ಸಿಎಂ ಸಿದ್ದರಾಮಯ್ಯಗೆ ಮಧ್ಯಂತರ ವರದಿ ಸಲ್ಲಿಸಿದ ನ್ಯಾ. ನಾಗಮೋಹನ್ ದಾಸ್ ಆಯೋಗ 
ರಾಜ್ಯ

ಒಳಮೀಸಲಾತಿ:‌ ಸಿಎಂ ಸಿದ್ದರಾಮಯ್ಯಗೆ ಮಧ್ಯಂತರ ವರದಿ ಸಲ್ಲಿಸಿದ ನ್ಯಾ. ನಾಗಮೋಹನ್ ದಾಸ್ ಆಯೋಗ

2 ತಿಂಗಳಿಗಿಂತ ‌ಹೆಚ್ಚು ನಾನು ಹಾಗೂ ನನ್ನ ತಂಡ ಆಳವಾದ ಅಧ್ಯಯನ ಮಾಡಿ 104 ಪುಟಗಳ ಒಳಮೀಸಲಾತಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದೇವೆ.

ಬೆಂಗಳೂರು: ಒಳಮೀಸಲಾತಿ ಜಾರಿ ವಿಚಾರವಾಗಿ ನಡೆಯುತ್ತಿರುವ ಹೋರಾಟಗಳ ನಡುವೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ಮಧ್ಯಂತರ ವರದಿಯನ್ನು ಸಲ್ಲಿಸಲಾಗಿದೆ.

ಗುರುವಾರ ಕ್ಯಾಬಿನೆಟ್ ಸಭೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಅವರಿಗೆ ನ್ಯಾ. ನಾಗಮೋಹನ್ ದಾಸ್ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಮಧ್ಯಂತರ ವರದಿಯನ್ನು ಸಲ್ಲಿಸಿದರು.

ವರದಿ ಸಲ್ಲಿಕೆ ಬಳಿಕ ಮಾತನಾಡಿದ ಅವರು, ಎರಡು ತಿಂಗಳಿಗಿಂತ ‌ಹೆಚ್ಚು ನಾನು ಹಾಗೂ ನನ್ನ ತಂಡ ಆಳವಾದ ಅಧ್ಯಯನ ಮಾಡಿ 104 ಪುಟಗಳ ಒಳಮೀಸಲಾತಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಇದರಲ್ಲಿ ತರಾತುರಿ ಪ್ರಶ್ನೆ ಇಲ್ಲ. ಮಧ್ಯಂತರ ವರದಿ ಕೊಡಿ ಎಂದು ಸರ್ಕಾರ ನಮ್ಮನ್ನು ಕೇಳಲಿಲ್ಲ. ನಾವೇ ಸ್ವ ಇಚ್ಛೆಯಿಂದ ವರದಿಯನ್ನು ‌ನೀಡಿದ್ದೇವೆ ಎಂದರು.

ಮಧ್ಯಂತರ ವರದಿ ಕೊಡಿ ಎಂದು ಸರ್ಕಾರ ಕೇಳಿರಲಿಲ್ಲ. ಈ ವರದಿ ಮೇಲೆ ಸರ್ಕಾರ ಏನು ತೀರ್ಮಾನ ಮಾಡುತ್ತೊ ನೋಡೋಣ' ಎಂದರು.

ಉದ್ಯೋಗಕಾಂಕ್ಷಿಗಳಿಗೆ ಅನ್ಯಾಯ ಆಗಬಾರದು. ಅವರಿಗೆ ಶಾಶ್ವತವಾದ ಪರಿಹಾರ ಕೊಡಬೇಕು.‌ ಈ ಬಗ್ಗೆ ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ.‌ ವರದಿ ಬಗ್ಗೆ ಸರ್ಕಾರ ಏನೂ ಉತ್ತರ ಕೊಟ್ಟಿಲ್ಲ. ನೇಮಕಾತಿ ಬಗ್ಗೆ ನಾವು ಏನೂ ಸಲಹೆ ಕೊಟ್ಟಿಲ್ಲ ಎಂದರು.

ವರದಿ ನೀಡಿರುವ ಹಂತದಲ್ಲಿ ಬೇರೆ ಯಾವ ವಿಚಾರವನ್ನು ಹೇಳಲು ಸಾಧ್ಯವಿಲ್ಲ. ಸರ್ಕಾರದ ತೀರ್ಮಾನ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು. ಮಧ್ಯಂತರ ವರದಿ ನೀಡಿರುವುದು ಒಳ ಮೀಸಲಾತಿ ಜಾರಿಯ ವಿಳಂಬ ಧೋರಣೆಗೆ ಅನುಕೂಲ ಎಂಬ ವಾದವನ್ನು ನಿರಾಕರಣೆ ಮಾಡಿದ ಅವರು, ನನಗೆ ಹೀಗೆ ಅನ್ನಿಸಿಲ್ಲ ಎಂದು ಸ್ಪಷ್ಟಪಡಿಸಿದರು.

ಶಾಶ್ವತವಾದ ಪರಿಹಾರವನ್ನು ಕೊಡಬೇಕು ಎಂಬುದು ನನ್ನ ಆಸೆಯಾಗಿದೆ. ಸರ್ಕಾರ ಏನು ತೀರ್ಮಾನ ಮಾಡುತ್ತದೆ ಅದರ ಆಧಾರದಲ್ಲಿ ಅಂತಿಮ ವರದಿ ಸಲ್ಲಿಸುತ್ತೇನೆ. ಮಧ್ಯಂತರ ವರದಿ ನೀಡಿದ್ದೇನೆ, ಇದಕ್ಕೆ ಸರ್ಕಾರ ಉತ್ತರ ಕೊಟ್ಟಿಲ್ಲ. ಉತ್ತರದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದರು‌.

ಮಧ್ಯಂತರ ವರದಿ ಮೀಸಲಾತಿ ಕೊಡಲು ವಿಳಂಬ ಧೋರಣೆ ಮಾಡೋಕೆ ಅಲ್ಲ. ಶಾಶ್ವತ ಪರಿಹಾರ ಕೊಡೋದು ನಮ್ಮ ಇಚ್ಚೆ. ಈ ನಿಟ್ಟಿನಲ್ಲಿ ವರದಿ ಕೊಡಲಾಗಿದೆ. ಮಧ್ಯಂತರ ವರದಿ ಕೊಟ್ಟಿದ್ದೇನೆ‌. ಸರ್ಕಾರ ಏನ್ ಕ್ರಮ ತೆಗೆದುಕೊಳ್ಳುತ್ತೋ ನೋಡೋಣ. ಮಧ್ಯಂತರ ವರದಿಯಲ್ಲಿ ಏನಿದೆ ಅಂತ ನಾನು ಹೇಳೋಕೆ ಆಗೊಲ್ಲ. ಸರ್ಕಾರ ಏನ್ ಮಾಡುತ್ತೆ ಅಂತ ಸರ್ಕಾರವನ್ನ ಕೇಳಿ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT