ಗೃಹ ಸಚಿವ ಜಿ ಪರಮೇಶ್ವರ್ 
ರಾಜ್ಯ

ನ್ಯಾ. ನಾಗಮೋಹನ್ ದಾಸ್ ಮಧ್ಯಂತರ ವರದಿ ಬಳಿಕ ಒಳಮೀಸಲಾತಿ ಜಾರಿಗೆ ಸರ್ಕಾರ ಕ್ರಮ: ಪರಮೇಶ್ವರ್‌

ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರ ನೇತೃತ್ವದಲ್ಲಿ ಕಾವೇರಿ ನಿವಾಸದಲ್ಲಿ ಸೋಮವಾರ ಸಭೆ ನಡೆಯಿತು.

ಬೆಂಗಳೂರು: ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ತನ್ನ ಮಧ್ಯಂತರ ವರದಿಯನ್ನು ಒಂದು ವಾರದಲ್ಲಿ ಸಲ್ಲಿಸುವುದಾಗಿ ತಿಳಿಸಿದ್ದು, ವರದಿ ಸಲ್ಲಿಕೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯನ್ನು ಜಾರಿಗೆ ತರಲು ಕ್ರಮ ಕೈಗೊಳ್ಳಲಿದ್ದಾರೆಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸೋಮವಾರ ಹೇಳಿದರು.

ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರ ನೇತೃತ್ವದಲ್ಲಿ ಕಾವೇರಿ ನಿವಾಸದಲ್ಲಿ ಸೋಮವಾರ ಸಭೆ ನಡೆಯಿತು.

ಸಭೆಯಲ್ಲಿ ಪರಮೇಶ್ವರ್, ಕೆ.ಎಚ್. ​​ಮುನಿಯಪ್ಪ, ಆರ್.ಬಿ. ತಿಮ್ಮಾಪುರ್, ಶಿವರಾಜ್ ತಂಗಡಗಿ, ಡಾ. ಎಚ್.ಸಿ. ಮಹಾದೇವಪ್ಪ, ಪ್ರಿಯಾಂಕ್ ಖರ್ಗೆ ಮತ್ತು ನ್ಯಾಯಮೂರ್ತಿ ನಾಗಮೋಹನ್ ದಾಸ್ ಸೇರಿದಂತೆ ಎಸ್‌ಸಿ ಸಚಿವರೊಂದಿಗೆ ಸಿಎಂ ತಮ್ಮ ನಿವಾಸದಲ್ಲಿ ಸಭೆ ನಡೆಸಿದರು.

ಸಭೆಯಲ್ಲಿ ಭಾಗವಹಿಸಿದ ನಂತರ, ಕಾಂಗ್ರೆಸ್ ಸರ್ಕಾರ ಆಂತರಿಕ ಮೀಸಲಾತಿ ಜಾರಿಗೆ ತರಲು ಬದ್ಧವಾಗಿದೆ ಎಂದು ಪರಮೇಶ್ವರ್ ಅವರು ಮಾಧ್ಯಮಗಳಿಗೆ ತಿಳಿಸಿದರು.

ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೊಳಿಸಲು ನಮ್ಮ ಸರಕಾರ ಬದ್ಧವಾಗಿದೆ. ನಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಇದನ್ನು ಹೇಳಿದ್ದೇವೆ. ಎಂಪೆರಿಕಲ್ ಡೇಟಾ ನಿರ್ಧಿಷ್ಟವಾದ ಅಭಿಪ್ರಾಯ ಬರುತ್ತದೆ ಎಂದು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಸಭೆಯಲ್ಲಿ ತಿಳಿಸಿದ್ದಾರೆಂದು ಹೇಳಿದರು.

ಸಚಿವ ಡಾ. ಹೆಚ್.ಸಿ.ಮಹದೆವಪ್ಪ ಅವರು ಮಾತನಾಡಿ, ಒಳ ಮೀಸಲಾತಿ ಸಂಬಂಧ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಹಿರಿಯ ಸಚಿವರ ಜೊತೆ ಸುಧೀರ್ಘ ಸಭೆ ನಡೆಸಲಾಗಿದೆ. ಒಳ‌ಮೀಸಲಾತಿ ಜಾರಿಗಾಗಿ ಈವರೆಗೂ ಆಗಿರುವ ಪ್ರಗತಿಯ ಮಾಹಿತಿಯನ್ನು ನಾಗ ಮೋಹನ್ ದಾಸ್ ಸಮಿತಿ ನೀಡಿದೆ. ಆದಷ್ಟು ಬೇಗ ಒಳಮೀಸಲಾತಿ ಜಾರಿಗೆ ಪ್ರಸ್ತಾಪ ಇಟ್ಟಿದ್ದಾರೆ ಎಂದು ಹೇಳಿದರು.

ದತ್ತಾಂಶ ಆಧಾರದ ಮೇಲೆ ಸುದೀರ್ಘ ಚರ್ಚೆ ಮಾಡಿದ್ದೇವೆ ನಾಗಮೋಹನ್ ದಾಸ್ ಅವರು ವಾರದೊಳಗೆ ಮಧ್ಯಂತರ ವರದಿ ನೀಡುತ್ತಾರೆ. ಆ ವರದಿ ಮೇಲೆ ಒಳಮೀಸಲಾತಿ ಜಾರಿ ಕುರಿತು ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಎಂಪೆರಿಕಲ್ ಡೇಟಾ‌ ಸೇರಿದಂತೆ ಎಲ್ಲ ವಿಷಯಗಳನ್ನು ಚರ್ಚೆ ಮಾಡಿ, ನಮ್ಮ ಗಮನಕ್ಕೆ ತಂದಿದ್ದಾರೆ.‌ ನಾವು ಒಳ ಮೀಸಲಾತಿ ಜಾರಿ ಮಾಡಬೇಕು ಎಂಬುದು ನಮ್ಮ ಸರಕಾರದ ಬದ್ಧತೆ. ಯಾವುದೇ ಸಮುದಾಯವೂ ಇಷ್ಟೇ ಶೇಕಡಾ ಮೀಸಲಾತಿ ಕೊಡುವಂತೆ ಬೇಡಿಕೆ ಇಟ್ಟಿಲ್ಲ. ಬಹುತೇಕ ಎಲ್ಲಾ ಇಲಾಖೆಗಳು ದತ್ತಾಂಶ ನೀಡಿವೆ. ಸುಪ್ರೀಂಕೋರ್ಟ್ ಮಾರ್ಗಸೂಚಿ ಪ್ರಕಾರ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ಒಳಮೀಸಲಾತಿ ಜಾರಿ ಆಗುವವರೆಗೂ ಬ್ಯಾಕ್‌ಲಾಗ್ ಹುದ್ದೆ, ಮುಂಬಡ್ತಿ, ನೇಮಕಾತಿ ಯಾವುದನ್ನೂ ಮಾಡುವುದಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT