ಅಮಾನತು (ಸಾಂಕೇತಿಕ ಚಿತ್ರ) 
ರಾಜ್ಯ

57 ಲಕ್ಷ ರೂ ದುರುಪಯೋಗ: ಲಿಂಗಸುಗೂರು ಪುರಸಭೆ ಮುಖ್ಯಾಧಿಕಾರಿ ರೆಡ್ಡಿ ರಾಯನಗೌಡ ಅಮಾನತು

ರೆಡ್ಡಿ ರಾಯನಗೌಡ ಮಸ್ಕಿ ಪುರಸಭೆ ಮುಖ್ಯಾಧಿಕಾರಿಯಾಗಿದ್ದ ವೇಳೆ ಕಚೇರಿಯ ನೂತನ ಕಟ್ಟಡಕ್ಕೆ ಮೀಸಲಿಟ್ಟ 57 ಲಕ್ಷ ರೂ ಅನುದಾನವನ್ನು ನಿಯಮ ಉಲ್ಲಂಘಿಸಿ ಕಚೇರಿ ಪೀಠೋಪಕರಣಕ್ಕೆ ಖರೀದಿಗಾಗಿ ಕೆಅರ್‌ಐಡಿಎಲ್‌ ಸಂಸ್ಥೆಗೆ ಪಾವತಿಸಿದ್ದರು.

ರಾಯಚೂರು: ಪಟ್ಟಣದ ಪುರಸಭೆಯ ಪೀಠೋಪಕರಣಗಳ ಖರೀದಿಯಲ್ಲಿ ಹಣ ದುರ್ಬಳಕೆ‌ ಹಾಗೂ ಕರ್ತವ್ಯಲೋಪ ಎಸಗಿದ ಆರೋಪ ಹಿನ್ನೆಲೆಯಲ್ಲಿ ಲಿಂಗಸುಗೂರು ಪುರಸಭೆಯ ಹಾಲಿ ಮುಖ್ಯಾಧಿಕಾರಿ ರೆಡ್ಡಿ ರಾಯನಗೌಡ ಅವರನ್ನು ಜಿಲ್ಲಾಧಿಕಾರಿ ಸೇವೆಯಿಂದ ಅಮಾನತುಗೊಳಿಸಿದ್ದಾರೆ.

ರೆಡ್ಡಿ ರಾಯನಗೌಡ ಮಸ್ಕಿ ಪುರಸಭೆ ಮುಖ್ಯಾಧಿಕಾರಿಯಾಗಿದ್ದ ವೇಳೆ ಕಚೇರಿಯ ನೂತನ ಕಟ್ಟಡಕ್ಕೆ ಮೀಸಲಿಟ್ಟ 57 ಲಕ್ಷ ರೂ. ಅನುದಾನವನ್ನು ನಿಯಮ ಉಲ್ಲಂಘಿಸಿ ಕಚೇರಿ ಪೀಠೋಪಕರಣಕ್ಕೆ ಖರೀದಿಗಾಗಿ ಕೆಅರ್‌ಐಡಿಎಲ್‌ ಸಂಸ್ಥೆಗೆ ಪಾವತಿಸಿದ್ದರು.

ಪಿಠೋಪಕರಣ ಖರೀದಿಯಲ್ಲಿ ಅವ್ಯವಹಾರ ನಡೆದ ಬಗ್ಗೆ ದಾಖಲಾದ ದೂರಿನ ಮೇಲೆ ತ‌ನಿಖೆ ನಡೆಸಿದ ಜಿಲ್ಲಾಧಿಕಾರಿ ನಿತೀಶ್ ಕೆ. ಅವರು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ರೆಡ್ಡಿ ಅವರನ್ನು ಅಮಾನತುಗೊಳಿಸಲು ಆದೇಶಿಸಿದ್ದಾರೆ.

ಪೀಠೋಪಕರಣ ಖರೀದಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಕರವೇ ಅಧ್ಯಕ್ಚ ದುರ್ಗರಾಜ ವಟಗಲ್ ಜಿಲ್ಲಾಧಿಕಾರಿಗೆ ದೂರು ನೀಡಿದ್ದರು. ದೂರು ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ತನಿಖೆ ನಡೆಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT