ರಾಜ್ಯ

ರಣಬಿಸಿಲಿಗೆ ಉತ್ತರ ಕರ್ನಾಟಕ ತತ್ತರ: ರಾಜ್ಯ ವಿಪತ್ತು ಎಂದು ಘೋಷಿಸಲು ತಜ್ಞರ ಆಗ್ರಹ

ಈ ಬಾರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಮತ್ತಷ್ಟು ಏರಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ಬೆನ್ನಲ್ಲೇ ಉಷ್ಣ ಅಲೆ ಸಮಸ್ಯೆಯನ್ನು ರಾಜ್ಯ ವಿಪತ್ತು ಎಂದು ಘೋಷಿಸಿ ಎಂದು ತಜ್ಞರು ಒತ್ತಾಯಿಸಿದ್ದಾರೆ.

ಬೆಂಗಳೂರು: ಈ ಬಾರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಮತ್ತಷ್ಟು ಏರಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ಬೆನ್ನಲ್ಲೇ ಉಷ್ಣ ಅಲೆ ಸಮಸ್ಯೆಯನ್ನು ರಾಜ್ಯ ವಿಪತ್ತು ಎಂದು ಘೋಷಿಸಿ ಎಂದು ತಜ್ಞರು ಒತ್ತಾಯಿಸಿದ್ದಾರೆ.

ಉತ್ತರ ಕರ್ನಾಟಕದ ಕಲಬುರಗಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಉಷ್ಣ ಅಲೆ ಕಾಣಿಸಿಕೊಂಡಿದ್ದು ತಾಪಮಾನ ಸುಮಾರು 43 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಇದು ಮಕ್ಕಳು, ವೃದ್ಧರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಇನ್ನು ಈ ಪ್ರದೇಶಗಳ ತಾಪಮಾನದಲ್ಲಿ ಮತ್ತಷ್ಟು ಏರಿಕೆಯಾಗುವ ಬಗ್ಗೆ IMD ಮುನ್ಸೂಚನೆ ನೀಡಿರುವುದು ಜನರನ್ನು ಕಂಗಾಲಾಗಿಸಿದೆ. ರಾಜ್ಯ ಸರ್ಕಾರ ಉಷ್ಣ ಅಲೆಯನ್ನು ರಾಜ್ಯ ವಿಪತ್ತು ಎಂದು ಘೋಷಿಸುವುದರಿಂದಾಗುವ ಪ್ರಯೋಜನಗಳು ಏನೆಂದರೆ, ಕರ್ನಾಟಕ ವಿಪತ್ತು ಪರಿಹಾರ ನಿಧಿಯಿಂದ ಸಂತ್ರಸ್ತರಿಗೆ ಪರಿಹಾರ ನೀಡಲು ಸಾಧ್ಯವಾಗಲಿದೆ. ಈ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲೆಗಳಿಗೆ ನೆರವಾಗಲಿದೆ. ಏತನ್ಮಧ್ಯೆ, ಅಧಿಕ ತಾಪಮಾನದಿಂದ ರಕ್ಷಣೆಗೆ ಜನರಲ್ಲಿ

ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ಮಾರ್ಗಸೂಚಿ

ಕಲ್ಯಾಣ ಕರ್ನಾಟಕ ಪ್ರದೇಶ ಈಗಾಗಲೇ ಮಕ್ಕಳಲ್ಲಿ ಅಪೌಷ್ಟಿಕತೆ ಮತ್ತು ಹೆಚ್ಚಿನ ತಾಯಂದಿರ ಮರಣ ಪ್ರಮಾಣದಿಂದ ಬಳಲುತ್ತಿದ್ದು, ಇಲ್ಲಿನ ಜನರಿಗೆ ಅಧಿಕ ತಾಪಮಾನದಿಂದ ರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಸಹಾಯ ಮಾಡಲು ಯಾವುದೇ ಕ್ರಿಯಾ ಯೋಜನೆ ಜಾರಿಯಲ್ಲಿಲ್ಲ ಎಂದು ತಜ್ಞರು ಹೇಳಿದ್ದಾರೆ. ಇದುವರೆಗೆ ಯಾವುದೇ ರೋಗಿಗಳು ಅಥವಾ ಜನ ಬಿಸಿಲಾಘಾತ ಅಥವಾ ಉಷ್ಣ ಅಲೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿಲ್ಲ ಎಂದು ಕಲಬುರಗಿ ಜಿಲ್ಲಾ ಆರೋಗ್ಯ ಅಧಿಕಾರಿ ಶರಣಬಸಪ್ಪ ಕ್ಯಾತನಾಳ್ ತಿಳಿಸಿದ್ದಾರೆ. ತಾಪಮಾನ ಏರಿಕೆಯಿಂದಾಗಿ ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಮನೆಯಿಂದ ಹೊರ ಹೋಗುವುದನ್ನು ತಪ್ಪಿಸುವಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

IPL 2026: ನಾವೇನು ಸಿನಿಮಾ ಸ್ಟಾರ್‌ಗಳಲ್ಲ: ವಿಮಾನ ನಿಲ್ಗಾಣದಲ್ಲಿ Riyan Parag ಗರಂ, ವೈಭವ್ ಸೂರ್ಯವಂಶಿ ಶಾಕ್! Video

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

IPL 2026: RCB vs GT ನಡುವಿನ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಆತಂಕ, ರಿಸರ್ವ್ ಡೇ ಕೂಡ ಇಲ್ಲ.. ಪಂದ್ಯ ರದ್ದಾದರೆ ಯಾರು ಫೈನಲ್ ಗೆ?

SCROLL FOR NEXT