ಪುನೀತ್ ರಾಜ್ ಕುಮಾರ್ ಅವರ ಅತ್ತೆ ನಾಗಮ್ಮ 
ರಾಜ್ಯ

Video: 'ಒಮ್ಮೆ ಬಂದು ನೋಡ್ಕೊಂಡು ಹೋಗು ಕಂದಾ'; ಸೋದರತ್ತೆ ನಾಗಮ್ಮಗೆ ಇನ್ನೂ ತಿಳಿದಿಲ್ಲ Puneet Rajkumar ಸಾವಿನ ವಿಚಾರ

ಅಚ್ಚರಿಯಾದರೂ ಇದು ಸತ್ಯ.. ಪುನೀತ್ ರಾಜ್​ಕುಮಾರ್ ಇಲ್ಲ ಎಂಬ ಸುದ್ದಿ ಇಡೀ ಜಗತ್ತಿಗೆ ಗೊತ್ತಿದೆ. ಆದರೆ, ಪುನೀತ್ ಅವರ ಸೋದರತ್ತೆ ನಾಗಮ್ಮನಿಗೆ ಮಾತ್ರ ಈ ವಿಚಾರ ಇನ್ನೂ ತಿಳಿದಿಲ್ಲ.

ಚಾಮರಾಜನಗರ: ಕನ್ನಡದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನಗಲಿ ವರ್ಷಗಳೇ ಕಳೆದರೂ ಅವರ ಸೋದರತ್ತೆ ನಾಗಮ್ಮ ಅವರಿಗೆ ಮಾತ್ರ ಅಪ್ಪು ಸಾವಿನ ವಿಚಾರ ಇನ್ನೂ ತಿಳಿದಿಲ್ಲ..

ಅಚ್ಚರಿಯಾದರೂ ಇದು ಸತ್ಯ.. ಪುನೀತ್ ರಾಜ್​ಕುಮಾರ್ ಇಲ್ಲ ಎಂಬ ಸುದ್ದಿ ಇಡೀ ಜಗತ್ತಿಗೆ ಗೊತ್ತಿದೆ. ಆದರೆ, ಪುನೀತ್ ಅವರ ಸೋದರತ್ತೆ ನಾಗಮ್ಮನಿಗೆ ಮಾತ್ರ ಈ ವಿಚಾರ ಇನ್ನೂ ತಿಳಿದಿಲ್ಲ. ಪುನೀತ್ ಜನ್ಮದಿನದ ಪ್ರಯುಕ್ತ ಪುನೀತ್ ರಾಜ್ ಕುಮಾರ್ ಅವರಿಗೆ ಶುಭ ಹಾರೈಸಿರುವ ನಾಗಮ್ಮ, ಒಮ್ಮೆ ಬಂದು ನೊಡ್ಕೊಂಡು ಹೋಗು ಕಂದಾ ಎಂದು ಕೋರಿದ್ದಾರೆ.

ಕರ್ನಾಟಕದಾದ್ಯಂತ ನಟ ಪುನೀತ್ ರಾಜ್ ಕುಮಾರ್ ಜನ್ಮದಿನದ ನಿಮಿತ್ತ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿ ಕೊಂಡು ಪುನೀತ್ ರಾಜ್ ಕುಮಾರ್ ಅವರನ್ನು ಸ್ಮರಣೆ ಮಾಡಿಕೊಳ್ಳುತ್ತಿದ್ದರೆ ಅತ್ತ ಅವರ ಸೋದರತ್ತೆ ನಾಗಮ್ಮ ಅವರು ಮಾತ್ರ ಪುನೀತ್ ಒಮ್ಮೆ ನನ್ನನ್ನು ಬಂದು ನೋಡಿಕೊಂಡು ಹೋಗು ಎಂದು ಮನವಿ ಮಾಡಿದ್ದಾರೆ.

ನಟ ಪುನೀತ್ ರಾಜ್ ಕುಮಾರ್ ಗೆ ಜನ್ಮ ದಿನದ ನಿಮಿತ್ತ ಶುಭ ಕೋರಿರುವ ನಾಗಮ್ಮ ಅವರು, ‘ಚೆನ್ನಾಗಿದಿಯಾ ಮಗನೇ? ನಿನಗೆ 50 ವರ್ಷ ಆಗಿದೆ. ನಿನಗೆ 50 ವರ್ಷ ಆಯ್ತಲ್ಲೋ’ ಎಂದು ಅವರು ಮಾತನಾಡಿದ್ದಾರೆ. ಅಪ್ಪುಗೆ 50 ವರ್ಷ ತುಂಬಿತು ಎಂದು ಹೇಳಿದಾಗ ಅವರ ಸಂತಸಕ್ಕೆ ಪಾರವೇ ಇರಲಿಲ್ಲ. ಈ ವೇಳೆ ನನ್ನನ್ನ ಒಂದ್ ಸಾರಿ ಬಂದು ನೋಡ್ಕೊಂಡ್ ಹೋಗು ಕಂದಾ ಎಂದೂ ನಾಗಮ್ಮ ಕೇಳಿಕೊಂಡಿದ್ದಾರೆ.

ನಾಗಮ್ಮ ಅವರ ಮನವಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಅಪ್ಪು ನಿಧನರಾಗಿರುವ ವಿಚಾರ ತಿಳಿದರೆ ಶಾಕ್ ಆಗುತ್ತದೆ ಎಂಬ ಕಾರಣಕ್ಕೆ ನಾಗಮ್ಮ ಅವರಿಂದ ಈ ವಿಚಾರವನ್ನು ಮುಚ್ಚಿಡಲಾಗಿದೆ. ನಾಗಮ್ಮ ಅವರು ಅಪ್ಪು ಬಗ್ಗೆ ವಿಚಾರಿಸಿದಾಗಲೆಲ್ಲಾ ಅಪ್ಪು ಶೂಟಿಂಗ್‌ನಲ್ಲಿ ಬ್ಯುಸಿ ಇದ್ದಾರೆ ಎಂದು ಸಬೂಬು ಹೇಳಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT