ಉದಯ್ ಮತ್ತು ಬಿ.ಎನ್ ಗರುಡಾಚಾರ್ 
ರಾಜ್ಯ

ಶಾಸಕ ಉದಯ ಗರುಡಾಚಾರ್ ಗೆ ಪಿತೃ ವಿಯೋಗ: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್ ಗರುಡಾಚಾರ್ ನಿಧನ

ಮಂಡ್ಯ ಜಿಲ್ಲೆ, ನಾಗಮಂಗಲ ತಾಲ್ಲೂಕು, ಬಿಂಡಿಗನವಿಲೆ ಗ್ರಾಮದ ಗರುಡಾಚಾರ್ ಅವರು ಪೊಲೀಸ್ ಇಲಾಖೆಯಲ್ಲಿ ವಿವಿಧ ಹಂತದ ಅಧಿಕಾರಿಯಾಗಿ ಕೆಲಸ ಮಾಡಿದ್ದರು.

ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್.ಗರುಡಾಚಾರ್(97) ಅವರು ಶುಕ್ರವಾರ ಮುಂಜಾನೆ ನಿಧನರಾದರು. ಮೃತರಿಗೆ ಶಾಸಕ ಉದಯ್ ಗರುಡಾಚಾರ್ ಸೇರಿದಂತೆ ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.

ಬಸವನಗುಡಿಯ ಕೃಷ್ಣ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮಂಡ್ಯ ಜಿಲ್ಲೆ, ನಾಗಮಂಗಲ ತಾಲ್ಲೂಕು, ಬಿಂಡಿಗನವಿಲೆ ಗ್ರಾಮದ ಗರುಡಾಚಾರ್ ಅವರು ಪೊಲೀಸ್ ಇಲಾಖೆಯಲ್ಲಿ ವಿವಿಧ ಹಂತದ ಅಧಿಕಾರಿಯಾಗಿ ಕೆಲಸ ಮಾಡಿದ್ದರು.

ಐಪಿಎಸ್ ಅಧಿಕಾರಿಯಾಗಿದ್ದ ಗರುಡಾಚಾರ್ ಅವರು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಯ (ಕೆಎಟಿ) ಸದಸ್ಯರಾಗಿಯೂ ಕೆಲಸ ಮಾಡಿದ್ದರು. ಮೃತರ ಅಂತಿಮ ಸಂಸ್ಕಾರವು ವಿಲ್ಸನ್ ಗಾರ್ಡನ್‌ನ ವಿದ್ಯುತ್ ಚಿತಾಗಾರದಲ್ಲಿ ಶನಿವಾರ ಸಂಜೆ ನಾಲ್ಕಕ್ಕೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಚಿಕ್ಕಪೇಟೆ ಬಿಜೆಪಿ ಶಾಸಕ ಉದಯ್ ಬಿ ಗರುಡಾಚಾರ್ ಅವರ ತಂದೆಯಾಗಿರುವ ಬಿ.ಎನ್.ಗರುಡಾಚಾರ್ ಅವರು ವಿವಿಧ ಜಿಲ್ಲೆಗಳಲ್ಲಿ ಪೊಲೀಸ್‌ ವರಿಷ್ಠಾಧಿಕಾರಿಯಾಗಿ, ಬೆಂಗಳೂರು ಮಹಾನಗರ ಡಿಸಿಪಿ, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಸೇವೆ ಸಲ್ಲಿಸಿದ್ದರು. ನಂತರ ಡಿಜಿ-ಐಜಿಪಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT