ಸಿದ್ದರಾಮಯ್ಯ ಹಾಗೂ ಸಚಿವ ಮಹದೇವಪ್ಪ. 
ರಾಜ್ಯ

SCSP/TSP ಅನುದಾನ ಗ್ಯಾರಂಟಿ ಯೋಜನೆಗಳಿಗೆ ಬಳಕೆ: ಸಚಿವ ಮಹದೇವಪ್ಪ ನಿವಾಸದಲ್ಲಿ ದಲಿತ ನಾಯಕರ ಸಭೆ, ವಿರೋಧ

ಗ್ಯಾರಂಟಿಗಳಿಗೆ ದಲಿತರ ಹಣ ನೀಡುವುದರಿಂದ ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯ ಮೂಲ ಉದ್ದೇಶ ಈಡೇರಿದಂತೆ ಆಗುವುದಿಲ್ಲ.

ಬೆಂಗಳೂರು: ಎಸ್‌ಸಿಎಸ್‌ಪಿ/ಟಿಎಸ್‌ಪಿಗೆ ಮೀಸಲಿಟ್ಟಿದ್ದ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಹೋರಾಟ ನಡೆಸುತ್ತಿದ್ದು, ಇದರ ನಡುವಲ್ಲೇ ಸಚಿವ ನಿವಾಸದಲ್ಲಿ ದಲಿತ ನಾಯಕರು ಸಭೆ ಸೇರಿ ಚರ್ಚೆ ನಡೆಸಿದ್ದಾರೆ.

ಗ್ಯಾರಂಟಿಗಳಿಗೆ ದಲಿತರ ಹಣ ನೀಡುವುದರಿಂದ ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯ ಮೂಲ ಉದ್ದೇಶ ಈಡೇರಿದಂತೆ ಆಗುವುದಿಲ್ಲ. ಹಾಗಾಗಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ನೀಡದಂತೆ ಮನವಿ ಮಾಡಲು ನಾಯಕರು ಸಲಹೆ ನೀಡಿದ್ದಾರೆಂದು ತಿಳಿದುಬಂದಿದೆ.

ಗೃಹ ಸಚಿವ ಡಾ. ಜಿ. ಪರಮೇಶ್ವರ ನೇತೃತ್ವದಲ್ಲಿ ನಡೆದ ನಡೆದ ಸಭೆಯಲ್ಲಿ ಕಾಂಗ್ರೆಸ್ ನಾಯಕರು ಈ ವಿಷಯದ ಬಗ್ಗೆ ಚರ್ಚಿಸಿ, ಸರ್ಕಾರವು ಹಣವನ್ನು ಬೇರೆಡೆಗೆ ತಿರುಗಿಸುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.

ಸರ್ಕಾರವು ಹಣ ಬೇರೆಡೆಗೆ ತಿರುಗಿಸಿದ ಅನುದಾನವನ್ನು ಅದೇ ಸಮುದಾಯಗಳ ಫಲಾನುಭವಿಗಳಿಗೆ ಬಳಸುತ್ತಿದೆ ಎಂದು ಹೇಳಿಕೊಂಡಿರಬಹುದು, ಆದರೆ ಅದನ್ನು ದೃಢೀಕರಿಸಲು ಯಾವುದೇ ದತ್ತಾಂಶವಿಲ್ಲ ಎಂದು ಶಾಸಕರು ಸಭೆಯಲ್ಲಿ ತಿಳಿಸಿದರು.

ಬಜೆಟ್‌ನಲ್ಲಿ ಅಲ್ಪಸಂಖ್ಯಾತರು ಮತ್ತು ಒಬಿಸಿಗಳಿಗೆ ಹಂಚಿಕೆಯಾದ ಅನುದಾನವನ್ನು ಸಮುದಾಯಗಳ ಫಲಾನುಭವಿಗಳಿಗೆ ನಿಧಿಗಾಗಿ ಬಳಸುತ್ತಿಲ್ಲ. ಆದರೆ, ಎಸ್‌ಸಿ/ಎಸ್‌ಟಿಗಳನ್ನೇಕೆ ಹಗುರವಾಗಿ ಪರಿಗಣಿಸಿದೆ? ಎಂದು ಪ್ರಶ್ನಿಸಿದರು.

