ಸಂಗ್ರಹ ಚಿತ್ರ 
ರಾಜ್ಯ

BWSSBಗೆ ಪ್ರತಿಷ್ಠಿತ ಗರಿ: ಸುಸ್ಥಿರ ನಗರ ನೀರು ನಿರ್ವಹಣೆಗೆ ವಿಶ್ವ ಜಲ 2025 ಪ್ರಶಸ್ತಿ!

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಮಾರ್ಚ್ 31ರಂದು ನವದೆಹಲಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರತಿಷ್ಠಿತ ವಿಶ್ವ ಜಲ 2025 ಪ್ರಶಸ್ತಿಯನ್ನು ಸ್ವೀಕರಿಸಲಿದೆ.

ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಮಾರ್ಚ್ 31ರಂದು ನವದೆಹಲಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರತಿಷ್ಠಿತ ವಿಶ್ವ ಜಲ 2025 ಪ್ರಶಸ್ತಿಯನ್ನು ಸ್ವೀಕರಿಸಲಿದೆ. BWSSB ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಮಾತನಾಡಿ, ಈ ಮನ್ನಣೆಯು ಬೆಂಗಳೂರಿಗೆ ಜಲ-ಸುರಕ್ಷಿತ ಭವಿಷ್ಯವನ್ನು ಖಾತ್ರಿಪಡಿಸಿಕೊಳ್ಳುವಲ್ಲಿ ನಮ್ಮ ಪ್ರಯತ್ನಗಳನ್ನು ಮುಂದುವರಿಸಲು ನಮಗೆ ಮತ್ತಷ್ಟು ಪ್ರೇರಣೆ ನೀಡುತ್ತದೆ ಎಂದರು.

ಯುನೆಸ್ಕೋ ಸಹಯೋಗದೊಂದಿಗೆ ನೀಡಲಾಗುವ ಈ ಪ್ರಶಸ್ತಿಗಳು, ಸಂಸ್ಥೆಗಳು, ಎನ್‌ಜಿಒಗಳು ಮತ್ತು ವ್ಯಕ್ತಿಗಳು ನೀರಿನ ಸಂಸ್ಕರಣೆ, ಮರುಬಳಕೆ ಮತ್ತು ಸಂರಕ್ಷಣೆಯಲ್ಲಿ ಮಾಡಿದ ಅಸಾಧಾರಣ ಪ್ರಯತ್ನಗಳನ್ನು ಗುರುತಿಸುತ್ತವೆ. BWSSB ಸುಸ್ಥಿರ ನಗರ ನೀರು ಸರಬರಾಜು ಮತ್ತು ನಿರ್ವಹಣೆಗೆ ನೀಡಿದ ಅತ್ಯುತ್ತಮ ಕೊಡುಗೆಗಳಿಗಾಗಿ ಪ್ರಶಸ್ತಿಯನ್ನು ಪಡೆಯುತ್ತಿದೆ.

ಮನೋಹರ್ ಅವರ ಪ್ರಕಾರ, ಅಂತರ್ಜಲ ಮಟ್ಟವನ್ನು ಹೆಚ್ಚಿಸಲು 23 ಕೆರೆಗಳನ್ನು ಸಂಸ್ಕರಿಸಿದ ನೀರಿನಿಂದ ತುಂಬಿಸುವುದು, ಭಾರತೀಯ ವಿಜ್ಞಾನ ಸಂಸ್ಥೆಯ ಸಹಯೋಗದೊಂದಿಗೆ ಅಂತರ್ಜಲ ಕಾರ್ಯಪಡೆಯನ್ನು ಸ್ಥಾಪಿಸಿರುವುದು ಮತ್ತು 3,000 ಮಳೆನೀರು ಕೊಯ್ಲು ಟ್ಯಾಂಕ್‌ಗಳನ್ನು ನಿರ್ಮಿಸುವುದು ಸೇರಿದಂತೆ ಹಲವಾರು ಕ್ರಮಗಳನ್ನು ಕೈಗೊಂಡಿದ್ದಕ್ಕಾಗಿ BWSSB ಗೆ ಪ್ರಶಸ್ತಿ ಲಭಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT