ಸಾಂದರ್ಭಿಕ ಚಿತ್ರ  
ರಾಜ್ಯ

15 ದಿನಗಳಲ್ಲಿ ನಾಲ್ಕು ಬಾರಿ ವಿದೇಶಕ್ಕೆ ರನ್ಯಾ ರಾವ್ ಪ್ರಯಾಣ: DRI ಅಧಿಕಾರಿಗಳ ಅನುಮಾನಕ್ಕೆ ಇದೇ ಕಾರಣ!

ಅವರು ಮಾರ್ಚ್ 3 ರಂದು ಮುಂಜಾನೆ ಎಮಿರೇಟ್ಸ್ ವಿಮಾನದಲ್ಲಿ ದುಬೈಗೆ ತೆರಳಿ ಅದೇ ಸಂಜೆ ಬೆಂಗಳೂರಿಗೆ ಮರಳಿದ್ದರು.

ಬೆಂಗಳೂರು: ಚಿನ್ನ ಕಳ್ಳಸಾಗಣೆ ಕೇಸ್ ನಲ್ಲಿ ಸಿಕ್ಕಿಹಾಕಿಕೊಂಡು ಬಂಧನವಾಗಿ ತನಿಖೆ ಎದುರಿಸುತ್ತಿರುವ ಸ್ಯಾಂಡಲ್‌ವುಡ್ ನಟಿ ಹರ್ಷವರ್ಧಿನಿ ರನ್ಯಾ ಅಲಿಯಾಸ್ ರನ್ಯಾ ರಾವ್ (33ವ) ಈ ವರ್ಷದ ಜನವರಿಯಲ್ಲಿ ತನ್ನ ಪಾಸ್‌ಪೋರ್ಟ್ ನ್ನು ನವೀಕರಿಸಿದ ನಂತರ ಮಾರ್ಚ್ 3ರಂದು ಬಂಧನವಾಗುವ ಮೊದಲು ಹದಿನೈದು ದಿನಗಳಲ್ಲಿ ಎರಡು ಬಾರಿ ವಿದೇಶಕ್ಕೆ ಹೋಗಿ ಬಂದಿದ್ದರು. ಗುಪ್ತಚರ ನಿರ್ದೇಶನಾಲಯದ ತಪಾಸಣೆಯಿಂದ ತಪ್ಪಿಸಿಕೊಂಡಿದ್ದರು ಎಂದು ತಿಳಿದುಬಂದಿದೆ.

ಅವರ ಕೊನೆಯ ನಾಲ್ಕು ಭೇಟಿಗಳು ಮಾರ್ಚ್ 3ಕ್ಕೆ ಮೊದಲು 24 ರಿಂದ 48 ಗಂಟೆಗಳ ನಡುವೆ ನಡೆದಿವೆ ಎಂದು ಹೆಸರು ಬಹಿರಂಗಪಡಿಸಲು ಬಯಸದ ಮೂಲಗಳು ತಿಳಿಸಿವೆ.

ಅವರು ಮಾರ್ಚ್ 3 ರಂದು ಮುಂಜಾನೆ ಎಮಿರೇಟ್ಸ್ ವಿಮಾನದಲ್ಲಿ ದುಬೈಗೆ ತೆರಳಿ ಅದೇ ಸಂಜೆ ಬೆಂಗಳೂರಿಗೆ ಮರಳಿದ್ದರು. ಕಸ್ಟಮ್ಸ್ ಅಧಿಕಾರಿಗಳಿಗೆ ಚಿನ್ನವನ್ನು ತೋರಿಸದೆ ಗ್ರೀನ್ ಚಾನೆಲ್ ಮೂಲಕ ನಡೆದುಕೊಂಡು ಹೋಗುವ ವೇಳೆ ನಿರ್ಗಮನದಲ್ಲಿ ಡಿಆರ್ ಐ ಅವರನ್ನು ತಡೆದರು ಎಂದು ಮೂಲಗಳು ತಿಳಿಸಿವೆ.

ಮಾರ್ಚ್ 3 ರ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಡಿಆರ್‌ಐ ಅವರು 1962 ರ ಕಸ್ಟಮ್ಸ್ ಕಾಯ್ದೆಯಡಿಯಲ್ಲಿ 12.56 ಕೋಟಿ ರೂಪಾಯಿ ಮೌಲ್ಯದ 14.2 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡಿದ್ದಕ್ಕಾಗಿ ರನ್ಯಾ ಅವರನ್ನು ಬಂಧಿಸಿತು. 1 ಕೆಜಿ ತೂಕದ 14 ಚಿನ್ನದ ಬಾರ್‌ಗಳು ಆಕೆಯ ತೊಡೆಯ ಮೇಲೆ ಟೇಪ್ ಮತ್ತು ಬ್ಯಾಂಡೇಜ್‌ಗಳಿಂದ ಕಟ್ಟಿ ಕದ್ದುಮುಚ್ಚಿ ತಂದಿದ್ದರು.

ಮರುದಿನ, ಮಾರ್ಚ್ 4 ರಂದು, ದಾಳಿಯ ಸಮಯದಲ್ಲಿ ಡಿಆರ್‌ಐ 2.06 ಕೋಟಿ ರೂ. ಮೌಲ್ಯದ ಚಿನ್ನಾಭರಣ ಮತ್ತು 2.67 ಕೋಟಿ ರೂ. ನಗದನ್ನು ಅವರ ಮನೆಯಿಂದ ವಶಪಡಿಸಿಕೊಂಡಿತು, ಬೆಂಗಳೂರಿನ ಲಾವೆಲ್ಲೆ ರಸ್ತೆಯಲ್ಲಿರುವ ಅಪ್‌ಸ್ಕೇಲ್ ನಂ. 62, ನಂದ್ವಾನಿ ಮ್ಯಾನ್ಷನ್ ಅಪಾರ್ಟ್ ಮೆಂಟಿನಲ್ಲಿದೆ. ಪ್ರಕರಣದಲ್ಲಿ ಒಟ್ಟು ವಶಪಡಿಸಿಕೊಳ್ಳಲಾದ ಮೊತ್ತ 17.29 ಕೋಟಿ ರೂಪಾಯಿಗಳಾಗಿದ್ದು, ಇದರಲ್ಲಿ 4.73 ಕೋಟಿ ರೂಪಾಯಿಗಳ ಆಸ್ತಿ ಸೇರಿದೆ.