ಅಲ್ಲದೆ, ಬಜೆಟ್ ಅಧಿವೇಶನ ಮುಕ್ತಾಯಗೊಂಡ ಬಳಿಕ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನಗಳನ್ನು ಗ್ಯಾರಂಟಿ ಮತ್ತು ಇತರ ಯೋಜನೆಗಳಿಗೆ ಬಳಸಬಾರದು, ಕನಿಷ್ಠ ಶೇಕಡ 40 ರಷ್ಟು ಅನುದಾನವನ್ನು ಎಸ್‌ಸಿ/ಎಸ್‌ಟಿಗಳ ಕಲ್ಯಾಣಕ್ಕಾಗಿ ಬಳಸಿಕೊಳ್ಳಬೇಕು ಎಂದು ಒತ್ತಾಯಿಸಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.

ಈ ಸಭೆಯನ್ನು ಬಜೆಟ್'ಗೂ ಮುನ್ನವೇ ನಡೆಸಬೇಕಿತ್ತು. ಸಿಎಂ ಮೇಲೆ ಒತ್ತಡ ಹೇರಲು ಇದು ಸಹಾಯ ಮಾಡುತ್ತಿತ್ತು. ಈ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಶಾಸಕರೊಬ್ಬರು ತಿಳಿಸಿದ್ದಾರೆ.

ಸಭೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಸತೀಶ್ ಜಾರಕಿಹೊಳಿ ಅವರು, ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನದ ಮೂಲಕ ಹೊಸ ಕಲ್ಯಾಣ ಯೋಜನೆಗಳನ್ನು ರೂಪಿಸುವ ಮೂಲಕ ಸಮುದಾಯಗಳನ್ನು ಸಬಲೀಕರಣಗೊಳಿಸುವ ಬಗ್ಗೆ ಚರ್ಚಿಸಲಾಗಿದೆ. ಎಸ್‌ಸಿ ಸಮುದಾಯದ ಒಳಮೀಸಲಾತಿಯ ವಿಷಯಗಳ ಬಗ್ಗೆಯೂ ಚರ್ಚೆ ನಡೆಸಲಾಗಿದ ಎಂದು ಹೇಳಿದ್ದಾರೆ.

ಸಭೆಯಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಹಿಂದುಳಿದ ವರ್ಗಗಳ ಸಚಿವ ಶಿವರಾಜ್ ತಂಗಡಗಿ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ಎಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು, ಆನೇಕಲ್ ಶಾಸಕ ಬಿ.ಶಿವಣ್ಣ, ಪುಲಿಕೇಶಿನಗರ ಶಾಸಕ ಎ.ಸಿ.ಶ್ರೀನಿವಾಸ್, ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಹುಬ್ಬಳ್ಳಿ-ಧಾರವಾಡ ಪೂರ್ವ ಶಾಸಕ ಪ್ರಸಾದ್ ಅಬ್ಬಯ್ಯ ಮತ್ತು ನಂಜನಗೂಡು ಶಾಸಕ ದರ್ಶನ್ ಧ್ರುವ ನಾರಾಯಣ್ ಅವರು ಹಾಜರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಅವರನ್ನು ಹತ್ಯೆ ಮಾಡ್ತೀವಿ: ಇಸ್ರೇಲ್ ಬೆದರಿಕೆ

'ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ ಬಗ್ಗೆ ಭಾರತದ ಮೌನ ಅರ್ಥವೇ ಆಗುತ್ತಿಲ್ಲ; ದೇಶದ ಪರವಾಗಿ ನಿಂತಿದ್ದು ಇದೇ ಟೆಹ್ರಾನ್!'

ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ; ನಿಯಮ ಉಲ್ಲಂಘಿಸುವವರ ವಿರುದ್ಧ ಕೇಸ್ ದಾಖಲು; ಪರಮೇಶ್ವರ ಎಚ್ಚರಿಕೆ

ತಪ್ಪಿದ ಲಿಫ್ಟ್ ದುರಂತ: ಹೊರಬರುವಾಗ ದಿಢೀರ್ ಚಾಲನೆ, ಕೆಳಗೆ ಬಿದ್ದ ವ್ಯಕ್ತಿ! Video ವೈರಲ್!

ಇರಾನ್-ಇಸ್ರೇಲ್ ಸಂಘರ್ಷದ ಎಫೆಕ್ಟ್: LNG ಉತ್ಪಾದನೆ ಸ್ಥಗಿತಗೊಳಿಸಿದ ಕತಾರ್; ಭಾರತಕ್ಕೆ ಪೂರೈಕೆಯಲ್ಲಿ ವ್ಯತ್ಯಯ

SCROLL FOR NEXT