ಬಜರಂಗ ದಳ (ಸಾಂದರ್ಭಿಕ ಚಿತ್ರ) 
ರಾಜ್ಯ

ಚಿಕ್ಕಮಗಳೂರು: ಅಂತರ್ ಧರ್ಮೀಯ ವಿವಾಹ ಬೆಂಬಲಿಸಿದ ವ್ಯಕ್ತಿಗೆ ಬೆದರಿಕೆ; ಬಜರಂಗ ದಳ ನಾಯಕರ ವಿರುದ್ಧ ಪ್ರಕರಣ

ಈ ಘಟನೆ ಬೆಳಕಿಗೆ ಬಂದ ನಂತರ, ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಮಹೇಶ್ ಅವರು 'ಲವ್ ಜಿಹಾದ್' ಅನ್ನು ಬೆಂಬಲಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಚಿಕ್ಕಮಗಳೂರು: ಅಂತರ್ ಧರ್ಮೀಯ ವಿವಾಹವನ್ನು ಬೆಂಬಲಿಸಿದ ವ್ಯಕ್ತಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಪೊಲೀಸರು ಬಜರಂಗ ದಳದ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಬಸವನಹಳ್ಳಿ ಪೊಲೀಸರು ಬಜರಂಗ ದಳ ಜಿಲ್ಲಾ ಮಟ್ಟದ ನಾಯಕರಾದ ಶ್ಯಾಮ್ ಮತ್ತು ಸಾಗರ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 353(1)(ಸಿ) ಮತ್ತು 353(2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಗೋಬಿ ಚಾಟ್ ಅಂಗಡಿಯ ಮಾಲೀಕ ಮಹೇಶ್ ಸಲ್ಲಿಸಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.

ಪೊಲೀಸರ ಪ್ರಕಾರ, ಮಹೇಶ್ ಚಿಕ್ಕಮಗಳೂರು ನಗರದಲ್ಲಿ ಗೋಬಿ ಅಂಗಡಿಯನ್ನು ಇಟ್ಟುಕೊಂಡಿದ್ದಾರೆ. ಮುಸ್ಲಿಂ ಸಮುದಾಯಕ್ಕೆ ಸೇರಿದ ಅವರ ಕೆಲಸಗಾರನೊಬ್ಬ ಹಿಂದೂ ಯುವತಿಯನ್ನು ಪ್ರೀತಿಸುತ್ತಿದ್ದ. ಈ ಬಗ್ಗೆ ತಿಳಿದ ಮಹೇಶ್, ನಾಲ್ಕು ದಿನಗಳ ಹಿಂದಷ್ಟೇ ಚಿಕ್ಕಮಗಳೂರು ನಗರದ ಸಬ್-ರಿಜಿಸ್ಟ್ರಾರ್ ಕಚೇರಿಯಲ್ಲಿ ಅವರ ವಿವಾಹಕ್ಕೆ ಸಹಾಯ ಮಾಡಿದ್ದರು. ಅವರ ಮದುವೆಗೆ ಸಾಕ್ಷಿಯಾಗಿ ಸಹಿ ಹಾಕಿದ್ದರು.

ಈ ಘಟನೆ ಬೆಳಕಿಗೆ ಬಂದ ನಂತರ, ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಮಹೇಶ್ ಅವರು 'ಲವ್ ಜಿಹಾದ್' ಅನ್ನು ಬೆಂಬಲಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಮಹೇಶ್ ವಿರುದ್ಧ ಸಾಮಾಜಿಕ ಮಾಧ್ಯಮ ಅಭಿಯಾನವನ್ನು ಆರಂಭಿಸಿ, ಅವರನ್ನು ದೇಶದ್ರೋಹಿ ಎಂದು ಕರೆದಿದ್ದಾರೆ ಎನ್ನಲಾಗಿದೆ.

ಹಿಂದೂ ಮಹಿಳೆ ಮತ್ತು ಮುಸ್ಲಿಂ ಪುರುಷನ ಮದುವೆಗೆ ಸಹಾಯ ಮಾಡುವ ಮೂಲಕ 'ಲವ್ ಜಿಹಾದ್'ಗೆ ಬೆಂಬಲ ನೀಡಿದ್ದಾರೆ. ಹಿಂದೂ ಸಮುದಾಯದ ಹಿತಾಸಕ್ತಿಗಳಿಗೆ ವಿರುದ್ಧವಾಗಿ ವರ್ತಿಸುವ ವ್ಯಕ್ತಿಗಳನ್ನು ಸಹಿಸಿಕೊಳ್ಳಬಾರದು ಎಂದು ಆರೋಪಿಗಳು ಜನರನ್ನು ಒತ್ತಾಯಿಸಿದ್ದಾರೆ.

ಇತ್ತೀಚೆಗೆ ಮೈಸೂರಿನ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿ ನಕಲಿ ವಿಳಾಸ ದಾಖಲೆ ಸಲ್ಲಿಸಿದ ಘಟನೆ ಬೆಳಕಿಗೆ ಬಂದಿತ್ತು. ನಕಲಿ ದಾಖಲೆಗಳನ್ನು ಸಲ್ಲಿಸುವುದು ಕಳವಳವನ್ನು ಹುಟ್ಟುಹಾಕಿತ್ತು ಮತ್ತು ಹಿಂದೂ ಸಂಘಟನೆಗಳು ಅಧಿಕಾರಿಗಳೊಂದಿಗೆ ಅಫಿಡವಿಟ್ ಅನ್ನು ಪ್ರಶ್ನಿಸಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

ಕಾಂಗ್ರೆಸ್‌ನಲ್ಲಿ ಅವರ ಶಾಸಕರನ್ನ ಅವರೇ ಖರೀದಿ ಮಾಡುತ್ತಿದ್ದಾರೆ; ಒಬ್ಬರಿಗೆ 100 ಕೋಟಿ ರೂ ಆಫರ್‌; ಕಾರು, ಫ್ಲ್ಯಾಟು ಗಿಫ್ಟು!

SCROLL FOR NEXT