ಡಿಕೆ ಶಿವಕುಮಾರ್ 
ರಾಜ್ಯ

ಎಚ್‌.ಡಿ ಕುಮಾರಸ್ವಾಮಿ ಭೂಮಿ ಒತ್ತುವರಿ ತೆರವು: ಅಧಿಕಾರಿಗಳು ನ್ಯಾಯಾಲಯದ ಆದೇಶ ಪಾಲಿಸಿದ್ದಾರೆ- ಡಿ.ಕೆ ಶಿವಕುಮಾರ್

ಕುಮಾರಸ್ವಾಮಿ ಮತ್ತು ಇತರರು ಅತಿಕ್ರಮಣ ಮಾಡಿದ್ದಾರೆ ಎನ್ನಲಾದ ಸರ್ಕಾರಿ ಭೂಮಿಯನ್ನು ಗುರುತಿಸಲು ರಾಮನಗರ ಜಿಲ್ಲಾ ಅಧಿಕಾರಿಗಳು ಮಂಗಳವಾರ ಬಿಡದಿ ಪಟ್ಟಣದ ಬಳಿಯ ಕೇತಗಾನಹಳ್ಳಿ ಗ್ರಾಮದಲ್ಲಿ ಪೊಲೀಸ್ ರಕ್ಷಣೆಯೊಂದಿಗೆ ಸರ್ವೆ ಕಾರ್ಯ ನಡೆಸಿದ್ದರು.

ಬೆಂಗಳೂರು: ಸರ್ಕಾರಿ ಅಧಿಕಾರಿಗಳು ನ್ಯಾಯಾಲಯದ ಆದೇಶಗಳನ್ನು ಪಾಲಿಸಿದ್ದಾರೆ ಎಂದಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ವಿರುದ್ಧದ ಒತ್ತುವರಿ ಪ್ರಕರಣದಲ್ಲಿ ಯಾವುದೇ ಸೇಡಿನ ರಾಜಕೀಯ ಇಲ್ಲ ಎಂದು ಗುರುವಾರ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಕುಮಾರಸ್ವಾಮಿ ಅವರ ಡಿಎನ್ಎಯಲ್ಲಿಯೇ ಧ್ವೇಷದ ರಾಜಕೀಯವಿದೆ. ಅಧಿಕಾರಿಗಳು ನ್ಯಾಯಾಲಯದ ಆದೇಶಗಳನ್ನು ಮಾತ್ರ ಪಾಲಿಸಿದ್ದಾರೆ. ಎಸ್‌ಆರ್ ಹಿರೇಮಠ ಅವರು ಪ್ರಕರಣ ದಾಖಲಿಸಿದ್ದಾರೆ. ಇದು ಹೇಗೆ ಸೇಡಿನ ರಾಜಕೀಯವಾಗುತ್ತದೆ? ನಾವು ಯಾವುದೇ ದೂರು ದಾಖಲಿಸಿಲ್ಲ. ಹಿರೇಮಠ ಅವರು ನನ್ನ ವಿರುದ್ಧವೂ ಹಲವು ಪ್ರಕರಣಗಳನ್ನು ದಾಖಲಿಸಿದ್ದಾರೆ. ನ್ಯಾಯಾಲಯದ ಆದೇಶದ ನಂತರ ಸರ್ಕಾರಿ ಅಧಿಕಾರಿಗಳು ತಮ್ಮ ಕೆಲಸ ಮಾಡುತ್ತಿದ್ದಾರೆ. ಇದರಲ್ಲಿ ಯಾವುದೇ ಸೇಡಿನ ಉದ್ದೇಶವಿಲ್ಲ' ಎಂದು ಹೇಳಿದರು.

'ಕುಮಾರಸ್ವಾಮಿ ಮೈಸೂರಿನಲ್ಲಿ ನನ್ನ ಬಗ್ಗೆ ಬಹಳಷ್ಟು ಮಾತನಾಡಿದ್ದಾರೆ. ಅವರ ತಂದೆ ನನ್ನ ವಿರುದ್ಧ ಬಹಳಷ್ಟು ಮಾತನಾಡಿದ್ದಾರೆ. ಅವರು ನನ್ನ, ನನ್ನ ಹೆಂಡತಿ, ನನ್ನ ಸಹೋದರಿ ಮತ್ತು ನನ್ನ ಸಹೋದರನ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ. ಅವರೊಂದಿಗೆ ಸಮ್ಮಿಶ್ರ ಸರ್ಕಾರ ಮಾಡಿಕೊಂಡಿದ್ದರಿಂದ ನಾವು ಮೌನವಾಗಿದ್ದೇವೆ. ಅವರು ಮೌನವಾಗಿರುವುದು ಅವರ ಹಿತದೃಷ್ಟಿಯಿಂದ ಒಳ್ಳೆಯದು' ಎಂದು ಅವರು ಹೇಳಿದರು.

