ವಿಧಾನಸಭೆ ದೃಶ್ಯಗಳು 
ರಾಜ್ಯ

ವಿಧಾನಸಭೆ ಗದ್ದಲ, ಸ್ಪೀಕರ್‌ಗೆ 'ಅಗೌರವ': 6 ತಿಂಗಳ ಕಾಲ 18 BJP ಶಾಸಕರು ಅಮಾನತು; ಯುಟಿ ಖಾದರ್ ಆದೇಶ

ವಿಧಾನಸಭೆಯಲ್ಲಿ ಸ್ಪೀಕರ್ ಹುದ್ದೆಗೆ ಅಗೌರವ ತೋರಿದ ಬಿಜೆಪಿ ಶಾಸಕರನ್ನು ಸ್ಪೀಕರ್ ಯುಟಿ ಖಾದರ್ ಮುಂದಿನ 6 ತಿಂಗಳವರೆಗೂ ಕಲಾಪದಿಂದ ಅಮಾನತು ಮಾಡಿದ್ದಾರೆ.

ಬೆಂಗಳೂರು: ವಿಧಾನಸಭೆಯಲ್ಲಿ ಸ್ಪೀಕರ್ ಹುದ್ದೆಗೆ ಅಗೌರವ ತೋರಿದ ಬಿಜೆಪಿ ಶಾಸಕರನ್ನು ಸ್ಪೀಕರ್ ಯುಟಿ ಖಾದರ್ ಮುಂದಿನ 6 ತಿಂಗಳವರೆಗೂ ಕಲಾಪದಿಂದ ಅಮಾನತು ಮಾಡಿದ್ದಾರೆ.

ಬಿಜೆಪಿ ಶಾಸಕರಾದ ಭೈರತಿ ಬಸವರಾಜ, ಡಾ. ಶೈಲೇಂದ್ರ ಬೆಲ್ದಾಳೆ, ಮುನಿರತ್ನ, ಧೀರಜ್ ಮುನಿರತ್ನ, ಬಿಪಿ ಹರೀಶ್, ಡಾ. ಭರತ್ ಶೆಟ್ಟಿ, ಚಂದ್ರು ಲಮಾಣಿ, ಉಮಾನಾಥ ಕೋಟ್ಯಾನ್, ರಾಮಮೂರ್ತಿ, ದೊಡ್ಡನಗೌಡ ಪಾಟೀಲ್, ಡಾ. ಅಶ್ವತ್ಥ್ ನಾರಾಯಣ, ಯಶಪಾಲ್ ಸುವರ್ಣ, ಬಿ. ಸುರೇಶ್ ಗೌಡ, ಶರಣು ಸಲಗರ, ಚನ್ನಬಸಪ್ಪ, ಬಸವರಾಜ ಮತ್ತಿಮೂಡ, ಎಸ್ಆರ್ ವಿಶ್ವನಾಥ್ ಅವರನ್ನು ಮಾರ್ಷಲ್ ಗಳು ಕಲಾಪದಿಂದ ಹೊರಗೆ ತಂದು ಬಿಟ್ಟಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿರುವ ಹನಿಟ್ರ್ಯಾಪ್ ಹಾಗೂ ಮುಸ್ಲಿಂ ಮೀಸಲಾತಿ ವಿಚಾರಗಳು ವಿಧಾನಸಭೆ ಕಲಾಪದಲ್ಲಿ ಶುಕ್ರವಾರ ಹೈಡ್ರಾಮಾಕ್ಕೆ ಕಾರಣವಾಯಿತು. ಮುಸ್ಲಿಂ ಮೀಸಲಾತಿ ವಿಧೇಯಕದ ಕುರಿತು ಸರ್ಕಾರ ಚರ್ಚೆಗೆ ಮುಂದಾಯಿತು. ಇದೇ ವೇಳೆ ಬಿಜೆಪಿ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದರು. ಅಲ್ಲದೆ, ವಿಧೇಯಕದ ಪ್ರತಿಗಳನ್ನು ಹರಿದು ಸ್ಪೀಕರ್ ಮೇಲೆ ಎಸೆಯುತ್ತಾ, 'ಹನಿಟ್ರ್ಯಾಪ್ ಸರ್ಕಾರ' ಎಂದು ಘೋಷಣೆಗಳನ್ನು ಕೂಗಿದರು. ಇದೇ ವೇಳೆ ಸ್ಪೀಕರ್ ಸಹ ಶಾಸಕರು ತಾಳ್ಮೆ ವಹಿಸುವಂತೆ, ಕಲಾಪಕ್ಕೆ ಅಡ್ಡಿಪಡಿಸದಂತೆ ಮನವಿ ಮಾಡಿದರು. ಶಾಸಕರು ಪ್ರತಿಭಟನೆಯನ್ನು ಮುಂದುವರೆಸಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್