ಸಚಿವ ಸತೀಶ್ ಜಾರಕಿಹೊಳಿ 
ರಾಜ್ಯ

ಆ ಸಚಿವರಿಗೆ 2 ಬಾರಿ ಹನಿ ಟ್ರ್ಯಾಪ್ ಗೆ ಯತ್ನ: ಸಚಿವ ಸತೀಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆ!

ಈ ವಿಷಯದ ಬಗ್ಗೆ ದೂರು ದಾಖಲಿಸಬೇಕು ಮತ್ತು ತನಿಖೆ ನಡೆಸಬೇಕು ಎಂದು ನಾವು ಒತ್ತಾಯಿಸಿದ್ದೇವೆ... ಸಂತ್ರಸ್ತರು ಮುಂದೆ ಬಂದು ದೂರು ದಾಖಲಿಸಲು ನಾವು ಹೇಳಿದ್ದೇವೆ.

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹನಿ ಟ್ರ್ಯಾಪ್ ಭಾರಿ ಸದ್ದು ಮಾಡುತ್ತಿದ್ದು, ಸಚಿವರೊಬ್ಬರ ಮೇಲೆ ಎರಡು ಬಾರಿ ಹನಿಟ್ರ್ಯಾಪ್ ಗೆ ಯತ್ನ ನಡೆದಿದೆ. ಆದರೆ ಅವರ ಪ್ರಯತ್ನ ವಿಫಲವಾಗಿದೆ ಎಂದು ಗುರುವಾರ ಸಚಿವ ಸತೀಶ್ ಜಾರಕಿಹೊಳಿ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ANI ಜೊತೆ ಮಾತನಾಡಿದ ಜಾರಕಿಹೊಳಿ, "ಹನಿ ಟ್ರ್ಯಾಪ್ ಗೆ ಪ್ರಯತ್ನಿಸಲಾಗಿದೆ ಎಂಬುದು ನಿಜ. ಆದರೆ ಅದು ಯಶಸ್ವಿಯಾಗಿಲ್ಲ. ರಾಜ್ಯದಲ್ಲಿ ಮೊದಲ ಬಾರಿಗೆ ಇಂತಹ ಕೃತ್ಯ ನಡೆದಿಲ್ಲ. ಕಳೆದ 20 ವರ್ಷಗಳಿಂದ ಈ ಹನಿ ಟ್ರ್ಯಾಪ್ ದಂದೆ ನಡೆಯುತ್ತಿದೆ. ಪ್ರತಿಯೊಂದು ಪಕ್ಷ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಎಲ್ಲಾ ಪಕ್ಷಗಳು ಇದಕ್ಕೆ ಬಲಿಯಾಗಿವೆ" ಎಂದು ಹೇಳಿದ್ದಾರೆ.

ಈ ವಿಷಯದ ಬಗ್ಗೆ ದೂರು ದಾಖಲಿಸಬೇಕು ಮತ್ತು ತನಿಖೆ ನಡೆಸಬೇಕು ಎಂದು ನಾವು ಒತ್ತಾಯಿಸಿದ್ದೇವೆ... ಸಂತ್ರಸ್ತರು ಮುಂದೆ ಬಂದು ದೂರು ದಾಖಲಿಸಲು ನಾವು ಹೇಳಿದ್ದೇವೆ. ಆಗ ಮಾತ್ರ ಅದನ್ನು ತನಿಖೆ ಮಾಡಬಹುದು ಮತ್ತು ಸತ್ಯ ಹೊರಬರುತ್ತದೆ" ಎಂದು ಅವರು ಹೇಳಿದರು.

ಸಚಿವರೊಬ್ಬರ ಮೇಲೆ ಎರಡು ಬಾರಿ ಹನಿಟ್ರ್ಯಾಪ್ ಗೆ ಯತ್ನಿಸಲಾಗಿದೆ. ಸಚಿವರಿಗೆ ಹನಿಟ್ರ್ಯಾಪ್ ಆಗಿರುವುದು ನಿಜ. ಈ ಒಂದು ಹನಿಟ್ರ್ಯಾಪ್ ನಲ್ಲಿ ನಮ್ಮವರು ಅಷ್ಟೇ ಅಲ್ಲದೆ ಬೇರೆ ಪಕ್ಷದ ನಾಯಕರು ಕೂಡ ಹನಿಟ್ರ್ಯಾಪ್ ನಲ್ಲಿ ಸಿಲುಕಿದ್ದಾರೆ ಎಂದು ತಿಳಿಸಿದರು.

ಹನಿಟ್ರ್ಯಾಪ್ ಒಳ್ಳೆಯ ಬೆಳವಣಿಗೆಯಲ್ಲ. ನಾವು ಇದನ್ನು ಇಷ್ಟಕ್ಕೆ ಬಿಡುವುದು ಸರಿಯಲ್ಲ. ಪಕ್ಷದ ಪ್ರಮುಖ ನಾಯಕರ ಗಮನಕ್ಕೆ ತರಲು ಬಯಸಿದ್ದೇವೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್