ಸಚಿವ ಸಂತೋಷ್ ಲಾಡ್ 
ರಾಜ್ಯ

ರಾಜ್ಯದ ಎಲ್ಲಾ ಸಮುದಾಯಗಳಿಗೆ ಶೇ.75 ರಷ್ಟು ಮೀಸಲಾತಿ ಕೊಡಿ: ಸರ್ಕಾರಕ್ಕೆ ಸಚಿವ ಸಂತೋಷ್‌ ಲಾಡ್‌ ಒತ್ತಾಯ

ಅಹಿಂದ ಸಮುದಾಯಕ್ಕೆ ನೆರೆ ರಾಜ್ಯ ತಮಿಳುನಾಡಿನಲ್ಲ ಶೇ.65ರಷ್ಟು ಮೀಸಲಾತಿ ಇದೆ.

ಶಿವಮೊಗ್ಗ: ರಾಜ್ಯದ ಎಲ್ಲಾ ಸಮುದಾಯಗಳಿಗೆ ಶೇ.75 ರಷ್ಟು ಮೀಸಲಾತಿ ನೀಡಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ರಾಜ್ಯ ಸರ್ಕಾರಕ್ಕೆ ಬುಧವಾರ ಒತ್ತಾಯಿಸಿದ್ದಾರೆ.

ಶಿವಮೊಗ್ಗ ಜಿಲ್ಲಾ ಕ್ಷತ್ರಿಯ ಮರಾಠಾ ಸೇವಾ ಸಂಘ ಇತ್ತೀಚೆಗೆ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ಮರಾಠಾ ಸಮುದಾಯದ ವೆಬ್‌ಸೈಟ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಹಿಂದ ಸಮುದಾಯಕ್ಕೆ ನೆರೆ ರಾಜ್ಯ ತಮಿಳುನಾಡಿನಲ್ಲ ಶೇ.65ರಷ್ಟು ಮೀಸಲಾತಿ ಇದೆ. ಅಂತೆಯೇ ನಮ್ಮ ರಾಜ್ಯದಲ್ಲಿಯೂ ಶೋಷಿತ ವರ್ಗಗಳು ಮತ್ತು ಅಹಿಂದ ವರ್ಗಗಳ ಎಲ್ಲಾ ಹಿಂದುಳಿದ ಸಮುದಾಯಗಳು ಅಭಿವೃದ್ಧಿಯಾಗಬೇಕು. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರು ಎಲ್ಲಾ ವರ್ಗದವರಿಗೆ ಶೇ.75ರಷ್ಟು ಮೀಸಲಾತಿ ನೀಡಬೇಕು ಎಂದು ಹೇಳಿದರು.

2ಎ ಅಡಿಯಲ್ಲಿ ಮೀಸಲಾತಿ ನೀಡುವಂತೆ ಹಲವು ಸಮುದಾಯಗಳು ಬೇಡಿಕೆ ಇಡುತ್ತಿವೆ. ಹೀಗಾಗಿ ಮೀಸಲಾತಿಯಲ್ಲಿ ಶೇಕಡಾವಾರು ಹೆಚ್ಚಳವಾಗಬೇಕು. ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಒದಗಿಸಬೇಕು. ತಮಿಳುನಾಡು 9ನೇ ತಿದ್ದುಪಡಿ ಮಾಡಿಕೊಂಡು ಮೀಸಲಾತಿ ಹೆಚ್ಚಿಸಿದೆ. ನಮ್ಮ ರಾಜ್ಯದಲ್ಲಿಯೂ ಎಲ್ಲಾ ಶೋಷಿತ ವರ್ಗಗಳು ಅಭಿವೃದ್ಧಿಯಾಗಬೇಕೆಂದರೆ ರಾಜ್ಯ ಸರ್ಕಾರದ ವತಿಯಿಂದ ಶೇ.75 ರಷ್ಟು ಮೀಸಲಾತಿ ಘೋಷಿಸಿ, ನಮ್ಮಲ್ಲೂ ಅಂತಹ ಅವಕಾಶ ನೀಡಬೇಕೆಂದು ಮನವಿ ಮಾಡಿಕೊಳ್ಳುತ್ತೇನೆಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

SCROLL FOR NEXT