ಕೆಜೆ.ಜಾರ್ಜ್ 
ರಾಜ್ಯ

ರಾಜ್ಯ ಸರ್ಕಾರ ವಿದ್ಯುತ್ ದರವನ್ನು ಏರಿಸಿಲ್ಲ, ಹೈಕೋರ್ಟ್ ಆದೇಶ ಪಾಲಿಸಲಾಗಿದೆ: ಕೆ.ಜೆ ಜಾರ್ಜ್ ಸ್ಪಷ್ಟನೆ

ವಿದ್ಯುತ್ ಪ್ರಸರಣ ನಿಗಮ ಮತ್ತು ಎಸ್ಕಾಂ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿ ಹಣದ ಪಾಲನ್ನು ಗ್ರಾಹಕರಿಂದ ಪಡೆಯಬಹುದು ಎಂಬ ಹೈಕೋರ್ಟ್ ಆದೇಶದ ಮೇರೆಗೆ ಕೆಇಆರ್‌ಸಿ ಈ ಆದೇಶ ಹೊರಡಿಸಿದೆ.

ಬೆಂಗಳೂರು: ವಿದ್ಯುತ್ ದರ ಏರಿಗೆ ನಿರ್ಧಾರ ರಾಜ್ಯ ಸರ್ಕಾರದ್ದಲ್ಲ, ಹೈಕೋರ್ಟ್‌ ತೀರ್ಪು ಪ್ರಕಾರ ಕೆಇಆರ್‌ಸಿ ವಿದ್ಯುತ್‌ ದರ ಏರಿಕೆ ಆದೇಶ ನೀಡಿದೆ ಎಂದು ಸಚಿವ ಕೆ.ಜೆ.ಜಾರ್ಜ್ ಅವರು ಗುರುವಾರ ಸ್ಪಷ್ಟನೆ ನೀಡಿದ್ದಾರೆ.

ವಿದ್ಯುತ್ ದರ ಏರಿಕೆ ಕುರಿತು ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದು, ಸಾರ್ವಜನಿಕರಿಂದಲೂ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ.

ಈ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯ ಸರಕಾರ ವಿದ್ಯುತ್ ದರವನ್ನು ಏರಿಸಿಲ್ಲ. ಪ್ರತಿ ಯೂನಿಟ್‍ಗೆ 36 ಪೈಸೆ ಏರಿಕೆ ಆಗಿರುವುದು ವಿದ್ಯುತ್ ದರದ ಏರಿಕೆಯಲ್ಲ. ಬದಲಿಗೆ ವಿದ್ಯುತ್ ಪ್ರಸರಣ ನಿಗಮ ಮತ್ತು ಎಸ್ಕಾಂ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿ ಹಣದ ಪಾಲನ್ನು ಗ್ರಾಹಕರಿಂದ ಪಡೆಯಬಹುದು ಎಂಬ ಹೈಕೋರ್ಟ್ ಆದೇಶದ ಮೇರೆಗೆ ಕೆಇಆರ್‌ಸಿ ಈ ಆದೇಶ ಹೊರಡಿಸಿದೆ. ಅದರಂತೆ, 2025-26ರ ಹಣಕಾಸು ವರ್ಷದಲ್ಲಿ ಪ್ರತಿ ಯೂನಿಟ್‍ಗೆ 36 ಪೈಸೆಯನ್ನು ಏರಿಸಿದೆ ಎಂದು ಹೇಳಿದರು.

ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ (ಕೆಇಬಿ)ಯನ್ನು ರದ್ದುಗೊಳಿಸಿ ಕೆಪಿಟಿಸಿಎಲ್ ಹಾಗೂ 5 ಎಸ್ಕಾಂಗಳನ್ನು ರಚಿಸಿದ ನಂತರ 2022ರ ಮಾರ್ಚ್‍ನಲ್ಲಿ ಕೆಇಆರ್‌ಸಿ ಮುಂದೆ ಪಿಂಚಣಿ ಮತ್ತು ಗ್ರಾಚ್ಯುಟಿ ಪಾಲನ್ನು ಗ್ರಾಹಕರಿಂದ ಪಡೆಯಲು ಆದೇಶಿಸುವಂತೆ ಅಂದಿನ ಬಿಜೆಪಿ ಸರಕಾರ ಮೊದಲ ಬಾರಿಗೆ ಕೆಇಆರ್‌ಸಿಗೆ ಪ್ರಸ್ತಾವನೆ ಸಲ್ಲಿಸಿತ್ತು. ಆಗ ಕೆಇಆರ್‌ಸಿ ಪ್ರಸ್ತಾವನೆಯನ್ನು ಪುರಸ್ಕರಿಸಿರಲಿಲ್ಲ. ಇದೀಗ ಹೈಕೋರ್ಟ್ ಆದೇಶದ ಮೇರೆಗೆ ಕೆಇಆರ್‌ಸಿ ಹೊಸ ಆದೇಶ ಹೊರಡಿಸಿದೆ ಎಂದು ತಿಳಿಸಿದರು.

ಪಿಂಚಣಿ ಮತ್ತು ಗ್ರಾಚ್ಯುಟಿ ಪಾಲನ್ನು ಗ್ರಾಹರಕರಿಂದ ಪಡೆಯುವ ಪ್ರಸ್ತಾವನೆಯನ್ನು ಪ್ರಶ್ನಿಸಿ ಎಫ್‍ಕೆಸಿಸಿಐ ಹೈಕೋರ್ಟ್‍ಗೆ ಮೆಟ್ಟಿಲೇರಿತ್ತು. ಈ ಅರ್ಜಿಯನ್ನು ಹೈಕೋರ್ಟ್ 2024ರ ಮಾ.25ರಂದು ತಿರಸ್ಕರಿಸಿತ್ತು. ಹೈಕೋರ್ಟ್ ಆದೇಶವನ್ನು ಮುಂದಿಟ್ಟುಕೊಂಡು 2024ರ ನ.30ರಂದು ಕೆಪಿಟಿಸಿಎಲ್ ಮತ್ತು ಎಸ್ಕಾಂಗಳು ಮತ್ತೆ ಕೆಇಆರ್‌ಸಿಗೆ ಅರ್ಜಿ ಸಲ್ಲಿಸಿದ್ದವು. ಅದನ್ನು ಪುರಸ್ಕರಿಸಿ ಕೆಇಆರ್‌ಸಿಆದೇಶ ಹೊರಡಿಸಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ವಿದ್ಯುತ್ ಸುಧಾರಣಾ ನಿಯಮಗಳಿಗೆ 2022ರಲ್ಲಿ ತಿದ್ದುಪಡಿ ತರಲಾಗಿತ್ತು. ಕಪಿಟಿಸಿಎಲ್‍ಮತ್ತು ಎಸ್ಕಾಂಗಳ ಸಿಬ್ಬಂದಿಯ ಪಿಂಚಣಿ, ಗ್ರಾಚ್ಯುಟಿಯ ಪಾಲನ್ನು ಗ್ರಾಹಕರಿಂದ ಪಡೆಯಲು ಕೆಇಆರ್‍ಸಿ ಮುಂದೆ ಅರ್ಜಿ ಸಲ್ಲಿಸಬಹುದು ಎಂದು ತಿದ್ದುಪಡಿಯಲ್ಲಿ ಹೇಳಲಾಗಿತ್ತು. ಇದರ ಆಧಾರದ ಮೇಲೆ ಮತ್ತು ಹೈಕೋರ್ಟ್ ಆದೇಶದಂತೆ ಕೆಇಆರ್‌ಸಿ ದರ ಹೆಚ್ಚಳ ಮಾಡಿದೆ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕನಕಪುರದಲ್ಲಿ ಮೆಡಿಕಲ್ ಕಾಲೇಜ್; ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಸಂಪುಟ ಅಸ್ತು

ADR report: ದೇಶದಲ್ಲಿ ಶೇ. 47 ರಷ್ಟು ಸಚಿವರ ಮೇಲೆ ಕ್ರಿಮಿನಲ್ ಆರೋಪ, ಬಿಲಿಯನೇರ್ ಪೈಕಿ ಕರ್ನಾಟಕಕ್ಕೆ ಮೊದಲ ಸ್ಥಾನ, ಡಿಕೆಶಿ ಎಷ್ಟನೇ ಶ್ರೀಮಂತ?

ಉಕ್ರೇನ್‌ನಲ್ಲಿ ಶಾಂತಿ ನೆಲೆಸಲು ಭಾರತದ ಮೇಲಿನ 'ಸುಂಕಾಸ್ತ್ರ' ನಿರ್ಣಾಯಕ: US ಸುಪ್ರೀಂ ಕೋರ್ಟ್‌ಗೆ ಡೊನಾಲ್ಡ್ ಟ್ರಂಪ್ ಮಾಹಿತಿ

NIRF ರ‍್ಯಾಂಕಿಂಗ್‌: ಸತತ 7ನೇ ವರ್ಷವೂ ಐಐಟಿ ಮದ್ರಾಸ್ ಗೆ ಅಗ್ರಸ್ಥಾನ; IISc ಬೆಂಗಳೂರಿಗೆ 2ನೇ ಸ್ಥಾನ

SCO Summit 2025: ಬೀಜಿಂಗ್‌, ಮಾಸ್ಕೋ ಮತ್ತು ವಾಷಿಂಗ್ಟನ್‌ ನಡುವೆ ಭಾರತದ ಜಾಗರೂಕ ನಡಿಗೆ (ಜಾಗತಿಕ ಜಗಲಿ)

SCROLL FOR NEXT