ಕುಮಾರಸ್ವಾಮಿ ಮತ್ತು ಇತರರು ಅತಿಕ್ರಮಣ ಮಾಡಿದ್ದಾರೆ ಎನ್ನಲಾದ ಸರ್ಕಾರಿ ಭೂಮಿಯನ್ನು ಗುರುತಿಸಲು ರಾಮನಗರ ಜಿಲ್ಲಾ ಅಧಿಕಾರಿಗಳು ಮಂಗಳವಾರ ಬಿಡದಿ ಪಟ್ಟಣದ ಬಳಿಯ ಕೇತಗಾನಹಳ್ಳಿ ಗ್ರಾಮದಲ್ಲಿ ಪೊಲೀಸ್ ರಕ್ಷಣೆಯೊಂದಿಗೆ ಸರ್ವೆ ಕಾರ್ಯ ನಡೆಸಿದ್ದರು. ಕರ್ನಾಟಕ ಹೈಕೋರ್ಟ್ ನಿರ್ದೇಶನದ ಮೇರೆಗೆ ಸರ್ವೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ರಾಮನಗರ ಜಿಲ್ಲೆಗೆ ಮರುನಾಮಕರಣ ಮಾಡದಂತೆ ಕುಮಾರಸ್ವಾಮಿ ಕೇಂದ್ರದ ಮೇಲೆ ಒತ್ತಡ ಹೇರಿದ್ದಾರೆ ಎಂಬುದು ನಮಗೆ ತಿಳಿದಿದೆ. ಸಾಂವಿಧಾನಿಕ ವ್ಯವಸ್ಥೆಯಲ್ಲಿ ನಾವು ಯಾರನ್ನೂ ಬೇಡಿಕೊಳ್ಳಬೇಕಾಗಿಲ್ಲ. ವಿವರಗಳಿಗಾಗಿ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ದೆಹಲಿಯಲ್ಲಿರುವ ಕೆಲವು ಸಚಿವರು ಇದನ್ನು ಮಾಡಲು ಪಿತೂರಿ ನಡೆಸಿದ್ದಾರೆ. ಆದರೆ, ನಾವು ಯಾವುದೇ ಕಾರಣಕ್ಕೂ ಇದನ್ನು ಹಾಗೆ ಬಿಡುವುದಿಲ್ಲ. ಜಿಲ್ಲೆಗೆ ಮರುನಾಮಕರಣ ಮಾಡುವುದು ಮತ್ತು ಜಿಲ್ಲೆಯನ್ನು ಹೇಗೆ ಅಭಿವೃದ್ಧಿಪಡಿಸಬೇಕು ಎಂದು ನಮಗೆ ತಿಳಿದಿದೆ' ಎಂದರು.

ರಾಮನಗರ ಜಿಲ್ಲೆಗೆ ಮರುನಾಮಕರಣ ಮಾಡುವುದು ರಿಯಲ್ ಎಸ್ಟೇಟ್‌ಗೆ ಲಾಭ ಮಾಡಿಕೊಡಲು ಎಂಬ ಟೀಕೆಗಳಿಗೆ ಉತ್ತರಿಸಿದ ಅವರು, 'ನಮ್ಮ ಜನರಿಗೆ ನಾವು ಒಳ್ಳೆಯದನ್ನು ಬಯಸುತ್ತೇವೆ. ನಮ್ಮ ಜನರು ಬೆಂಗಳೂರು ಜಿಲ್ಲೆಗೆ ಸೇರಿದವರು. ಜಿಲ್ಲೆಯ ಜನರಿಗೆ ಒಳ್ಳೆಯದನ್ನು ಬಯಸುವುದು ತಪ್ಪೇ? ಎಂದು ಪ್ರಶ್ನಿಸಿದರು.

ಪಕ್ಷದ ಹೈಕಮಾಂಡ್ ಜೊತೆಗಿನ ಭೇಟಿಯ ಕುರಿತು ಮಾತನಾಡಿದ ಅವರು, 'ಬೆಳಗಾವಿ ಶತಮಾನೋತ್ಸವ ಅಂಗವಾಗಿ ರಾಜ್ಯದಲ್ಲಿ 100 ಕಾಂಗ್ರೆಸ್ ಪಕ್ಷದ ಕಚೇರಿಗಳನ್ನು ಸ್ಥಾಪಿಸಲು ನಾವು ನಿರ್ಧರಿಸಿದ್ದೇವೆ. ಅಡಿಪಾಯ ಹಾಕಲು ಸಮಯ ಕೇಳಲು ನಾನು ಹೈಕಮಾಂಡ್ ಭೇಟಿ ಮಾಡಿದ್ದೇನೆ. ರೇಸ್ ಕೋರ್ಸ್ ರಸ್ತೆಯಲ್ಲಿ ಒಂದು ಕಚೇರಿ ಸೇರಿದಂತೆ ಪಕ್ಷದ ಮೂರು ಕಚೇರಿಗಳಿಗೆ ಅಡಿಪಾಯ ಹಾಕುತ್ತೇವೆ' ಎಂದು ಹೇಳಿದರು.

ಮಂಡ್ಯದಲ್ಲಿ 'ಛತ್ರಿ' ಪದ ಬಳಸಿದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಟೀಕೆಗೆ ಪ್ರತಿಕ್ರಿಯಿಸಿ, 'ನನ್ನ ಆಪ್ತರನ್ನು ನಾನು ಏನು ಬೇಕಾದರೂ ಕರೆಯಬಹುದು. ಅದು ಅವರ ಮತ್ತು ನನ್ನ ನಡುವಿನ ವಿಷಯ. ಇದರಲ್ಲಿ ವೈಯಕ್ತಿಕ ಮಾತಿನ ಚಕಮಕಿಗಿಂತ ಹೆಚ್ಚೇನೂ ಇಲ್ಲ' ಎಂದು ಹೇಳಿದರು.

ಪದಾಧಿಕಾರಿಗಳ ಸಭೆಯಲ್ಲಿ ಕೆಪಿಸಿಸಿ ಸ್ಥಾನವನ್ನು ತ್ಯಜಿಸುವ ಬಗ್ಗೆ ಕೇಳಿದಾಗ, 'ಪಕ್ಷವು ಈ ಬಗ್ಗೆ ನಿರ್ಧರಿಸುತ್ತದೆ. ನಾನು ನನ್ನ ಕರ್ತವ್ಯವನ್ನು ಮಾಡಿದ್ದೇನೆ. ನಾನು ಸೇರಿದಂತೆ ಇಲ್ಲಿ ಯಾರೂ ಶಾಶ್ವತವಲ್ಲ. ನನ್ನ ಅಧಿಕಾರಾವಧಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿಗಳ ನಿರ್ಮಾಣ ಪೂರ್ಣಗೊಳಿಸಲು ನಾನು ಬಯಸುತ್ತೇನೆ. ಐದು ವರ್ಷಗಳಲ್ಲಿ ಅಥವಾ 10 ವರ್ಷಗಳಲ್ಲಿ ಸಂಭವಿಸಿದರೂ, ಪಕ್ಷದ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ. ನನಗೆ ಯಾವುದೇ ಆತುರವಿಲ್ಲ; ನಾನು ಪಕ್ಷದ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ" ಎಂದು ಹೇಳಿದರು.

ಬಿಜೆಪಿ ಶಾಸಕ ಮುನಿರತ್ನ ಅವರ ಜೀವ ಬೆದರಿಕೆ ಆರೋಪದ ಬಗ್ಗೆ ಕೇಳಿದಾಗ, 'ನಾನು ಸ್ಪೀಕರ್ ಜೊತೆ ಮಾತನಾಡಿ ಚಿಕಿತ್ಸೆ ಕೊಡಿಸುತ್ತೇನೆ' ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗೋವಾ ನೈಟ್ ಕ್ಲಬ್​ನಲ್ಲಿ ಭೀಕರ ಅಗ್ನಿ ದುರಂತ: ಪ್ರವಾಸಿಗರು ಸೇರಿ 23 ಮಂದಿ ಸಜೀವ ದಹನ, ತನಿಖೆಗೆ ಆದೇಶ

ಗೋವಾ ನೈಟ್ ಕ್ಲಬ್​ ಅಗ್ನಿ ದುರಂತ: ಪ್ರಧಾನಿ ಮೋದಿ, ರಾಷ್ಟ್ರಪತಿ ತೀವ್ರ ಸಂತಾಪ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

'ಹಿಂದೂ ಬೆಳವಣಿಗೆ ದರ' ಧರ್ಮ ಕೆಣಕುವ ಒಂದು ಮಾರ್ಗವಾಗಿತ್ತು: ಪ್ರಧಾನಿ ಮೋದಿ

ನನ್ನ ಶ್ರಮ, ನನ್ನ ಸಂಪಾದನೆ, ನನ್ನ ಆಸ್ತಿ, ನನಗೆ ಇಷ್ಟವಾದ ಶೂ, ವಾಚ್ ಧರಿಸುವೆ: ಡಿ.ಕೆ. ಶಿವಕುಮಾರ್

ದೆಹಲಿಯಲ್ಲಿ 2ನೇ ಮದುವೆಗೆ ಪತಿಯ ಸಿದ್ಧತೆ: ನ್ಯಾಯಕ್ಕಾಗಿ ಪ್ರಧಾನಿ ಮೋದಿ ಬೇಡಿದ ಪಾಕ್ ಮಹಿಳೆ!

SCROLL FOR NEXT