ಸರ್ಕಾರಿ ಶಾಲೆ 
ರಾಜ್ಯ

1-10ನೇ ತರಗತಿ ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣ ಬೋಧನೆ: 2025-26 ಶೈಕ್ಷಣಿಕ ವರ್ಷದಿಂದ ಜಾರಿ?

ವಿಧಾನ ಪರಿಷತ್ ನಲ್ಲಿ ಹದಿಹರೆದಯ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಪರಿಹಾರೋಪಾಯಗಳ ಕುರಿತು ಇತ್ತೀಚೆಗೆ ಸುದೀರ್ಘ ಚರ್ಚೆ ನಡೆದಿತ್ತು.

ಬೆಂಗಳೂರು: ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳಿಗ 2025-2026ನೇ ಶೈಕ್ಷಣಿಕ ಸಾಲಿನಿಂದ ನೈತಿಕ ಮೌಲ್ಯದ ಶಿಕ್ಷಣ ಬೋಧನೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ವಿಧಾನ ಪರಿಷತ್ ನಲ್ಲಿ ಹದಿಹರೆದಯ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಪರಿಹಾರೋಪಾಯಗಳ ಕುರಿತು ಇತ್ತೀಚೆಗೆ ಸುದೀರ್ಘ ಚರ್ಚೆ ನಡೆದಿತ್ತು. ಆಡಳಿತ ಹಾಗೂ ಪ್ರತಿಪಕ್ಷಗಳ ಅನೇಕ ಸದಸ್ಯರು ಪಾಲ್ಗೊಂಡು ತಮ್ಮ ಅಭಿಪ್ರಾಯ, ಸಲಹೆ ಹಾಗೂ ಸೂಚನೆಗಳನ್ನು ಸರ್ಕಾರಕ್ಕೆ ನೀಡಿದ್ದರು.

ಈ ಸಂಬಂಧ ಬುಧವಾರ ಪರಿಷತ್ತಿಗೆ ಮಾಹಿತಿ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸುವ ಅಗತ್ಯವನ್ನು ಒತ್ತಿ ಹೇಳಿದರು.

ಈ ಬಾರಿ ಶೈಕ್ಷಣಿಕ ವರ್ಷದಿಂದ ವಾರದಲ್ಲಿ ಎರಡು ಅವಧಿಯಲ್ಲಿ ನೈತಿಕ ಮೌಲ್ಯದ ಶಿಕ್ಷಣ ಬೋಧನೆಯನ್ನು ಕಡ್ಡಾಯ ವಾಗಿ ಜಾರಿಗೆ ತರಲು ತೀರ್ಮಾನಿಸಲಾಗಿದೆ. ಜೊತೆಗೆ ಈ ಸಂಬಂಧ ಪರೀಕ್ಷೆಯನ್ನೂ ನಡೆಸಲಾಗುವುದು ಎಂದು ತಿಳಿಸಿದರು.

ನೈತಿಕ ಮೌಲ್ಯದ ಶಿಕ್ಷಣದ ಜೊತೆಗೆ ಮಕ್ಕಳ ವಯೋಮಾನಕ್ಕೆ ಅನುಗುಣವಾಗಿ 8ರಿಂದ 12ನೇ ತರಗತಿ ಮಕ್ಕಳಿಗೆ ಕಡ್ಡಾಯವಾಗಿ ವಾರದಲ್ಲಿ 2 ದಿನ ಲೈಂಗಿಕ ಶಿಕ್ಷಣ ನೀಡಲಾಗುವುದು. ಲೈಂಗಿಕ ಶಿಕ್ಷಣ ಎಂದರೆ ತಪ್ಪಾಗಿ ಭಾವಿಸುವಂತಿಲ್ಲ. ಮಕ್ಕಳ ವಯಸ್ಸಿಗೆ ಅನುಗುಣವಾಗಿ ದೇಹದಲ್ಲಿ ಬಿಡುಗಡೆಯಾಗುವ ಹಾರ್ಮೋನುಗಳು, ಸಹಜವಾಗಿ ಆಗುವ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಬದಲಾವಣೆಗಳ ಬಗ್ಗೆ ತಿಳಿವಳಿಕೆ ನೀಡಲಾಗುವುದು ಎಂದು ವಿವರಿಸಿದರು.

ಏತನ್ಮಧ್ಯೆ, ಶಾಲಾ ಶಿಕ್ಷಕರಿಗೆ ಬಡ್ತಿ ಅವಕಾಶಗಳ ಕೊರತೆಯ ಬಗ್ಗೆ ಪರಿಷತ್ತಿನಲ್ಲಿ ಚರ್ಚೆ ನಡೆಯಿತು. ವಿವಿಧ ಪಕ್ಷಗಳ ಶಾಸಕರು ಸಮಸ್ಯೆ ಪರಿಹರಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಬಿಜೆಪಿ ಶಾಸಕ ಸಶಿಲ್ ನಮೋಶಿ ಶಿಕ್ಷಕರ ದುಃಸ್ಥಿತಿ ವಿಚಾರವನ್ನು ಪ್ರಸ್ತಾಪಿಸಿದರು, ಬಡ್ತಿ ವಿಚಾರದಲ್ಲಿ ಶಿಕ್ಷಕರು ಇತರರಿಗಿಂತ ಹೆಚ್ಚು ಸಮಸ್ಯೆ ಎದುರಿಸುತ್ತಿದ್ದಾರೆ. ಮೊದಲ ದರ್ಜೆಯ ಸಹಾಯಕ-ಕಾರ್ಯದರ್ಶಿ ಸ್ಥಾನಕ್ಕೆ ಏರಬಹುದಾದರೂ, ಶಾಲಾ ಶಿಕ್ಷಕರು ವೃತ್ತಿ ಬೆಳವಣಿಗೆಯಿಲ್ಲದೆ ಸಮಸ್ಯೆ ಎದುರಿಸುವಂತಾಗಿದೆ ಎಂದು ಹೇಳಿದರು.

ಸರ್ಕಾರಿ ಅಧಿಕಾರಿ ಸುಧಾಕರ್ ಅವರು ಈ ಸಮಸ್ಯೆಯನ್ನು ಅಧ್ಯಯನ ಮಾಡಿ ವರದಿಯನ್ನು ಸಲ್ಲಿಸಿದ್ದಾರೆ, ಆದರೆ, ಅದರ ಶಿಫಾರಸುಗಳನ್ನು ಇನ್ನೂ ಜಾರಿಗೆ ತರಲಾಗಿಲ್ಲ ಎಂದು ಗಮನಸೆಳೆದರು.

ಚರ್ಚೆಯಲ್ಲಿ ಭಾಗವಹಿಸಿದ ಜೆಡಿಎಸ್ ಶಾಸಕ ಭೋಜೆ ಗೌಡ ಕೂಡ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಅಧ್ಯಕ್ಷ ಬಸವರಾಜ್ ಹೊರಟಿ ಕೂಡ ಸಮಸ್ಯೆ ಹಾಗೂ ಮಹತ್ವವನ್ನು ಒಪ್ಪಿಕೊಂಡರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಮಧು ಬಂಗಾರಪ್ಪ ಅವರು, ಸಮಸ್ಯೆಯನ್ನು ಪರಿಶೀಲಿಸಲು ಮತ್ತು ಪರಿಹಾರಗಳನ್ನು ಶಿಫಾರಸು ಮಾಡಲು ಸಮಿತಿಯನ್ನು ರಚಿಸಲಾಗುವುದು ಎಂದು ಸದನಕ್ಕೆ ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT