ವಿಧಾನಸಭೆ ದೃಶ್ಯಗಳು 
ರಾಜ್ಯ

ವಿಧಾನಸಭೆ ಗದ್ದಲ, ಸ್ಪೀಕರ್‌ಗೆ 'ಅಗೌರವ': 6 ತಿಂಗಳ ಕಾಲ 18 BJP ಶಾಸಕರು ಅಮಾನತು; ಯುಟಿ ಖಾದರ್ ಆದೇಶ

ವಿಧಾನಸಭೆಯಲ್ಲಿ ಸ್ಪೀಕರ್ ಹುದ್ದೆಗೆ ಅಗೌರವ ತೋರಿದ ಬಿಜೆಪಿ ಶಾಸಕರನ್ನು ಸ್ಪೀಕರ್ ಯುಟಿ ಖಾದರ್ ಮುಂದಿನ 6 ತಿಂಗಳವರೆಗೂ ಕಲಾಪದಿಂದ ಅಮಾನತು ಮಾಡಿದ್ದಾರೆ.

ಬೆಂಗಳೂರು: ವಿಧಾನಸಭೆಯಲ್ಲಿ ಸ್ಪೀಕರ್ ಹುದ್ದೆಗೆ ಅಗೌರವ ತೋರಿದ ಬಿಜೆಪಿ ಶಾಸಕರನ್ನು ಸ್ಪೀಕರ್ ಯುಟಿ ಖಾದರ್ ಮುಂದಿನ 6 ತಿಂಗಳವರೆಗೂ ಕಲಾಪದಿಂದ ಅಮಾನತು ಮಾಡಿದ್ದಾರೆ.

ಬಿಜೆಪಿ ಶಾಸಕರಾದ ಭೈರತಿ ಬಸವರಾಜ, ಡಾ. ಶೈಲೇಂದ್ರ ಬೆಲ್ದಾಳೆ, ಮುನಿರತ್ನ, ಧೀರಜ್ ಮುನಿರತ್ನ, ಬಿಪಿ ಹರೀಶ್, ಡಾ. ಭರತ್ ಶೆಟ್ಟಿ, ಚಂದ್ರು ಲಮಾಣಿ, ಉಮಾನಾಥ ಕೋಟ್ಯಾನ್, ರಾಮಮೂರ್ತಿ, ದೊಡ್ಡನಗೌಡ ಪಾಟೀಲ್, ಡಾ. ಅಶ್ವತ್ಥ್ ನಾರಾಯಣ, ಯಶಪಾಲ್ ಸುವರ್ಣ, ಬಿ. ಸುರೇಶ್ ಗೌಡ, ಶರಣು ಸಲಗರ, ಚನ್ನಬಸಪ್ಪ, ಬಸವರಾಜ ಮತ್ತಿಮೂಡ, ಎಸ್ಆರ್ ವಿಶ್ವನಾಥ್ ಅವರನ್ನು ಮಾರ್ಷಲ್ ಗಳು ಕಲಾಪದಿಂದ ಹೊರಗೆ ತಂದು ಬಿಟ್ಟಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿರುವ ಹನಿಟ್ರ್ಯಾಪ್ ಹಾಗೂ ಮುಸ್ಲಿಂ ಮೀಸಲಾತಿ ವಿಚಾರಗಳು ವಿಧಾನಸಭೆ ಕಲಾಪದಲ್ಲಿ ಶುಕ್ರವಾರ ಹೈಡ್ರಾಮಾಕ್ಕೆ ಕಾರಣವಾಯಿತು. ಮುಸ್ಲಿಂ ಮೀಸಲಾತಿ ವಿಧೇಯಕದ ಕುರಿತು ಸರ್ಕಾರ ಚರ್ಚೆಗೆ ಮುಂದಾಯಿತು. ಇದೇ ವೇಳೆ ಬಿಜೆಪಿ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದರು. ಅಲ್ಲದೆ, ವಿಧೇಯಕದ ಪ್ರತಿಗಳನ್ನು ಹರಿದು ಸ್ಪೀಕರ್ ಮೇಲೆ ಎಸೆಯುತ್ತಾ, 'ಹನಿಟ್ರ್ಯಾಪ್ ಸರ್ಕಾರ' ಎಂದು ಘೋಷಣೆಗಳನ್ನು ಕೂಗಿದರು. ಇದೇ ವೇಳೆ ಸ್ಪೀಕರ್ ಸಹ ಶಾಸಕರು ತಾಳ್ಮೆ ವಹಿಸುವಂತೆ, ಕಲಾಪಕ್ಕೆ ಅಡ್ಡಿಪಡಿಸದಂತೆ ಮನವಿ ಮಾಡಿದರು. ಶಾಸಕರು ಪ್ರತಿಭಟನೆಯನ್ನು ಮುಂದುವರೆಸಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

ಕಾಂಗ್ರೆಸ್‌ನಲ್ಲಿ ಅವರ ಶಾಸಕರನ್ನ ಅವರೇ ಖರೀದಿ ಮಾಡುತ್ತಿದ್ದಾರೆ; ಒಬ್ಬರಿಗೆ 100 ಕೋಟಿ ರೂ ಆಫರ್‌; ಕಾರು, ಫ್ಲ್ಯಾಟು ಗಿಫ್ಟು!

ಖಾಸಗಿ ಕಟ್ಟಡಗಳಲ್ಲಿ ಮತಗಟ್ಟೆ ಸ್ಥಾಪನೆ ನಿಷ್ಪಕ್ಷಪಾತದಲ್ಲಿ ರಾಜಿ: ಚುನಾವಣಾ ಆಯೋಗಕ್ಕೆ ಮಮತಾ ಪತ್ರ

ಅಧಿಕಾರಕ್ಕೆ ಬಂದ ಬೆನ್ನಲ್ಲೇ ಬಿಹಾರದಲ್ಲಿ NDA ಸರ್ಕಾರ ಮಹತ್ವದ ಘೋಷಣೆ: ಸನಾತನ ಧರ್ಮ ಪ್ರಚಾರಕ್ಕಾಗಿ 38 ಜಿಲ್ಲೆಗಳಲ್ಲಿ ಸಂಚಾಲಕರ ನೇಮಕ!

ಗುಜರಾತ್‌: ಮತ್ತೊಬ್ಬ ಬಿಎಲ್‌ಒ ಶವವಾಗಿ ಪತ್ತೆ; ಬಾತ್ ರೂಮ್​​​​ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವು

SCROLL FOR NEXT