ಬೆಂಗಳೂರು ಮಳೆ- ಮಗು ಸಾವು online desk
ರಾಜ್ಯ

Bengaluru rains: ಮಳೆಗೆ ಬೈಕ್ ಮೇಲೆ ಮರ ಬಿದ್ದು 3 ವರ್ಷದ ಮಗು ಸಾವು!

ಸಂಜೆ ಸುರಿದ ಮಳೆಗೆ ಮರ ಮುರಿದು ಬೈಕ್ ಮೇಲೆ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿದ ಘಟನೆ ಜೀವನಹಳ್ಳಿಯ ಪೂರ್ವ ಪಾರ್ಕ್ ಬಳಿ ವರದಿಯಾಗಿದೆ.

ಬೆಂಗಳೂರು: ನಗರದಲ್ಲಿ ಸಂಜೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಾಲು ಸಾಲು ಅನಾಹುತಗಳು, ಅವಘಡಗಳು ಸಂಭವಿಸುತ್ತಿವೆ.

ಸಂಜೆ ಸುರಿದ ಮಳೆಗೆ ಮರ ಮುರಿದು ಬೈಕ್ ಮೇಲೆ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿದ ಘಟನೆ ಜೀವನಹಳ್ಳಿಯ ಪೂರ್ವ ಪಾರ್ಕ್ ಬಳಿ ವರದಿಯಾಗಿದೆ.

ರಕ್ಷಾ ಮೃತಪಟ್ಟಿರುವ ಮಗುವಾಗಿದ್ದು, ತಂದೆಯ ಜೊತೆ ಮಗು ಬೈಕ್‍ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಮರ ಬಿದ್ದು ಮಗುವಿಗೆ ಗಂಭೀರ ಗಾಯವಾಗಿತ್ತು. ತಕ್ಷಣ ಮಗುವನ್ನು ಫೋಷಕರು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದರು. ಮಗು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ.

ಪುಲಕೇಶಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪೊಲೀಸರು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ನಗರದ ಹಲವೆಡೆ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿದ್ದು, ಟ್ರಾಫಿಕ್ ಜಾಮ್ ಉಂಟಾಗಿದೆ.

ಯಲಹಂಕದ ಪ್ರದೇಶಗಳು ಜಲಾವೃತಗೊಂಡಿದ್ದು, ಮನೆಗಳಿಗೆ ನೀರು ನುಗ್ಗಿದೆ. ಮೋರಿಗಳಲ್ಲಿ ನೀರು ಹರಿಯದೇ ರಸ್ತೆಯಲ್ಲಿ ನಿಂತ ನೀರು ಜನರು ಪರದಾಡುವಂತಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT