ನಂದಿನಿ ಹಾಲು ದರ ಏರಿಕೆ 
ರಾಜ್ಯ

KMF ಹಾಲಿನ ದರ ಮತ್ತೆ ಏರಿಕೆ ಸಾಧ್ಯತೆ: ಸಂಪುಟ ಸಭೆ ಬಳಿಕ ಅಧಿಕೃತ ಘೋಷಣೆ, ಭೀಮಾ ನಾಯ್ಕ್ ಸ್ಪಷ್ಟನೆ

ಕರ್ನಾಟಕ ಹಾಲು ಮಹಾ ಮಂಡಳ ಪ್ರತಿ ಲೀಟರ್ ಹಾಲಿಗೆ 5 ರೂ. ಏರಿಕೆ ಮಾಡಬೇಕು ಎಂದು ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದೆ ಎನ್ನಲಾಗಿದೆ.

ಬೆಂಗಳೂರು: ಇತ್ತೀಚೆಗಷ್ಟೇ ಏರಿಕೆಯಾಗಿದ್ದ ಹಾಲಿನ ದರ ಮತ್ತೆ ಏರಿಕೆಯಾಗುವ ಸಾಧ್ಯತೆ ಇದ್ದು, ಮುಂದಿನ ಸಂಪುಟ ಸಭೆ ಬಳಿಕ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆ ಇದೆ.

ನಂದಿನಿ ಹಾಲಿನ ದರ ಏರಿಕೆ ಬಗ್ಗೆ ಇಂದು ಸರ್ಕಾರ ತೀರ್ಮಾನ ಕೈಗೊಳ್ಳಲಿದ್ದು, ಹಾಲಿನ ದರ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಾಗುವ ಸಾಧ್ಯತೆ ಇವೆ ಎನ್ನಲಾಗಿದೆ. ಮೂಲಗಳ ಪ್ರಕಾರ ಕರ್ನಾಟಕ ಹಾಲು ಮಹಾ ಮಂಡಳ ಪ್ರತಿ ಲೀಟರ್ ಹಾಲಿಗೆ 5 ರೂ. ಏರಿಕೆ ಮಾಡಬೇಕು ಎಂದು ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದೆ.

ಹಾಲಿನ ದರ ಏರಿಕೆ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್, ಕೆಎಂಎಫ್ ಅಧ್ಯಕ್ಷ ಭೀಮಾನಾಯಕ್ ಹಾಗೂ ಉನ್ನತ ಅಧಿಕಾರಿಗಳ ಜತೆ ಸಭೆ ನಡೆಸಿದ್ದು, ಈ ಸಭೆಯಲ್ಲಿ ಹಾಲಿನ ದರ ಏರಿಕೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಕೆಎಂಎಫ್ ಸಲ್ಲಿಸಿರುವ 5 ರೂ. ಹಾಲಿನ ದರ ಏರಿಕೆ ಬದಲು ಪ್ರತಿ ಲೀಟರ್‌ಗೆ 3 ರೂ. ದರ ಹೆಚ್ಚಳ ಮಾಡಲು ಈ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಮೂಲಗಳು ಹೇಳಿವೆ.

ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ

ನಂದಿನಿ ಹಾಲಿನ ದರ (milk price) ಹೆಚ್ಚಳ ಮಾಡಬೇಕೆಂದು ನಿರ್ಧಾರವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಹಾಲಿನ ದರ ಹೆಚ್ಚಳ ಸಂಬಂಧ ಸಂಪುಟ ಸಭೆಯಲ್ಲಿ ನಿರ್ಧಾರವಾಗುತ್ತದೆ.

ಹಾಲಿನ ದರ ಎಷ್ಟು ಹೆಚ್ಚಳ ಮಾಡಬೇಕೆಂದು ಸಿಎಂ ಸಭೆ ಬಳಿಕ ಹೇಳುತ್ತಾರೆ. ಹಾಲು ಒಕ್ಕೂಟಗಳು, ಹಾಲು ಉತ್ಪಾದಕರ ಬೇಡಿಕೆ ಮನವರಿಕೆ ಮಾಡಲಾಗಿದೆ. ಹಾಲು ಉತ್ಪಾದಕರು ಮತ್ತು ಗ್ರಾಹಕರು 2 ಕಣ್ಣುಗಳು ಇದ್ದಂತೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಹಾಲಿನ ದರ ಕಡಿಮೆ ಇದೆ ಎಂದು ಹೇಳಿದ್ದಾರೆ.

ಈಗಾಗಲೇ ಸಾರಿಗೆ ಬಸ್ ದರ, ವಿದ್ಯುತ್, ಮೆಟ್ರೋ ಪ್ರಯಾಣ ದರಗಳು ಏರಿಕೆಯಾಗಿದ್ದು, ಹಾಲಿನ ದರ ಏರಿಕೆಯೂ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT