ಸಾಂದರ್ಭಿಕ ಚಿತ್ರ 
ರಾಜ್ಯ

AEE ನೇಮಕಾತಿಯಲ್ಲಿ ಅಕ್ರಮ ಕುರಿತು ಹೈಕೋರ್ಟ್ ಪ್ರಶ್ನೆ: ಸಿಬಿಐ ತನಿಖೆಯ ಸುಳಿವು!

2024, ಫೆಬ್ರವರಿ 22ರ ಕೆಪಿಎಸ್‌ಸಿಯ ಪತ್ರ ಮತ್ತು ಮೇ 18, 2024 ರಂದು ಜ್ಞಾಪನೆ (reminder) ಪತ್ರದ ಹೊರತಾಗಿಯೂ ಆಯ್ಕೆಯಾದ ಅಭ್ಯರ್ಥಿಗಳಿಗೆ ಜೂನ್ 25,2024 ರಂದು ನೇಮಕಾತಿ ಪತ್ರಗಳನ್ನು ಏಕೆ ನೀಡಲಾಗಿದೆ.

ಬೆಂಗಳೂರು: 24 ಸಹಾಯಕ ಕಾರ್ಯಪಾಲಕ ಇಂಜಿನಿಯರ್ (AEE)ಹುದ್ದೆಗಳ ಅಭ್ಯರ್ಥಿಗಳ ಆಯ್ಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (CBI) ಹಸ್ತಾಂತರಿಸುವಂತೆ ರಾಜ್ಯ ಸರ್ಕಾರ, KPSC ಮತ್ತಿತರಿಗೆ ಹೈಕೋರ್ಟ್ ತಾಕೀತು ಮಾಡಿದೆ.

ಈ ಹುದ್ದೆಗಳಿಗೆ ಆಯ್ಕೆಯಾಗಿ ನೇಮಕಗೊಂಡ ಸುಮಾರು 10 ಅಭ್ಯರ್ಥಿಗಳು ಸಲ್ಲಿಸಿದ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಗಳಾದ ಕೃಷ್ಣ ಎಸ್.ದೀಕ್ಷಿತ್ ಮತ್ತು ರಾಮಚಂದ್ರ ಡಿ.ಹುದ್ದಾರ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿತು.

ಸಿಬಿಐ ತನಿಖೆಯ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ರಾಜ್ಯ ಸರ್ಕಾರ, ಕೆಪಿಎಸ್‌ಸಿ ಮತ್ತು ಆಕಾಂಕ್ಷಿ ಅಭ್ಯರ್ಥಿಗಳು ತಮ್ಮ ಅಹವಾಲು ಸಲ್ಲಿಸಬಹುದು ಎಂದು ನ್ಯಾಯಾಲಯ ಹೇಳಿದೆ.

ವಿಚಾರಣೆಯ ಸಂದರ್ಭದಲ್ಲಿ ಚರ್ಚಿಸಲಾದ ಹಲವಾರು ಪ್ರಶ್ನೆಗಳಿಗೆ, ವಿಶೇಷವಾಗಿ ಸಿಬಿಐ ತನಿಖೆಗೆ ಆದೇಶಿಸಬೇಕೆ ಅಥವಾ ಬೇಡವೇ ಎಂಬ ಬಗ್ಗೆ ಸರ್ಕಾರದಿಂದ ಉತ್ತರಗಳನ್ನು ಕೇಳಿದೆ. ಎಇಇ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದ ದಾಖಲೆಗಳು ಕೆಪಿಎಸ್‌ಸಿಯ ಕೆಲವು ಅಧಿಕಾರಿಗಳು ಮತ್ತು ಸರ್ಕಾರದಲ್ಲಿ ಉನ್ನತ ಸ್ಥಾನದಲ್ಲಿರುವವರ ದುರ್ವರ್ತನೆಯನ್ನು ಸೂಚಿಸುತ್ತವೆ ಎಂದು ಹೈಕೋರ್ಟ್ ಹೇಳಿದೆ.

2024, ಫೆಬ್ರವರಿ 22ರ ಕೆಪಿಎಸ್‌ಸಿಯ ಪತ್ರ ಮತ್ತು ಮೇ 18, 2024 ರಂದು ಜ್ಞಾಪನೆ (reminder) ಪತ್ರದ ಹೊರತಾಗಿಯೂ ಆಯ್ಕೆಯಾದ ಅಭ್ಯರ್ಥಿಗಳಿಗೆ ಜೂನ್ 25,2024 ರಂದು ನೇಮಕಾತಿ ಪತ್ರಗಳನ್ನು ಏಕೆ ನೀಡಲಾಗಿದೆ ಎಂಬುದರ ಕುರಿತು ಸರ್ಕಾರದಿಂದ ಪ್ರತಿಕ್ರಿಯೆ ನೀಡುವಂತೆ ಅಡ್ವೊಕೇಟ್ ಜನರಲ್‌ಗೆ ನ್ಯಾಯಾಲಯ ಸೂಚಿಸಿದೆ.

ಅಲ್ಲದೇ ಕೆಲವು ಅಭ್ಯರ್ಥಿಗಳು OMR ಶೀಟ್‌ಗಳನ್ನು ದುರ್ಬಳಕೆ ಮಾಡಿಕೊಂಡಿರುವುದು ಸೇರಿದಂತೆ ಆಯ್ಕೆ ಪ್ರಕ್ರಿಯೆಯಲ್ಲಿ ವಂಚನೆಯ ಪ್ರಾಥಮಿಕ ಸಾಕ್ಷ್ಯದ ನಂತರವೂ ಸರ್ಕಾರ ಮತ್ತು KPSC ಇನ್ನೂ ಏಕೆ ಕ್ರಿಮಿನಲ್ ದೂರು ದಾಖಲಿಸಿಲ್ಲ ಎಂದು ನ್ಯಾಯಾಲಯ ಪ್ರಶ್ನಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

ಬ್ರದರ್ ನಿಮಗೆ ತೊಂದರೆಯಾಗಿದ್ದರೆ ಇರಾನ್‌ಗೆ ಹೋಗಿ ಹೋರಾಡಿ: ಯುಪಿ ಪೊಲೀಸ್ ಅಧಿಕಾರಿ ಹೀಗೆ ಹೇಳಿದ್ದು ಯಾರಿಗೆ?

SCROLL FOR NEXT