ಶುಭಂ ಶೆಲ್ಕೆ ಬಂಧನ 
ರಾಜ್ಯ

ಬೆಳಗಾವಿಯಲ್ಲಿ ಮರಾಠಿ ಯುವಕನಿಗೆ ಸನ್ಮಾನ: MES ನಾಯಕ ಶುಭಂ ಶೆಲ್ಕೆ ಬಂಧನ

ಮರಾಠಿ ಭಾಷೆಯಲ್ಲಿಯೇ ಮಾತನಾಡುವಂತೆ ಕಿಣಿಯೆ ಗ್ರಾಮದ ಪಿಡಿಒಗೆ ತಿಪ್ಪಣ್ಣ ಡೋಕ್ರೆ ಎಂಬ ಮರಾಠಿ ಯುವಕ ಬೆದರಿಕೆ ಹಾಕಿದ್ದ. ಈತನಿಗೆ ಶುಭಂ ಶೆಲ್ಕೆ ಸನ್ಮಾನಿಸಿದ್ದರು.

ಬೆಳಗಾವಿ: ಮರಾಠಿ ಭಾಷೆಯಲ್ಲಿಯೇ ಮಾತನಾಡುವಂತೆ ಬೆಳಗಾವಿ ಸಮೀಪದ ಕಿಣಿಯೆ ಗ್ರಾಮದ ಪಿಡಿಒಗೆ ಬೆದರಿಕೆ ಹಾಕಿದ್ದ ಮರಾಠಿ ಯುವಕನಿಗೆ ಸನ್ಮಾನಿಸಿದ ಆರೋಪದ ಮೇಲೆ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ನಾಯಕ ಶುಭಂ ಶೆಲ್ಕೆ ಅವರನ್ನು ಬೆಳಗಾವಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಮರಾಠಿ ಭಾಷೆಯಲ್ಲಿಯೇ ಮಾತನಾಡುವಂತೆ ಕಿಣಿಯೆ ಗ್ರಾಮದ ಪಿಡಿಒಗೆ ತಿಪ್ಪಣ್ಣ ಡೋಕ್ರೆ ಎಂಬ ಮರಾಠಿ ಯುವಕ ಬೆದರಿಕೆ ಹಾಕಿದ್ದ. ಈತನಿಗೆ ಶುಭಂ ಶೆಲ್ಕೆ ಸನ್ಮಾನಿಸಿದ್ದರು. ಅಲ್ಲದೆ, ಕರ್ನಾಟಕದಲ್ಲಿರುವ ಕನ್ನಡ ಸಂಘಟನೆಗಳು ನಾಲಾಯಕ್‌’ ಎಂದು ವಿವಾದಾತ್ಮಕವಾಗಿ ಹೇಳಿಕೆ ಕೊಟ್ಟು, ಕನ್ನಡಿಗರು ಮತ್ತು ಮರಾಠಿಗರ ನಡುವಿನ ಸೌಹಾರ್ದತೆ ಕದಡಲು ಯತ್ನಿಸಿದ್ದರು ಎಂಬ ಆರೋಪ ಕೂಡ ಕೇಳಿ ಬಂದಿತ್ತು.

ಘಟನೆ ಬಳಿಕ ಪೊಲೀಸರು ತಿಪ್ಪಣ್ಣ ಡೋಕ್ರೆನನ್ನು ಬಂಧನಕ್ಕೊಳಪಡಿಸಿದ್ದ, ನಂತರ ಶುಭಂ ಶೆಲ್ಕೆಗಾಗಿ ಹುಡುಕಾಟ ಆರಂಭಿಸಿದ್ದರು. ಇದರಂತೆ ಸೋಮವಾರ ಮೀರಜ್‌ನಲ್ಲಿ ಶೆಲ್ಕೆ ಅವರನ್ನು ಬೆಳಗಾವಿ ಪೊಲೀಸರು ಬಂಧಕ್ಕೊಳಪಡಿಸಿದ್ದಾರೆ.

ಕನ್ನಡ ವಿರೋಧಿ ಹಾಗೂ ಭಾಷಾ ಸಾಮರಸ್ಯ ಕದಡುವ ಹೇಳಿಕೆ ನೀಡಿದ್ದಾರೆ ಎಂಬ ಆರೋಪದಡಿ ಶುಭಂ ಶೆಲ್ಕೆ ಅವರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT