ಪುನೀತ್ ರಾಜ್ ಕುಮಾರ್ ಅವರ ಅತ್ತೆ ನಾಗಮ್ಮ 
ರಾಜ್ಯ

Video: 'ಒಮ್ಮೆ ಬಂದು ನೋಡ್ಕೊಂಡು ಹೋಗು ಕಂದಾ'; ಸೋದರತ್ತೆ ನಾಗಮ್ಮಗೆ ಇನ್ನೂ ತಿಳಿದಿಲ್ಲ Puneet Rajkumar ಸಾವಿನ ವಿಚಾರ

ಅಚ್ಚರಿಯಾದರೂ ಇದು ಸತ್ಯ.. ಪುನೀತ್ ರಾಜ್​ಕುಮಾರ್ ಇಲ್ಲ ಎಂಬ ಸುದ್ದಿ ಇಡೀ ಜಗತ್ತಿಗೆ ಗೊತ್ತಿದೆ. ಆದರೆ, ಪುನೀತ್ ಅವರ ಸೋದರತ್ತೆ ನಾಗಮ್ಮನಿಗೆ ಮಾತ್ರ ಈ ವಿಚಾರ ಇನ್ನೂ ತಿಳಿದಿಲ್ಲ.

ಚಾಮರಾಜನಗರ: ಕನ್ನಡದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನಗಲಿ ವರ್ಷಗಳೇ ಕಳೆದರೂ ಅವರ ಸೋದರತ್ತೆ ನಾಗಮ್ಮ ಅವರಿಗೆ ಮಾತ್ರ ಅಪ್ಪು ಸಾವಿನ ವಿಚಾರ ಇನ್ನೂ ತಿಳಿದಿಲ್ಲ..

ಅಚ್ಚರಿಯಾದರೂ ಇದು ಸತ್ಯ.. ಪುನೀತ್ ರಾಜ್​ಕುಮಾರ್ ಇಲ್ಲ ಎಂಬ ಸುದ್ದಿ ಇಡೀ ಜಗತ್ತಿಗೆ ಗೊತ್ತಿದೆ. ಆದರೆ, ಪುನೀತ್ ಅವರ ಸೋದರತ್ತೆ ನಾಗಮ್ಮನಿಗೆ ಮಾತ್ರ ಈ ವಿಚಾರ ಇನ್ನೂ ತಿಳಿದಿಲ್ಲ. ಪುನೀತ್ ಜನ್ಮದಿನದ ಪ್ರಯುಕ್ತ ಪುನೀತ್ ರಾಜ್ ಕುಮಾರ್ ಅವರಿಗೆ ಶುಭ ಹಾರೈಸಿರುವ ನಾಗಮ್ಮ, ಒಮ್ಮೆ ಬಂದು ನೊಡ್ಕೊಂಡು ಹೋಗು ಕಂದಾ ಎಂದು ಕೋರಿದ್ದಾರೆ.

ಕರ್ನಾಟಕದಾದ್ಯಂತ ನಟ ಪುನೀತ್ ರಾಜ್ ಕುಮಾರ್ ಜನ್ಮದಿನದ ನಿಮಿತ್ತ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿ ಕೊಂಡು ಪುನೀತ್ ರಾಜ್ ಕುಮಾರ್ ಅವರನ್ನು ಸ್ಮರಣೆ ಮಾಡಿಕೊಳ್ಳುತ್ತಿದ್ದರೆ ಅತ್ತ ಅವರ ಸೋದರತ್ತೆ ನಾಗಮ್ಮ ಅವರು ಮಾತ್ರ ಪುನೀತ್ ಒಮ್ಮೆ ನನ್ನನ್ನು ಬಂದು ನೋಡಿಕೊಂಡು ಹೋಗು ಎಂದು ಮನವಿ ಮಾಡಿದ್ದಾರೆ.

ನಟ ಪುನೀತ್ ರಾಜ್ ಕುಮಾರ್ ಗೆ ಜನ್ಮ ದಿನದ ನಿಮಿತ್ತ ಶುಭ ಕೋರಿರುವ ನಾಗಮ್ಮ ಅವರು, ‘ಚೆನ್ನಾಗಿದಿಯಾ ಮಗನೇ? ನಿನಗೆ 50 ವರ್ಷ ಆಗಿದೆ. ನಿನಗೆ 50 ವರ್ಷ ಆಯ್ತಲ್ಲೋ’ ಎಂದು ಅವರು ಮಾತನಾಡಿದ್ದಾರೆ. ಅಪ್ಪುಗೆ 50 ವರ್ಷ ತುಂಬಿತು ಎಂದು ಹೇಳಿದಾಗ ಅವರ ಸಂತಸಕ್ಕೆ ಪಾರವೇ ಇರಲಿಲ್ಲ. ಈ ವೇಳೆ ನನ್ನನ್ನ ಒಂದ್ ಸಾರಿ ಬಂದು ನೋಡ್ಕೊಂಡ್ ಹೋಗು ಕಂದಾ ಎಂದೂ ನಾಗಮ್ಮ ಕೇಳಿಕೊಂಡಿದ್ದಾರೆ.

ನಾಗಮ್ಮ ಅವರ ಮನವಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಅಪ್ಪು ನಿಧನರಾಗಿರುವ ವಿಚಾರ ತಿಳಿದರೆ ಶಾಕ್ ಆಗುತ್ತದೆ ಎಂಬ ಕಾರಣಕ್ಕೆ ನಾಗಮ್ಮ ಅವರಿಂದ ಈ ವಿಚಾರವನ್ನು ಮುಚ್ಚಿಡಲಾಗಿದೆ. ನಾಗಮ್ಮ ಅವರು ಅಪ್ಪು ಬಗ್ಗೆ ವಿಚಾರಿಸಿದಾಗಲೆಲ್ಲಾ ಅಪ್ಪು ಶೂಟಿಂಗ್‌ನಲ್ಲಿ ಬ್ಯುಸಿ ಇದ್ದಾರೆ ಎಂದು ಸಬೂಬು ಹೇಳಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT