ಬಿ.ಸುರೇಶ್ ಗೌಡ  
ರಾಜ್ಯ

'ಹನಿಟ್ರ್ಯಾಪ್' ವಿಚಾರ ಎತ್ತಲು ಯತ್ನಾಳ್ ಗೆ ಚೀಟಿ ಕೊಟ್ಟವರಾರು? ಬಿಜೆಪಿ ಶಾಸಕ ಬಿ.ಸುರೇಶ್ ಗೌಡ ಪ್ರಶ್ನೆ

ಸಿದ್ದರಾಮಯ್ಯ ಅವರ ಆಪ್ತರು ಯತ್ನಾಳ್ ಅವರಿಗೆ ಚಿಟ್ ಕಳುಹಿಸಿದ್ದು ಏಕೆ ಎಂಬ ಬಗ್ಗೆ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಏನಾಗುತ್ತಿದೆ ಎಂದು ಅವರು ಅಚ್ಚರಿ ವ್ಯಕ್ತಪಡಿಸಿದರು.

ಬೆಂಗಳೂರು: ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿರುವ ವಿಷಯವನ್ನು ಪ್ರಸ್ತಾಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಸದಸ್ಯರೊಬ್ಬರು ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸೂಚಿಸಿದ್ದಾರೆ ಎಂದು ತುಮಕೂರು ಗ್ರಾಮೀಣ ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಶುಕ್ರವಾರ ವಿಧಾನಸಭೆಯಲ್ಲಿ ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಅವರ ಆಪ್ತರು ಯತ್ನಾಳ್ ಅವರಿಗೆ ಚಿಟ್ ಕಳುಹಿಸಿದ್ದು ಏಕೆ ಎಂಬ ಬಗ್ಗೆ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಏನಾಗುತ್ತಿದೆ ಎಂದು ಅವರು ಅಚ್ಚರಿ ವ್ಯಕ್ತಪಡಿಸಿದರು

ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಿಸಿದಂತೆ, ಆಡಳಿತ ಪಕ್ಷದ ಕಡೆಯಿಂದ ಚೀಟಿ, ನಮ್ಮ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಂತು. ಅದಾದ ನಂತರವೇ ಯತ್ನಾಳ್ ಅವರು ಈ ವಿಚಾರಕ್ಕೆ ಸಂಬಂಧ ಮಾತನಾಡಲು ಆರಂಭಿಸಿದ್ದು ಎಂದು ಆರೋಪಿಸಿದ್ದಾರೆ.ಆಡಳಿತ ಪಕ್ಷದ ಯಾರು ಯತ್ನಾಳ್ ಅವರಿಗೆ ಚೀಟಿ ಕಳುಹಿಸಿಕೊಟ್ಟಿದ್ದು, ಅದರ ತನಿಖೆಯಾಗಬೇಕು. ಇದು ಎಲ್ಲರಿಗೂ ಅಗೌರವ ಕೊಡುವ ಮತ್ತು ಗಂಭೀರ ವಿಚಾರ ಇದಾಗಿದೆ. ಸ್ಪೀಕರ್ ಅವರು ಇದರ ಬಗ್ಗೆ ಗಮನ ಕೊಡಬೇಕು, ಇದನ್ನು ತನಿಖೆಗೆ ಒಳಪಡಿಸಬೇಕು. ಇದರಿಂದಾಗಿ, ಚೀಟಿ ಕಳುಹಿಸಿದ ಸಚಿವರು ಯಾರು ಎನ್ನುವುದು ರಾಜ್ಯದ ಜನತೆಗೆ ಗೊತ್ತಾಗಬೇಕು ಎಂದು ಸುರೇಶ್ ಗೌಡ ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಪಾರ್ಟಿಯಲ್ಲಿ ಏನಾಗುತ್ತಿದೆ ಎನ್ನುವುದು ಗೊತ್ತಾಗಬೇಕಿದೆ, ಇದನ್ನು ಕಡೆಗಣಿಸುವಂತಿಲ್ಲ. ಚೀಟಿ ಕಳುಹಿಸಿದವರು ಯಾರು, ಮುಖ್ಯಮಂತ್ರಿಗಳಿಗೆ ಆಪ್ತರಾಗಿರುವವರಾ ಎನ್ನುವ ಪ್ರಶ್ನೆಯನ್ನು ಸುರೇಶ್ ಗೌಡ ಎತ್ತಿದರು. ಆಗ ಮಧ್ಯ ಪ್ರವೇಶಿಸಿದ ಸಿಎಂ ಸಿದ್ದರಾಮಯ್ಯ, ಸುನೀಲ್ ಕುಮಾರ್ ಏನೋ ಈ ವಿಚಾರವನ್ನು ಪ್ರಸ್ತಾವಿಸಿದರು. ಎಲ್ಲರೂ ಈ ವಿಚಾರದ ಬಗ್ಗೆ ಮಾತನಾಡಬೇಕಾ ಎಂದು ಸುರೇಶ್ ಗೌಡ ಅವರನ್ನು ಕೂರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

SCROLL FOR NEXT