ ಹೊರಬರುವುದು ಅವರ ಕಾರ್ಯ ವಿಧಾನವಾಗಿದೆ. ಅವರನ್ನು ಗಡಿಪಾರು ಮಾಡುವುದು ಕಷ್ಟವಾಗುತ್ತದೆ. ಅವರು ಪರಿಸ್ಥಿತಿಯ ಲಾಭವನ್ನು ಪಡೆದುಕೊಳ್ಳುತ್ತಾರೆ. ಅಂತಹ ಪ್ರಕರಣಗಳಲ್ಲಿನ ವಲಸಿಗರನ್ನು ನೇರವಾಗಿ ಗಡಿಪಾರು ಮಾಡಲು ಕೇಂದ್ರವು ನಿಯಮಗಳನ್ನು ರೂಪಿಸಬೇಕು' ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