ಪ್ರಸ್ತುತ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ರನ್ಯಾ, ಬೆಂಗಳೂರಿನ ಡಿಆರ್‌ಐನ ಹೆಚ್ಚುವರಿ ಮಹಾನಿರ್ದೇಶಕ (ಎಡಿಜಿ) ಗೆ ಬರೆದ ಪತ್ರದಲ್ಲಿ ತಾನು ನಿರಪರಾಧಿ ಎಂದು ಹೇಳಿಕೊಂಡಿದ್ದು, ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ತನ್ನನ್ನು ವಿನಾಕಾರಣ ಬಂಧಿಸಲಾಗಿದೆ ಎಂದಿದ್ದಾರೆ. ಡಿಆರ್‌ಐ ತಮ್ಮ ಬಂಧನ ಜ್ಞಾಪಕ ಪತ್ರದಲ್ಲಿ, ರನ್ಯಾ ಅವರ ನವೆಂಬರ್ 13, 2024 ಮತ್ತು ಡಿಸೆಂಬರ್ 20, 2024 ರಂದು ಲ್ಯಾವೆಲ್ಲೆ ರಸ್ತೆಯಲ್ಲಿರುವ ಅವರ ನಿವಾಸದಿಂದ ಎರಡು ದುಬೈ ಕಸ್ಟಮ್ಸ್ ಘೋಷಣೆಗಳನ್ನು ವಶಪಡಿಸಿಕೊಂಡಿದೆ ಎಂದು ಹೇಳಿಕೊಂಡಿತ್ತು.

ಆಗಾಗ್ಗೆ ವಿಮಾನದಲ್ಲಿ ದೇಶ ವಿದೇಶಗಳಿಗೆ ಪ್ರಯಾಣ ಮಾಡುತ್ತಿದ್ದ ರನ್ಯಾ, ಕಳೆದ ವರ್ಷದಲ್ಲಿ 25 ಬಾರಿ ಮತ್ತು ಬಂಧನಕ್ಕೆ ಮುಂಚಿನ ಹದಿನೈದು ದಿನಗಳಲ್ಲಿ ನಾಲ್ಕು ಬಾರಿ ದುಬೈ ಮತ್ತು ಇತರ ಕೆಲವು ದೇಶಗಳಿಗೆ ಭೇಟಿ ನೀಡಿದ್ದರು. ಅವರು ಯುನೈಟೆಡ್ ಅರಬ್ ಎಮಿರೇಟ್ಸ್ (UAE) ನಿವಾಸಿ ಗುರುತಿನ ಚೀಟಿಯನ್ನು ಹೊಂದಿದ್ದಾರೆ ಮತ್ತು ದುಬೈನಲ್ಲಿ 'ವೀರಾ ಡೈಮಂಡ್ಸ್' ಎಂಬ ಕಂಪನಿಯನ್ನು ಹೊಂದಿದ್ದಾರೆಂದು ತಿಳಿದುಬಂದಿದೆ.

ಪ್ರಕರಣದ ಮತ್ತೊಬ್ಬ ಆರೋಪಿ, ಹೋಟೆಲ್ ಉದ್ಯಮಿ ತರುಣ್ ರಾಜು, ರನ್ಯಾ ಅವರ ವ್ಯವಹಾರ ಸಹಚರ ಎಂದು ಹೇಳಲಾಗುತ್ತಿದ್ದು, ಅವರನ್ನು ಮಾರ್ಚ್ 9 ರಂದು ಚಿನ್ನದ ಕಳ್ಳಸಾಗಣೆಯಲ್ಲಿ ಸಹಾಯ ಮಾಡಿದ ಆರೋಪದ ಮೇಲೆ ಬಂಧಿಸಲಾಯಿತು. ಅವರನ್ನು ಮಾರ್ಚ್ 24 ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.

ರನ್ಯಾ ಹವಾಲಾ ಮೂಲಕ ಹಣ ಪಾವತಿ?

ರನ್ಯಾ ರಾವ್ ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಡಿಆರ್‌ಐ ಮತ್ತು ಜಾರಿ ನಿರ್ದೇಶನಾಲಯ (ED) ನಡೆಸುವ ತನಿಖೆಯ ಕೇಂದ್ರಬಿಂದು ಕಳ್ಳಸಾಗಣೆ ಮಾಡಿದ ಚಿನ್ನಕ್ಕೆ ಪಾವತಿ ವಿಧಾನಗಳು. ಕಳ್ಳಸಾಗಣೆ ಮಾಡಿದ ಚಿನ್ನದ ಹಣವನ್ನು ಹವಾಲಾ ಮೂಲಕ ಪಾವತಿಸಲಾಗಿದೆ ಎಂಬ ಅನುಮಾನವಿದೆ - ಇದು ಅಕ್ರಮ ನಗದು ವರ್ಗಾವಣೆ. ಭಾರತದಲ್ಲಿ ಹವಾಲಾ ವಹಿವಾಟುಗಳು ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಮತ್ತು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಎಫ್‌ಇಎಂಎ) ಅಡಿಯಲ್ಲಿ ಕಾನೂನುಬಾಹಿರವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT