ವಿದ್ಯುತ್ ದರ ಏರಿಕೆ 
ರಾಜ್ಯ

ವಿದ್ಯುತ್ ಗ್ರಾಹಕರಿಗೆ ಮತ್ತೆ ಸರ್ಕಾರ ಶಾಕ್: ದರ ಏರಿಕೆ ಮಾಡಿದ KERC; ಯಾರಿಗೆ ಅನ್ವಯ? ಇಲ್ಲಿದೆ ಮಾಹಿತಿ!

ಬೆಲೆ ಏರಿಕೆಯ ಹೊಡೆತದಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಕೂಡ ಶಾಕ್ ನೀಡಿದೆ. ವಿದ್ಯುತ್ ದರ ಪ್ರತಿ ಯೂನಿಟ್​ಗೆ 36 ಪೈಸೆ ಹೆಚ್ಚಳ ಮಾಡಲಾಗಿದೆ.

ಬೆಂಗಳೂರು: ಕರ್ನಾಟಕದಲ್ಲಿ ದರ ಏರಿಕೆ ಸರಣಿ ಮುಂದುವರೆದಿದ್ದು, ಮತ್ತೆ ವಿದ್ಯುತ್ ದರ (Electricity Price Hike) ಏರಿಕೆ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಗ್ರಾಹಕರಿಗೆ ಶಾಕ್ ನೀಡಿದೆ.

ಹೌದು.. ಬೆಲೆ ಏರಿಕೆಯ ಹೊಡೆತದಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಕೂಡ ಶಾಕ್ ನೀಡಿದೆ. ವಿದ್ಯುತ್ ದರ ಪ್ರತಿ ಯೂನಿಟ್​ಗೆ 36 ಪೈಸೆ ಹೆಚ್ಚಳ ಮಾಡಲಾಗಿದೆ. ವಿದ್ಯುತ್ ಪ್ರಸರಣ ಮತ್ತು ಎಸ್ಕಾಮ‌್ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿಗಾಗಿ ಗ್ರಾಹಕರಿಂದ ವಸೂಲಿಗೆ ಕೆಇಆರ್​ಸಿ ಮುಂದಾಗಿದ್ದು, ದರ ಹೆಚ್ಚಳದ ಆದೇಶ ಹೊರಡಿಸಿದೆ. ಎಪ್ರಿಲ್ 1 ರಿಂದಲೇ ಹೊಸ ಆದೇಶ ಜಾರಿಯಾಗಲಿದೆ.

ವಿದ್ಯುತ್ ಪ್ರಸರಣ ಮತ್ತು ಎಸ್ಕಾಮ‌್ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿಗಾಗಿ ಗ್ರಾಹಕರಿಂದ ವಸೂಲಿಗೆ ಕೆಇಆರ್​ಸಿ ಮುಂದಾಗಿದ್ದು, ದರ ಹೆಚ್ಚಳದ ಆದೇಶ ಹೊರಡಿಸಿದೆ. ಎಪ್ರಿಲ್ 1 ರಿಂದಲೇ ಹೊಸ ಆದೇಶ ಜಾರಿಯಾಗಲಿದೆ.

ಸಾಮಾನ್ಯ ಜನರಿಗೆ ತೊಂದರೆ ಇಲ್ಲ: ಸಚಿವ ಶರಣಪ್ರಕಾಶ್‌ ಪಾಟೀಲ್

ಈ ಕುರಿತು ಮಾತನಾಡಿರುವ ಸಚಿವ ಶರಣಪ್ರಕಾಶ್‌ ಪಾಟೀಲ್, 'ವಿದ್ಯುತ್ ದರ ಏರಿಕೆಯಿಂದ ಸಾಮಾನ್ಯ ಜನರಿಗೆ ತೊಂದರೆ ಆಗುವುದಿಲ್ಲ. ಗೃಹಜ್ಯೋತಿ ಯೋಜನೆಯಿಂದಾಗಿ ನಷ್ಟ ಆಗಿಲ್ಲ. ಗೃಹಜ್ಯೋತಿ ನಷ್ಟದಿಂದ ವಿದ್ಯುತ್ ದರ ಏರಿಕೆ ಮಾಡಲಾಗಿಲ್ಲ ಎಂದು ಸ್ಪಷ್ಟನೆ ನೀಡಿದರು.

ಯಾರಿಗೆ ಅನ್ವಯ?

'ಗೃಹಜ್ಯೋತಿ ನಷ್ಟದಿಂದ ವಿದ್ಯುತ್ ದರ ಏರಿಕೆ ಮಾಡಲಾಗಿಲ್ಲ. ನಾವು 200 ಯೂನಿಟ್ ವಿದ್ಯುತ್ ಉಚಿತ ಕೊಟ್ಟಿದ್ದೇವೆ. 200 ಯೂನಿಟ್ ಮೇಲೆ ಬಳಸಿದವರಿಗೆ ದರ ಏರಿಕೆ ಅನ್ವಯವಾಗುತ್ತದೆ. ಬಿಜೆಪಿಯವರು ಶ್ರೀಮಂತರ ಪರವಾಗಿ ಮಾತನಾಡುತ್ತಿದ್ದಾರೆ. ಸರ್ಕಾರ ದರ ಏರಿಕೆ ಮಾಡುವುದಿಲ್ಲ. ಸ್ವಾಯತ್ತ ಸಂಸ್ಥೆ ದರ ಏರಿಕೆ ಮಾಡುತ್ತದೆ. ಈ ವಿಚಾರದಲ್ಲಿ ಬಿಜೆಪಿ ಆರೋಪ ಸರಿಯಲ್ಲ' ಎಂದರು.

ಇತ್ತೀಚೆಗಷ್ಟೇ ಬೆಂಗಳೂರು ನಮ್ಮ ಮೆಟ್ರೋ ದರ ಏರಿಕೆ ಮಾಡಲಾಗಿತ್ತು. ಅದಕ್ಕೂ ಮುನ್ನ ಕೆಎಸ್​ಆರ್​ಟಿಸಿ ಬಸ್ ಪ್ರಯಾಣ ದರವೂ ಹೆಚ್ಚಿಸಲಾಗಿತ್ತು. ಕೆಲವು ದಿನಗಳ ಹಿಂದಷ್ಟೇ ಆಟೋ ದರ ಏರಿಕೆಗೂ ಸರ್ಕಾರ ಸಮ್ಮತಿ ನೀಡಿತ್ತು. ಇದೀಗ ವಿದ್ಯುತ್ ದರ ಹೆಚ್ಚಳ ಆದೇಶ ಹೊರಡಿಸಲಾಗಿದ್ದು, ಜನ ಸಾಮಾನ್ಯರಿಗೆ ಬೆಲೆ ಏರಿಕೆಯ ಬರೆ ಎಳೆದಂತಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Cyclone 'Montha'- ಮೊಂತಾ ಚಂಡಮಾರುತ ತೀವ್ರ, ಆಂಧ್ರ ಪ್ರದೇಶ, ಒಡಿಶಾ ಕರಾವಳಿ ಭಾಗಗಳಲ್ಲಿ ಇಂದು ಭೂಕುಸಿತ ಸಂಭವ ಸಾಧ್ಯತೆ

ಅಲ್ ಖೈದಾ ಜೊತೆ ನಂಟು ಆರೋಪ: ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆಯಲ್ಲಿ ಟೆಕ್ಕಿ ಬಂಧನ

fu**king country: ಕೆನಡಾದಲ್ಲಿ ಜನಾಂಗೀಯ ನಿಂದನೆ, ಭಾರತೀಯ ಕೆಲಸಗಾರ್ತಿಯನ್ನು ಕೆಟ್ಟದಾಗಿ ಬೈದ ಕೆನಡಾ ಪ್ರಜೆ! Video

ಕುರ್ಚಿ ಕದನ: ಡಿಕೆಶಿ ಹತ್ತಿಕ್ಕಲು ಸಿದ್ದು ಗೇಮ್ ಪ್ಲಾನ್; CM ಹುದ್ದೆಗೆ ಮುನಿಯಪ್ಪ ಹೆಸರು ಕೇಳಿಬರಲು ಕಾರಣವೇನು?

8 ತಿಂಗಳಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸ್ಮಶಾನ ಸಿಬ್ಬಂದಿಗೆ ಸಿಕ್ಕಿಲ್ಲ ವೇತನ!

SCROLL FOR NEXT