ಉದಯ್ ಮತ್ತು ಬಿ.ಎನ್ ಗರುಡಾಚಾರ್ 
ರಾಜ್ಯ

ಶಾಸಕ ಉದಯ ಗರುಡಾಚಾರ್ ಗೆ ಪಿತೃ ವಿಯೋಗ: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್ ಗರುಡಾಚಾರ್ ನಿಧನ

ಮಂಡ್ಯ ಜಿಲ್ಲೆ, ನಾಗಮಂಗಲ ತಾಲ್ಲೂಕು, ಬಿಂಡಿಗನವಿಲೆ ಗ್ರಾಮದ ಗರುಡಾಚಾರ್ ಅವರು ಪೊಲೀಸ್ ಇಲಾಖೆಯಲ್ಲಿ ವಿವಿಧ ಹಂತದ ಅಧಿಕಾರಿಯಾಗಿ ಕೆಲಸ ಮಾಡಿದ್ದರು.

ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್.ಗರುಡಾಚಾರ್(97) ಅವರು ಶುಕ್ರವಾರ ಮುಂಜಾನೆ ನಿಧನರಾದರು. ಮೃತರಿಗೆ ಶಾಸಕ ಉದಯ್ ಗರುಡಾಚಾರ್ ಸೇರಿದಂತೆ ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.

ಬಸವನಗುಡಿಯ ಕೃಷ್ಣ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮಂಡ್ಯ ಜಿಲ್ಲೆ, ನಾಗಮಂಗಲ ತಾಲ್ಲೂಕು, ಬಿಂಡಿಗನವಿಲೆ ಗ್ರಾಮದ ಗರುಡಾಚಾರ್ ಅವರು ಪೊಲೀಸ್ ಇಲಾಖೆಯಲ್ಲಿ ವಿವಿಧ ಹಂತದ ಅಧಿಕಾರಿಯಾಗಿ ಕೆಲಸ ಮಾಡಿದ್ದರು.

ಐಪಿಎಸ್ ಅಧಿಕಾರಿಯಾಗಿದ್ದ ಗರುಡಾಚಾರ್ ಅವರು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಯ (ಕೆಎಟಿ) ಸದಸ್ಯರಾಗಿಯೂ ಕೆಲಸ ಮಾಡಿದ್ದರು. ಮೃತರ ಅಂತಿಮ ಸಂಸ್ಕಾರವು ವಿಲ್ಸನ್ ಗಾರ್ಡನ್‌ನ ವಿದ್ಯುತ್ ಚಿತಾಗಾರದಲ್ಲಿ ಶನಿವಾರ ಸಂಜೆ ನಾಲ್ಕಕ್ಕೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಚಿಕ್ಕಪೇಟೆ ಬಿಜೆಪಿ ಶಾಸಕ ಉದಯ್ ಬಿ ಗರುಡಾಚಾರ್ ಅವರ ತಂದೆಯಾಗಿರುವ ಬಿ.ಎನ್.ಗರುಡಾಚಾರ್ ಅವರು ವಿವಿಧ ಜಿಲ್ಲೆಗಳಲ್ಲಿ ಪೊಲೀಸ್‌ ವರಿಷ್ಠಾಧಿಕಾರಿಯಾಗಿ, ಬೆಂಗಳೂರು ಮಹಾನಗರ ಡಿಸಿಪಿ, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಸೇವೆ ಸಲ್ಲಿಸಿದ್ದರು. ನಂತರ ಡಿಜಿ-ಐಜಿಪಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT