ಸಾಂದರ್ಭಿಕ ಚಿತ್ರ 
ರಾಜ್ಯ

ದಾವಣಗೆರೆ ಬ್ಯಾಂಕ್ ದರೋಡೆ ಪ್ರಕರಣ: ತಮಿಳುನಾಡು ಮೂಲದ ಇಬ್ಬರು ಸೇರಿ ಐವರ ಬಂಧನ

ಬಂಧಿತರನ್ನು ತಮಿಳುನಾಡಿನ ವಿಜಯಕುಮಾರ್, ಅಜಯ್ ಕುಮಾರ್, ಹೊನ್ನಾಳಿಯ ಅಭಿಷೇಕ್ ಮತ್ತು ಚಂದ್ರಶೇಖರ್ ಹಾಗೂ ನ್ಯಾಮತಿಯ ಮಂಜುನಾಥ್ ಎಂದು ಗುರುತಿಸಲಾಗಿದೆ.

ದಾವಣಗೆರೆ: ನ್ಯಾಮತಿ ಪಟ್ಟಣದ ನೆಹರೂ ರಸ್ತೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) ಶಾಖೆಯಲ್ಲಿ 6 ತಿಂಗಳ ಹಿಂದೆ ನಡೆದ 17.705 ಕೆಜಿ ಚಿನ್ನದ ಆಭರಣಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಪೊಲೀಸರು ತಮಿಳುನಾಡಿನ ಇಬ್ಬರು ಸೇರಿದಂತೆ ಐವರನ್ನು ಬಂಧಿಸಿದ್ದಾರೆ.

ಬಂಧಿತರನ್ನು ತಮಿಳುನಾಡಿನ ವಿಜಯಕುಮಾರ್, ಅಜಯ್ ಕುಮಾರ್, ಹೊನ್ನಾಳಿಯ ಅಭಿಷೇಕ್ ಮತ್ತು ಚಂದ್ರಶೇಖರ್ ಹಾಗೂ ನ್ಯಾಮತಿಯ ಮಂಜುನಾಥ್ ಎಂದು ಗುರುತಿಸಲಾಗಿದೆ.

ಪರಾರಿಯಾಗಿರುವ ತಮಿಳುನಾಡಿನ ಮತ್ತೊಬ್ಬ ಆರೋಪಿ ಪರಮಾನಂದನನ್ನು ಬಂಧಿಸಲು ಶೋಧ ನಡೆಯುತ್ತಿದೆ. ಬಂಧಿತರಿಂದ 220 ಗ್ರಾಂ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರು ತಿಳಿಸಿದ್ದಾರೆ.

'ತಮಿಳುನಾಡಿನ ಮೂವರು ಹಲವು ವರ್ಷಗಳಿಂದ ನ್ಯಾಮತಿಯಲ್ಲಿ ವಾಸಿಸುತ್ತಿದ್ದರು ಮತ್ತು ಅವರು ಬೇಕರಿ ನಡೆಸುತ್ತಿದ್ದರು. ಆರೋಪಿಗಳನ್ನು ವಶಕ್ಕೆ ಪಡೆದು ತಾಂತ್ರಿಕ ಪುರಾವೆಗಳ ಆಧಾರದ ಮೇಲೆ ವಿಚಾರಣೆ ನಡೆಸಿದಾಗ ಈ ಕಳ್ಳತನ ಬೆಳಕಿಗೆ ಬಂದಿದೆ. ಬುಧವಾರ ರಾತ್ರಿ ಬಂಧನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಹೆಚ್ಚಿನ ವಿಚಾರಣೆ ನಡೆಯುತ್ತಿದೆ. "ಉಳಿದ ಚಿನ್ನಾಭರಣಗಳು ಎಲ್ಲಿವೆ ಎಂಬುದರ ಬಗ್ಗೆಯೂ ತನಿಖೆ ನಡೆಯುತ್ತಿದೆ" ಎಂದು ಅವರು ಹೇಳಿದರು.

ಅಕ್ಟೋಬರ್ 26 ರಂದು ನ್ಯಾಮತಿ ಪಟ್ಟಣದ ಎಸ್‌ಬಿಐ ಶಾಖೆಯನ್ನು ದರೋಡೆ ಮಾಡಲಾಗಿತ್ತು. ಕಳ್ಳರು ಕಿಟಕಿ ಒಡೆದು ಲಾಕರ್‌ನಲ್ಲಿ ಇರಿಸಲಾಗಿದ್ದ ಚಿನ್ನಾಭರಣಗಳನ್ನು ಕದ್ದೊಯ್ದರು. ತಮ್ಮ ಚಿನ್ನಾಭರಣಗಳನ್ನು ಒತ್ತೆ ಇರಿಸಿ ಸಾಲ ಪಡೆದಿದ್ದ 509 ಗ್ರಾಹಕರು ತಮ್ಮ ಆಭರಣಗಳನ್ನು ಕಳೆದುಕೊಂಡಿದ್ದಾರೆ. ಈ ಘಟನೆಯ ಬಗ್ಗೆ ನ್ಯಾಮತಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT